News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

122

ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ.

ವೃಷಭ:-

ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ ಕಾರ್ಯಸಿದ್ಧಿ. ದಿನಾಂತ್ಯದಲ್ಲಿ ಶುಭವಾರ್ತೆ ಇದೆ. ನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಉತ್ಸಾಹ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಸರ್ಕಾರಿ ನೌಕರರಿಗೆ ಕಿರುಕುಳ ಉಂಟಾದೀತು. ಕುಟುಂಬ ಸಮೇತರಾಗಿ ಕುಲದೇವತಾ ದರ್ಶನ.

 

ಮಿಥುನ:

ವಿದ್ಯುದುಪಕರಣಗಳ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಏರಿಳಿತ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ. ಸ್ವತಂತ್ರ ಉದ್ಯಮದಲ್ಲಿ ಯಶಸ್ಸು. ಅಧಿಕಾರಿ ವರ್ಗದವರಿಗೆ ಮುಂಭಡ್ತಿ ಇರುತ್ತದೆ. ನಿಮ್ಮ ಬಗ್ಗೆ ಅನಾವಶ್ಯಕವಾಗಿ ಕಿರಿಕಿರಿಯನ್ನು ತಂದಾರು. ದೇವತಾ ಕೆಲಸಗಳಿಗಾಗಿ ಓಡಾಟ ವಿರುತ್ತದೆ. ಸಂಚಾರದಲ್ಲಿ ಜಾಗ್ರತೆ ಇರಲಿ. ಕೃಷಿ ಕ್ಷೇತ್ರದ ವ್ಯವಹಾರಗಳಿಂದ ಉತ್ತಮ ಆದಾಯ.

ಕಟಕ :-

ಕುಶಲ ಕರ್ಮಿಗಳಿಗೆ ಹೆಚ್ಚಿನ ಬೇಡಿಕೆ. ಸಂಶೋಧನೆಯಲ್ಲಿ ತೊಡಗಿದವರಿಗೆ ಉತ್ತಮ ಮಾರ್ಗದರ್ಶನ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಗುರಿ ಸಾಧನೆಗಾಗಿ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಸಾಂಸಾರಿಕವಾಗಿ ಹೆಚ್ಚಿನ ಸಮಾಧಾನ ಸಿಗಲಿದೆ. ಒಳ ಸಂಗಾತಿಯ ಅವಶ್ಯಕತೆಗಾಗಿ ಪ್ರಯತ್ನಿಸಿರಿ. ಹೊಸ ವಿಷಯಗಳನ್ನು ಕಲೆಹಾಕುವುದರಿಂದ ಬರವಣಿಗೆಯಲ್ಲಿ ವಿಳಂಬದ ಸಾಧ್ಯತೆ. ಆರ್ಥಿಕವಾಗಿ ಧನಾಗಮನದಿಂದ ಸಂತಸ.

 ಸಿಂಹ:

ಗೊತ್ತು ಗುರಿಯಿಲ್ಲದೆ ಮುಂದುವರಿಯದಿರಿ. ಹಿಂದಿನ ಕಹಿ ಅನುಭವಗಳು ಕಾಡಲಿವೆ. ಕಚೇರಿ ಕೆಲಸಗಳ ನಿಮಿತ್ತ ದೂರದ ಪ್ರಯಾಣ. ಉದ್ಯೋಗಸ್ಥರಿಗೆ ಹೆಚ್ಚಿನ ಬಿಡುವಿನಿಂದ ಮಾನಸಿಕ ನೆಮ್ಮದಿ ದೊರಕುವುದು. ಸ್ಪೋಟಕ ವಸ್ತುಗಳಿಂದ ದೂರವಿರಿ.  ವೈವಾಹಿಕ ಸಂಬಂಧಗಳು ಕೂಡಿ ಬರಲು ಹೊಂದಾಣಿಕೆ ಅಗತ್ಯವಿದೆ. ದಿನಾಂತ್ಯ ಶುಭವಾರ್ತೆ.  ಮಹಿಳೆಯರಿಗೆ ಜವಾಬ್ದಾರಿ ಹೆಚ್ಚಳ.

ಕನ್ಯಾ :-

ನೆನೆಗುದಿಗೆ ಬಿದ್ದ ವಿವಾದ ನಿರ್ಣಯ ಕಾಣಲಿದೆ. ಆರ್ಥಿಕ ಸಮಸ್ಯೆಗಳಿಂದ ಪರಿಹಾರ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾವಗಳಿಗೆ ಸಕಾಲ. ಸದುಪಯೋಗಿಸಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಸಮಯ. ಪ್ರಯತ್ನಬಲಕ್ಕೆ ಒತ್ತು ನೀಡಬೇಕು.  ಶಿಕ್ಷಕ ವೃತ್ತಿಯವರಿಗೆ ಗೌರವಾದರಗಳು ದೊರೆಯಲಿವೆ. ಲೋಹದ ವ್ಯಾಪಾರಿಗಳಿಗೆ ಲಾಭದ ನಿರೀಕ್ಷೆ.  ಸಾಂಸಾರಿಕವಾಗಿ ನೆಮ್ಮದಿ ತರಲಿದೆ.

