ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ.
ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು ಅದೀಗ ವೈರಲ್ ಆಗಿದೆ. ಉದ್ಯೋಗಿ ತನ್ನ ಕಡೆಯ ಕೆಲಸದ ದಿನ ಜೀವತಾವಧಿಯಲ್ಲಿ ಸದಾ ನೆನಪಿರಬೇಕು ಎಂದು ಈ ರೀತಿಯ ವೇಷದಲ್ಲಿ ಹೋಗಿದ್ದಾನೆ.
ಫೋಟೋ ಮತ್ತು ವಿಡಿಯೋದಲ್ಲಿ, ಉದ್ಯೋಗಿ ತನ್ನ ಜಾಗದಲ್ಲಿ ಕುಳಿತು ಅದೇ ವೇಷದಲ್ಲಿ ಕೆಲಸ ಮಾಡುತ್ತಿರುವುದು. ಜೊತೆಗೆ ಕಿವಿಗೆ ಹೆಡ್ಫೋನ್ ಹಾಕಿರುವುದು ಮತ್ತು ತನ್ನ ಸಹೋದ್ಯೋಗಿಗೆ ಸಲಹೆ ಕೊಡುತ್ತಿರುವುದನ್ನು ನೋಡಬಹುದಾಗಿದೆ. ಇನ್ನೂ ವಿಡಿಯೋದಲ್ಲಿ ತನ್ನ ಸಹೋದ್ಯೋಗಿಗಳಿಗೆ ಕಡೆದ ದಿನದ ಹಿನ್ನೆಲೆಯಲ್ಲಿ ಸ್ವೀಟ್ ನೀಡುತ್ತಿರುವುದನ್ನು ನೋಡಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…