ವಿಸ್ಮಯ ಜಗತ್ತು

ಇಂತಹ ಮೈ ಜುಮ್ಮೆನಿಸುವ ಶವ ಸಂಸ್ಕಾರ ನೀವು ಎಲ್ಲಿಯೂ ನೋಡಿಲ್ಲ, ಕೇಳಿಲ್ಲ!ಗುಂಡಿಗೆ ಇರೋರು ಮಾತ್ರ ಓದಿ…

710

ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ.

ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ.

ನಾಲ್ಕನೆಯ ಶವ ಸಂಸ್ಕಾರ ಮಾಡುವ ರೀತಿ ಕೇಳಿದ್ರೆ ನಿಮ್ಮ ಮೈ ಮನ ಜುಮ್ ಎನ್ನಿಸದೇ ಇರಲ್ಲ. ಈ ಭಯಂಕರ ಪದ್ಧತಿ ಏನು ಗೊತ್ತಾ?

ಈ ಪದ್ದತಿಯ ಪ್ರಕಾರ ಸತ್ತ ಹೆಣದ ದೇಹವನ್ನು ರಣಹದ್ದುಗಳಿಗೆ ಆಹಾರವಾಗಿ ಹಾಕುತ್ತಾರೆ. ಮನುಷ್ಯನಿಗೆ ದೇವರು ನೀಡಿದ ದೇಹ ಸತ್ತ ಮೇಲೂ ಪ್ರಾಣಿ ಪಕ್ಷಿಗಳ ಆಹಾರವಾದರೆ ಜನ್ಮ ಸಾರ್ಥಕವಾಗುತ್ತದೆಂದು ಇವರ ನಂಬಿಕೆ.

ಹೀಗೇಕೆ ಮಾಡುತ್ತಾರೆ ಗೊತ್ತಾ..? ಶಾಕ್ಯನೆಂಬ ಬೌದ್ಧ ಮುನಿ ಈ ವಿಧಾನವನ್ನು ಆರಂಭಿಸಿದನಂತೆ. ಆತ ತನ್ನ ದೇಹದ ಮಾಂಸವನ್ನು ಪಾರಿವಾಳಗಳಿಗೆ ಆಹಾರವಾಗಿ ನೀಡಿದನೆಂಬ ಕಥೆಯೇ ಇದಕ್ಕೆ ಪ್ರೇರಣೆಯಾಗಿದೆ.

ಈ ಶವ ಸಂಸ್ಕಾರದಲ್ಲೂ ಇದೆ ಹಲವು ನಿಯಮಗಳು!

ಇಂತಹ ಸಂಸ್ಕಾರವನ್ನು ಗರ್ಭಿಣಿಯರು, ಹದಿನೆಂಟಕ್ಕಿಂತ ಕಡಿಮೆ ವಯಸ್ಸಿನವರು, ವ್ಯಾಧಿ ಮತ್ತು ಅಪಘಾತದಿಂದ ಸತ್ತವರ ದೇಹಗಳಿಗೆ ಮಾಡುವುದಿಲ್ಲ. ಇಂತಹ ಶವ ಸಂಸ್ಕಾರಕ್ಕೆ ಯಾವುದೇ ಬಲವಂತವಿರುವುದಿಲ್ಲ. ಸಾಯುವುದಕ್ಕೂ ಮೊದಲು ಆ ವ್ಯಕ್ತಿ ಯಾವ ರೀತಿ ಶವ ಸಂಸ್ಕಾರ ಬೇಕು ಎಂದು ಹೇಳಿರುತ್ತಾನೋ ಅದೇ ರೀತಿ ಶವ ಸಂಸ್ಕಾರ ಮಾಡಲಾಗುತ್ತದೆ.

