ವಿಶೇಷ ಲೇಖನ

ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

1604

ವ್ಯಕ್ತಿ ತಾನು ದುರ್ಬಲನೆಂದು ಭಾವಿಸಬಾರದು. ಏಕೆಂದರೆ ದೌರ್ಬಲ್ಯವೇ ಪಾಪ, ದೌರ್ಬಲ್ಯವೇ ಮರಣ. ತನ್ನ ದೌರ್ಬಲ್ಯವನ್ನು ಗೆಲ್ಲುವುದರಿಂದ ಎಲ್ಲವನ್ನೂ ಸಾಧಿಸಬಹುದು. ತನ್ನ ಆತ್ಮವಿಶ್ವಾಸದಿಂದ ಎದ್ದು ನಿಲ್ಲಬೇಕು, ತನ್ನೊಳಗಿರುವ ದೈವಿಕತೆಯನ್ನು ಹೊರಚಿಮ್ಮಬೇಕು…” ಇಂಥ ಘೋಷಣೆಯೊಂದಿಗೆ ದೇಶದ ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ ಮಹಾನ್‌ ವ್ಯಕ್ತಿಗಳೇ ಸ್ವಾಮಿ ವಿವೇಕಾನಂದರು.

ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ  ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

 

ವಿವೇಕಾನಂದ ಹೆಸರೇ ಅದ್ಭುತ! ಬಹುಷ: ಸ್ವಾಮಿ ವಿವೇಕಾನಂದರ ಹೆಸರು ಮಾಡಿರುವಷ್ಟು ಪರಿಣಾಮವನ್ನು ಬೇರೆ ಯಾವುದೇ ಹೆಸರು ಮಾಡಿರಲು ಸಾಧ್ಯವಿಲ್ಲ! ದೇಶದ ಹಿತಕ್ಕಾಗಿ, ದೇಶದ ಕೀರ್ತಿಯನ್ನು ಸನಾತನ ಧರ್ಮವಾದ ಹಿಂದೂ ಧರ್ಮದ ಮಹತ್ವನ್ನು ವಿದೇಶಿ ರಾಷ್ಟ್ರಗಳಿಗೆ ತಿಳಿಸಲು ತಮ್ಮ ಜೀವನವನ್ನೇ ಮುಡಿಪಿಟ್ಟ ವಿವೇಕಾನಂದರು.

ನರೇಂದ್ರನಿಂದ ಹಿಡಿದು ವಿವೇಕಾನಂದರವರಿಗೆ :- 

ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863 ಜನವರಿ 12ರಂದು ಕಲ್ಕತ್ತೆಯಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ‍

ಕ್ರಿಶ್ಚಿಯನ್ನರ ನಾಡಿನಲ್ಲಿ ವಿವೇಕಾನಂದ :-

ಅಮೇರಿಕಾದ ಚಿಕಾಗೋದಲ್ಲಿ ನಡೆದ ‘ಸರ್ವ ಧರ್ಮ ಸಮ್ಮೇಳನ’ದಲ್ಲಿ ಮಾತನಾಡಿ, ‘ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ಮೌಲ್ಯ’ದ ಪರಿಚಯ ಮಾಡಿಕೊಟ್ಟ ವಿವೇಕಾನಂದರ ಭಾಷಣ ವಿಶ್ವ ವಿಖ್ಯಾತವಾಗಿದೆ. ‘ಅಮೇರಿಕಾದ ಸಹೋದರ ಸಹೋದರಿಯರೇ’ ಎಂಬ ಸಂಬೋಧನೆಯೊಂದಿಗೆ ಪ್ರಾರಂಭವಾದ ವಿವೇಕಾನಂದ ಭಾಷಣ ಅಲ್ಲಿನ ವಿಜ್ಞಾನಿಗಳು, ಪಂಡಿತರು, ಅಲ್ಲಿ ನೆರೆದಿದ್ದ ಅನ್ಯ ಧರ್ಮೀಯರೆಲ್ಲರೂ ತಲೆದೂಗುವಂತೆ ಮಾಡಿಬಿಟ್ಟರು.

ಆ ದಿನ ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದ ವೇದಿಕೆ ಮೆಲೆ ನಿಂತು, ಕೇವಲ ಮೂರೂವರೆ ನಿಮಿಷಗಳಲ್ಲಿ  ಇಡೀ ಅಮೆರಿಕಾ ದೇಶವನ್ನೇ ಇವರ ತುಪಾಕಿಯಂತ ಮಾತಿನ ಮೋಡಿಗೆ ತಲೆ ಬಾಗುವಂತೆ ಮಾಡಿದ್ರು.ಪಾಶ್ಚಾತ್ಯರಿಂದ ‘ವಿಚಿತ್ರ ಧರ್ಮ’ ಎಂದು ಕರೆಯಿಸಿಕೊಂಡಿದ್ದ ಹಿಂದೂ ಧರ್ಮದ ನಿಜವಾದ ಅರ್ಥವನ್ನು,ಸಿದ್ಧಾಂತಗಳನ್ನು ಪಾಶ್ಚಾತ್ಯರಿಗೆ ಮನದಟ್ಟು ಮಾಡುವಲ್ಲಿ ಸ್ವಾಮಿ ವಿವೇಕಾನಂದ ಯಶಸ್ವಿಯಾದರು.

ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಎತ್ತಿ ಹಿಡಿದ ಯೋಗಿ ಸ್ವಾಮಿ ವಿವೇಕಾನಂದರ ಮಾತುಗಳು ಎಂದೆಂದಿಗೂ ಯುವ ಪೀಳಿಗೆಗೆ ಆದರ್ಶದ ನುಡಿಮುತ್ತುಗಳು.

  • ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ.
  • ಏಳಿರಿ,ಕಾರ್ಯೋನ್ಮುಖರಾಗಿರಿ ಈ ಬದುಕಾದರೂ ಎಷ್ಟು ದಿನ,ಮಾನವರಾಗಿ ಹುಟ್ಟಿದ ಮೇಲೆ ಎನನ್ನಾದರೂ ಸಾಧಿಸಿ.
  • ನಾವು ಏನನ್ನು ಮಾಡುವುದಿಲ್ಲ.ಯಾರಾದರೂ ಮಾಡಿದರೆ ಅವರಲ್ಲಿ ತಪ್ಪು ಕಂಡು ಹಿಡಿಯುತ್ತೇವೆ.ಇದು ನಮ್ಮ ಯುವಜನಾಂಗದ ಅಶಾಂತಿಗೆ ಕಾರಣ.ಅದನ್ನು ಬಿಡಿ ಎಲ್ಲರಿಗೂ ಅವಕಾಶವಿರಲಿ ಎಂಬ ಮನೋಭಾವ ತಾಳಿರಿ.
  • ನಮ್ಮ ಪ್ರಥಮ ಕರ್ತವ್ಯವೇ ನಮ್ಮಲ್ಲಿ ಆತ್ಮನಂದನೆ ಇರಕೂಡದು.ನಾವು ಬದುಕಿನಲ್ಲಿ ಮುಂದುವರಿಯಬೇಕಾದರೆ ಮೊದಲು ನಮ್ಮಲ್ಲಿ ಆತ್ಮಶೃದ್ದೆ ಇರಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಆರೋಗ್ಯ

    ಗಂಟಲು ನೋವಿಗೆ ಮನೆಯಲ್ಲೇ ಔಷಧಿ ಸುಲಭವಾಗಿ ತಯಾರಿಸ ಬಹುದು ಈ ಲೇಖನ ಓದಿ ತಿಳಿಯಿರಿ….

    ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ

    ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…