ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…