ಇಲ್ಲಿನ ಪದ್ಧತಿ ಪ್ರಕಾರ ಯಾವುದೇ ವ್ಯಕ್ತಿ ಸತ್ತಾಗ ಮೃತ ದೇಹವನ್ನು ಮೂರೂ ದಿನಗಳವರೆಗೆ ಹಾಗೆಯೇ ಇಡುತ್ತಾರೆ. ಕಾರಣ ಆತ್ಮವು ಮತ್ತೆ ಅವನ ದೇಹ ಪ್ರವೇಶಿಸಿ ಅವನು ಬದುಕಬಹುದೆಂಬ ನಂಬಿಕೆ ಅವರಲ್ಲಿದೆ. ನಂತರ ನಾಲ್ಕನೆಯ ದಿನ ಶವ ಸಂಸ್ಕಾರದ ವಿಧಿ ವಿಧಾನಗಳು ನೆರವೇರಿದ ಬಳಿಕ, ಶವದ ಮಂಡಿಗಳನ್ನು ಮತ್ತು ಕೈಗಳನ್ನು ಹಿಂಭಾಗಕ್ಕೆ ಜೋಡಿಸಿ ಕಟ್ಟಿ ಬಿಳಿ ಬಣ್ಣದ ಬಟ್ಟೆಯಲ್ಲಿ ಬಿಗಿದು ಹೆಗಲಿನಲ್ಲಿ ಹೊತ್ತು, ಮೃತನ ಮಕ್ಕಳು ಅಥವಾ ಬಂಧುಗಳು ಬೆಟ್ಟದಲ್ಲಿರುವ ಕಲ್ಲುಬಂಡೆಯ ಮೇಲೆ ಅದನ್ನು ಕೆಳಗಿಳಿಸಿದ ಬಳಿಕ ಹಿಂತಿರುಗಿ ನೋಡದೆ ಮರಳುತ್ತಾರೆ.

ನಂತರ ಲಾಮಾ ಗುರುಗಳು ಪ್ರಾರ್ಥನಾ ಚಕ್ರವನ್ನು ತಿರುಗಿಸುತ್ತ ಕೈಯಲ್ಲಿರುವ ಕಂಚಿನ ಗಂಟೆಯನ್ನು ಬಡಿಯಲಾರಂಭಿಸುತ್ತಾರೆ. ರಣಹದ್ದುಎಷ್ಟೇ ದೂರದಲ್ಲಿದ್ದರೂ ಈ ಗಂಟೆಯ ನಾದ ಕೇಳಿದ ಕೂಡಲೇ ಅಲ್ಲಿಗೆ ಧಾವಿಸಿ, ಶವದ ಸುತ್ತಲೂ ಹಾರಾಡಿ ಮೃತ ದೇಹವನ್ನು ತಿನ್ನುತ್ತವೆ.ಇವರ ಪ್ರಕಾರ ರಣ ಹದ್ದುಗಳು ತಿಂದ ವ್ಯಕ್ತಿಯ ಆತ್ಮ ನೇರವಾಗಿ ಸ್ವರ್ಗಕ್ಕೆ ಹೋಗುತ್ತದಂತೆ.ಅವರಿಗೆ ಮರು ಜನ್ಮವಿರುದಿಲ್ಲವಂತೆ.

ಕೆಲವೇ ನಿಮಿಷಗಳಲ್ಲಿ ಸಣ್ಣ ಸಣ್ಣ ಮೂಳೆಯ ಚೂರುಗಳು, ಕೂದಲು, ಚರ್ಮದ ಚಿಕ್ಕತುಂಡುಗಳ ಹೊರತು ಉಳಿದುದೆಲ್ಲವನ್ನೂ ಹದ್ದುಗಳು ತಿಂದು ಮುಗಿಸುತ್ತವೆ. ಬಳಿಕ ಅಸ್ಥಿಪಂಜರವನ್ನು ಸುತ್ತಿಗೆಯಿಂದ ಗುದ್ದಿ ಹುಡಿ ಮಾಡಿ ಹುರಿದ ಬಾರ್ಲಿಯ ಹಿಟ್ಟು, ಯಾಕ್ ಬೆಣ್ಣೆ, ಹಾಲು ಈ ಯಾವುದಾದರೊಂದನ್ನು ಬೆರೆಸಿ ಹದ್ದುಗಳಿಗೆಸೆದಾಗ ಅದನ್ನೂ ಖಾಲಿ ಮಾಡುತ್ತವೆ.

