ಸುದ್ದಿ

ಆಷಾಢದಲ್ಲೂ ಮದುವೆ ಸಂಬ್ರಮ ಹೊಸ ಜೀವನಕ್ಕೆ ಕಾಲಿಟ್ಟ 32 ನವಜೋಡಿಗಳು

43

ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ.

ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಶುಕ್ರವಾರ ಸಾಮೂಹಿಕ ವಿವಾಹ ನೆರವೇರಿಸಿದ್ದಾರೆ. ಈ ಕಲ್ಯಾಣೋತ್ಸವದಲ್ಲಿ 32 ನವಜೋಡಿಗಳು ಗೃಹಸ್ಥಾಶ್ರಮಕ್ಕೆ ಕಾಲಿಟ್ಟರು.

ಈ ವಿವಾಹ ಮಹೋತ್ಸವದಲ್ಲಿ ಅಂತರ್‌ಧರ್ಮ ವಿವಾಹವಾದ ಹಿಂದೂ ಹಾಗೂ ಇಸ್ಲಾಂ ಧರ್ಮದ ಒಂದು ಜೋಡಿಯು ಎಲ್ಲರ ಗಮನ ಸೆಳೆಯಿತು. ಅಲ್ಲದೇ ಸಾಮೂಹಿಕ ವಿವಾಹದಲ್ಲಿ ಅಂತರ್ ಧರ್ಮ ವಿವಾಹದ ಮೂಲಕ ನವಜೀವನಕ್ಕೆ ಪಾದಾರ್ಪಣೆ ಮಾಡಿದ ಹಸೀನ ಕೂಡ ತಮ್ಮ ಜೀವನಕ್ಕೆ ಬಸವತತ್ವವನ್ನು ಅಳವಡಿಸಿಕೊಂಡಿದ್ದಾರೆ.

ಸಮಾಜ ಪರಿವರ್ತನೆಗಾಗಿ ಅಂತರ್ಜಾತಿ ಹಾಗೂ ಅಂತರ್‌ಧರ್ಮ ವಿವಾಹಗಳಿಂದಾದರೂ ಈ ಮೌಢ್ಯ ನಿಷೇಧವಾಗಬೇಕೆಂದು ನೂತನ ವಧು ಹಸೀನ ಹೇಳಿದ್ದಾರೆ.ಮುರುಘಾ ಮಠದಲ್ಲಿ ನಡೆದ ಸರಳ ಸಾಮೂಹಿಕ ಕಲ್ಯಾಣ ಮಹೋತ್ಸವ ಜಾತಿ ಧರ್ಮಗಳನ್ನು ಮೀರಿ ನಿಂತಿದೆ. ಆಷಾಢ ಶುಕ್ರವಾರ ಅನ್ನೋದನ್ನೂ ಲೆಕ್ಕಿಸದೇ 32 ನವಜೋಡಿಗಳು ನವಜೀವನಕ್ಕೆ ಕಾಲಿಡುವ ಮೂಲಕ ಮೌಢ್ಯ ನಿಷೇಧಕ್ಕೆ ಪ್ರೇರಣೆಯಾದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಹುಷಾರ್…..!ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯ ಸೆರೆ…!

    ಕಂಪ್ಯೂಟರ್‌ಗಳು, ಕಂಪನಿಯ ಸರ್ವರ್‌ಗಳನ್ನು ಹ್ಯಾಕ್‌ ಮಾಡುವುದನ್ನು ಕೇಳಿದ್ದೇವೆ. ಆದರೆ ಸೂರತ್‌ನಲ್ಲಿ ಕಂಡುಕೇಳರಿಯದ ಪ್ರಕರಣವೊಂದು ವರದಿಯಾಗಿದೆ. ಮನೆಯೊಂದರ ಬೆಡ್‌ರೂಂನಲ್ಲಿ ಅಳವಡಿಸಲಾಗಿದ್ದ ಸ್ಮಾರ್ಟ್‌ ಟೀವಿಯನ್ನು ಹ್ಯಾಕ್‌ ಮಾಡಿ, ದಂಪತಿಯ ಲೈಂಗಿಕ ಕ್ರಿಯೆ ದೃಶ್ಯಗಳನ್ನು ಸೆರೆ ಹಿಡಿದು, ಅಶ್ಲೀಲ ಜಾಲತಾಣಕ್ಕೆ ಅಪ್‌ಲೋಡ್‌ ಮಾಡಲಾಗಿರುವ ಘಟನೆ ನಡೆದಿದೆ. ತನ್ನದೇ ವಿಡಿಯೋ ಆನ್‌ಲೈನ್‌ ಅಶ್ಲೀಲ ಜಾಲತಾಣದಲ್ಲಿರುವುದನ್ನು ಪತಿ ನೋಡಿದ ಬಳಿಕ ಈ ಅಕ್ರಮ ಬಯಲಾಗಿದೆ. ಇದು ಸ್ಮಾರ್ಟ್‌ ಟೀವಿ ಬಳಕೆದಾರರಿಗೆ ಎಚ್ಚರಿಕೆ ಗಂಟೆಯಾಗಿದೆ. ಪೊಲೀಸರಿಗೆ ದೂರು ನೀಡಿದರೆ ಮುಜುಗರಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಕಾರಣಕ್ಕೆ ಈ…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಸಿನಿಮಾ

    ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

    ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…