ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ವೆಜಿಟೇಬಲ್ ಇಡ್ಲಿ:-

ಸಾದಾ ಇಡ್ಲಿಗಿಂತ ಭಿನ್ನವಾಗಿರುವ ವೆಜಿಟೇಬಲ್ ಇಡ್ಲಿ ಮಕ್ಕಳಿಗೆ ಹೇಳಿ ಮಾಡಿಸಿದ ವೆರೈಟಿ. ಇಡ್ಲಿ ಹಿಟ್ಟಿಗೆ ಕ್ಯಾರೆಟ್ ತುರಿ, ಬಟಾಣಿ, ಬೀನ್ಸ್ ತುಣುಕು ಇತ್ಯಾದಿಗಳನ್ನು ಹಾಕಿ ಇದನ್ನು ಮಾಡಲಾಗುತ್ತದೆ.
ಸ್ಟಫ್ಡ್ ಇಡ್ಲಿ:-

ವಿವಿಧ ತರಕಾರಿಗಳು, ಮೊಳಕೆ ಬಂದ ಕಾಳುಗಳ ಸ್ಟಫ್ಫಿಂಗ್ ಮಾಡಿ ಬೇಯಿಸಲಾಗುವ ಈ ಇಡ್ಲಿ ಬೆಳಗ್ಗಿನ ಬ್ರೇಕ್ಫಾಸ್ಟ್ಗೆ ಬೆಸ್ಟ್. ಇದರ ಹೂರಣಕ್ಕೆ ಮೊಳಕೆ ಬಂದ ಕಾಳುಗಳು, ಶುಂಠಿ ತುರಿ, ಪುದೀನ ಎಲೆ, ಹಸಿ ಮೆಣಸಿನಕಾಯಿ ಚಟ್ನಿ ಇತ್ಯಾದಿಗಳನ್ನು ಬಳಸುತ್ತಾರೆ.
ಅಕ್ಕಿ-ಹೆಸರುಬೇಳೆ ಇಡ್ಲಿ:-
ಉದ್ದಿನಬೇಳೆಯಿಂದ ಮಾಡಿದ ಇಡ್ಲಿಗಿಂತ ಸ್ವಲ್ಪ ಭಿನ್ನ ರುಚಿ ಹೊಂದಿರುವ ಈ ಇಡ್ಲಿಯನ್ನು ಅಕ್ಕಿ ಮತ್ತು ಹೆಸರುಬೇಳೆ ಹಾಕಿ ಮಾಡುತ್ತಾರೆ. ಇಧರ ಹಿಟ್ಟಿಗೆ ಕ್ಯಾರೆಟ್ ತುರಿ, ಸ್ಟ್ರಿಂಗ್ ಆನಿಯನ್ ಮುಂತಾದ ತರಕಾರಿಗಳನ್ನೂ ಹಾಕುತ್ತಾರೆ. ಹೆಸರುಬೇಳೆ ಹಾಕಿದ ಕಾರಣ ಬಣ್ಣವೂ ಕೊಂಚ ಹಳದಿಯಾಗಿರುತ್ತದೆ.
ರವೆ ಇಡ್ಲಿ:-

ಅಕ್ಕಿ ಇಡ್ಲಿಯನ್ನು ಇಷ್ಟಪಡದವರಿಗೆ ರವೆ ಇಡ್ಲಿ ಬೆಸ್ಟ್. ಇದನ್ನು ತುಂಬಾ ಸುಲಭವಾಗಿ ತಯಾರಿಸಬಹುದು. ಮೈಕ್ರೊವೇವ್ನಲ್ಲಿಟ್ಟು ಕೂಡಾ ಮಾಡಬಹುದು.
ಪೆಪ್ಪರ್ ಇಡ್ಲಿ:-

ಸಣ್ಣ ಸಣ್ಣ ಬಟನ್ ಇಡ್ಲಿಗಳನ್ನು ಅಥವಾ ಇಡ್ಲಿಯ ತುಣುಕುಗಳನ್ನು ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೇಟೊ ಒಗ್ಗರಣೆಗೆ ಹಾಕಿ ಮಾಡಿದ ಈ ಇಡ್ಲಿ ರುಚಿಯಲ್ಲಿ ಕೊಂಚ ಖಾರವಿರುತ್ತದೆ. ಸಪ್ಪೆ ಇಡ್ಲಿ ಇಷ್ಟವಿಲ್ಲದವರು ಪೆಪ್ಪರ್ ಇಡ್ಲಿಯನ್ನು ಟ್ರೈ ಮಾಡಬಹುದು.
ಓಟ್ಸ್ ಇಡ್ಲಿ:-

ಈಗಿನ ಫಿಟ್ನೆಸ್ ಫ್ರೀಕ್ ಪೀಳಿಗೆಗೆ ಇಷ್ಟವಾಗುವ ಇಡ್ಲಿ ವೆರೈಟಿಯಿದು. ಅಕ್ಕಿ ಮತ್ತು ಉದ್ದು ಹಾಕಿದ ಇಡ್ಲಿ ತಿಂದರೆ ದೇಹ ತೂಕ ಹೆಚ್ಚುತ್ತದೆ ಎನ್ನುವವರು ಓಟ್ಸ್ ಇಡ್ಲಿಯತ್ತ ಮುಖ ಮಾಡುತ್ತಿದ್ದಾರೆ. ಇದು ಆರೋಗ್ಯಕ್ಕೂ ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಮಂಡ್ಯ ಫಲಿತಾಂಶ ಪ್ರತಿ ಕ್ಷಣವೂ ಕುತೂಹಲ ಮೂಡಿಸುತ್ತಿದೆ. ಬಹುತೇಕ ಕ್ಷೇತ್ರಗಳಲ್ಲಿ ಮತಗಳ ಅಂತರ ನೋಡಿ ಯಾರು ಗೆಲ್ಲಬಹುದು ಎಂಬ ನಿರ್ಧಾರಕ್ಕೆ ಈಗಾಗಲೇ ಬಂದಾಗಿದೆ. ಆದ್ರೆ, ಮಂಡ್ಯದಲ್ಲಿ ಮಾತ್ರ ಯಾರೂ ಗೆಲ್ಲಬಹುದು ಎಂಬುದರ ಬಗ್ಗೆ ಸುಳಿವು ಕೂಡ ಸಿಕ್ತಿಲ್ಲ. ಒಂದು ಹಂತದಲ್ಲಿ ಸುಮಲತಾ ಮುನ್ನಡೆ ಸಾಧಿಸಿದರೇ, ಮತ್ತೊಂದು ಹಂತದಲ್ಲಿ ನಿಖಿಲ್ ಕುಮಾರ್ ಮುನ್ನಡೆ ಕಾಯ್ದುಕೊಳ್ಳುತ್ತಿದ್ದಾರೆ. ಈ ಕಡೆ ಮತಗಳ ಅಂತರವೂ ಅಧಿಕವಾಗುತ್ತಿಲ್ಲ. ಕೇವಲ ನೂರು, ಇನ್ನೂರು, ಮುನ್ನೂರು ಹೀಗೆ ಕೆಲವೇ ಮತಗಳ ಅಂತರ ಮಾತ್ರ ಇಲ್ಲಿ ಕಂಡು ಬರುತ್ತಿದೆ….
ಕರ್ನಾಟಕ ಹೈ ಕೋರ್ಟ್ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್ನ ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!