ಮಾಂಸ ಭಕ್ಷಣೆಯಿಂದ ಪವಿತ್ರ ಹದ್ದುಗಳಿಗೆ ಯಾವ ವ್ಯಾಧಿಯೂ ಬರದಿರಲಿ ಎಂದು ಇಂಥ ಮಿಶ್ರಣ ಮಾಡುವರಂತೆ. ಹದ್ದುಗಳು ಶವ ಭಕ್ಷಿಸದಿದ್ದರೆ ಅಪಶಕುನವೆಂದು ನಂಬುತ್ತಾರೆ. ಈ ಹದ್ದುಗಳು ಮಾನವ ಶವದ ಹೊರತು ಬೇರೆ ಯಾವ ಆಹಾರವನ್ನೂ ತಿನ್ನುವುದಿಲ್ಲವಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮಗೆ ಕಷ್ಟಕರವಾದುದು ಏನೂ ಇಲ್ಲ. ಇಚ್ಛಾಬಲ ತೋರಿಸಿ, ಜೀವನದಲ್ಲಿ ಗೆದ್ದು ಬರುವ ಶಕ್ತಿ ಲಭ್ಯವಾಗಲಿದೆ. ಇದಕ್ಕೆ ಹಿನ್ನೆಲೆಯಾಗಿ ನಿಮ್ಮ ಕುಟುಂಬದವರ ಸಹಕಾರ ಮತ್ತು ಆಶೀರ್ವಾದ ಇರುತ್ತದೆ ಎಂಬುದನ್ನು ಮರೆಯದಿರಿ. …

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…

  • ಸುದ್ದಿ

    ಕನ್ನಡಿಗರಿಗೆ ಹೆಚ್ಚು ಉದ್ಯೋಗ ಆದ್ಯತೆ ಸಿಎಂ ಯಡಿಯೂರಪ್ಪ ಭರವಸೆ…!

    ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…

  • ಸಿನಿಮಾ

    (Video)ಕೇವಲ ಒಂದೇ ಗಂಟೆಯಲ್ಲಿ ಯೂಟ್ಯೂಬ್ ನಲ್ಲಿ ಚಿಂದಿಯಾಗಿದೆ ನಟ ಸಾರ್ವಭೌಮ ಚಿತ್ರದ ಟ್ರೈಲರ್!

    ನಟ ಪುನೀತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟ ಸಾರ್ವಭೌಮ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರ ಅಪ್ಪು ಅಭಿಮಾನಿಗಳ ನಿರೀಕ್ಷೆಯನ್ನು ದ್ವಿಗುಣಗೊಳಿಸಿದೆ. ಚಿತ್ರದಲ್ಲಿ ನಟ ಪುನೀತ್ ರಾಜ್ ಕುಮಾರ್ ಮತ್ತು ನಟಿ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಹಿರಿಯ ನಟಿ ಬಿ ಸರೋಜಾದೇವಿ, ಅಚ್ಯುತ್, ರವಿಶಂಕರ್ ಅವರು ಪೋಷಕ ಪಾತ್ರದಲ್ಲಿ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಚಿತ್ರದಲ್ಲಿ ಹಾಸ್ಯ ನಟ ಚಿಕ್ಕಣ್ಣ ಅವರ ಪಾತ್ರವೂ ವಿಶೇಷವಾಗಿದೆ. ಇಂದು ಬೆಳಗ್ಗೆ 10 ಗಂಟೆಗೆ ಚಿತ್ರದ ಟ್ರೈಲರ್…

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.