ಸುದ್ದಿ

ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

37

ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.

ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.

ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.

ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ರಾಜಕೀಯ

    ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ

    ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ  ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದ ಬಿಜೆಪಿ ಇದೀಗ ಎರಡನೇ ಪಟ್ಟಿಯನ್ನು 24 ಗಂಟೆಗಳಲ್ಲಿಯೇ ಎರಡನೇ ಪಟ್ಬಿ ಬಿಡುಗಡೆ ಮಾಡಿದೆ. ದೇವರ ಹಿಪ್ಪರಗಿ- ಸೋಮನಗೌಡ ಪಾಟೀಲ್‌, ಬಸವನ ಬಾಗೇವಾಡಿ- ಎಸ್‌.ಕೆ ಬೆಳ್ಳುಬ್ಬಿ, ಇಂಡಿ- ಕಾಸಾಗೌಡ ಬಿರಾದಾರ್‌, ಗುರಮಿಠಕಲ್-‌ ಲಲಿತಾ ಅನಾಪುರ್‌, ಬೀದರ್-‌ ಈಶ್ವರ್‌ ಸಿಂಗ್‌ ಠಾಕೂರ್‌, ಭಾಲ್ಕಿ- ಪ್ರಕಾಶ್‌ ಖಂಡ್ರೆ, ಗಂಗಾವತಿ- ಪರಣ್ಣ ಮುನವಳ್ಳಿ, ಕಲಘಟಗಿ-…

  • ಆರೋಗ್ಯ

    ಹುಷಾರ್.!ನೀವು ಕಬಾಬ್ ತಿನ್ನುತ್ತಿರಾ.? ಹಾಗಾದ್ರೆ ತಪ್ಪದೆ ಈ ಮಾಹಿತಿ ನೋಡಿ…

    ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್‌ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ  ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ಸುದ್ದಿ

    ಗಾರ್ಮೆಂಟ್ಸ್ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ …!

    ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ  ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ  ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ  ನಡೆದ  ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…