ತುಲಾ:

ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆ ಸಫ‌ಲವಾದೀತು. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಇದೆ. ವಿವಿಧ ರೀತಿಯ ಧನಾಗಮನ ಕಾರ್ಯಸಿದ್ಧಿಗೆ ಅನುಕೂಲವಾಗಲಿದೆ. ಅಧ್ಯಯನದಲ್ಲಿ ಆಸಕ್ತಿ ವಹಿಸುವಿರಿ. ವೃತ್ತಿಯಲ್ಲಿ ಕಿರಿಕಿರಿ. ಕೆಲಸದಲ್ಲಿ ಕಾರ್ಯಬಾಹುಳ್ಯ ಸಾಧ್ಯತೆ. ಕೆಲಸದ ಒತ್ತಡದಿಂದಾಗಿ ದುಗುಡ ಉಂಟಾದೀತು. ದೇಹಾರೋಗ್ಯದಲ್ಲಿ ಗಮನ ವಿರಲಿ. ಹಿರಿಯರ ಮಾತನ್ನು ಕಡೆಗಣಿಸದಿರಿ.

ವೃಶ್ಚಿಕ :-

ವೃತ್ತಿಯಲ್ಲಿ ಯಶಸ್ಸು. ಆರೋಗ್ಯದ ಬಗ್ಗೆ ಗಮನವಿರಲಿ. ಬಡವರಿಗೆ ಧಾನ್ಯಗಳನ್ನು ದಾನ ಮಾಡುವುದರಿಂದ ಸಂತೃಪ್ತಿ. ಪ್ರೇಮ ವಿವಾಹಗಳು ಯಶ ಕಾಣುವವು. ವಂತಾದೀತು. ಸ್ತ್ರೀ ಮೂಲಕ ಅಪವಾದ ಭೀತಿ ಬರಲಿದೆ. ಪಾಟ್ನರ್‌ಶಿಪ್‌ ಕೆಲಸಗಳ ಬಗ್ಗೆ ಜಾಗ್ರತೆ ಇರಲಿ. ತಪ್ಪು ಮಾಡಿದ ಕೆಲಸಕಾರ್ಯಗಳಲ್ಲಿ ಸಂತಾಪ ಪಡು ದೇವತಾರಾಧನೆಯಿಂದ ಯಶಸ್ಸು. ಯಾವುದೇ ವಿಚಾರದಲ್ಲಿ ಸಂಶಯ ಪಡದಿರಿ.

ಧನಸ್ಸು:

ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣ ಇರುತ್ತದೆ. ಉದ್ಯೋಗಿಗಳಿಗೆ ಇನ್ನೂ ಉತ್ತಮ ಉದ್ಯೋಗಕ್ಕಾಗಿ ಪ್ರಯತ್ನ ಮಡಿದ್ದಲ್ಲಿ ಉದ್ಯೋಗ ಲಾಭವಿದೆ. ಗೃಹ ನಿರ್ಮಾಣ, ದುರಸ್ತಿ ಕಾರ್ಯಗಳಲ್ಲಿ ಯಶಸ್ಸು. ಸಮಸ್ಯೆಗಳ ಪರಿಹಾರಕ್ಕಾಗಿ ಧಾರ್ಮಿಕ ಕಾರ್ಯ ನಡೆಸಲಿದ್ದೀರಿ. ಹಿರಿಯರಿಗೆ ದೇವತಾದರ್ಶನ ಭಾಗ್ಯವಿದೆ.  ದಾಂಪತ್ಯ ಸಮಸ್ಯೆಗಳಿಗೆ ಹಿರಿಯರ ಸಲಹೆಯಿಂದ ಉತ್ತಮ ಪರಿಹಾರ.

ಮಕರ :-

ಆರ್ಥಿಕವಾಗಿ ಲೆಕ್ಕಾಚಾರವನ್ನು ಸರಿಯಾಗಿ ಇಟ್ಟುಕೊಳ್ಳಿ. ಆಶಾವಾದಿಗಳಾಗಿ ಮುಂದುವರಿಯ ಬೇಕು. ಸಾಂಸಾರಿಕವಾಗಿ ಹೊಂದಾಣಿಕೆ ಸಂತಸ ತರುತ್ತದೆ. ಗೃಹ ನಿರ್ಮಾಣದ ಬಗ್ಗೆ ಚಿಂತನೆ. ಬಂಧುಗಳೊಂದಿಗಿನ ಬಾಂಧವ್ಯ ಗಟ್ಟಿಗೊಳ್ಳುವುದು. ಆರ್ಥಿಕ ಸಂಪನ್ಮೂಲಗಳು ಕೂಡಿಬರಲಿವೆ. ಮಕ್ಕಳ ಸಲುವಾಗಿ ವಿದೇಶ ಪ್ರಯಾಣ. ಸಹೋದರರ ಸಹಕಾರ.  ಸಾಮಾಜಿಕ ಕಾರ್ಯಗಳಿಗೆ ಓಡಾಟವಿರುತ್ತದೆ.

ಕುಂಭ:-

ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿ ಸಾಧ್ಯತೆ. ವೈಯಕ್ತಿಕ ವಿಷಯಗಳ ಬಗ್ಗೆ ಜಾಗರೂಕರಾಗಿರುವುದು ಸೂಕ್ತ. ಸಾಂಸಾರಿಕವಾಗಿ ಚೇತರಿಕೆಯ ದಿನಗಳಿವು. ನಿರ್ಧಾರಗಳ ಬಗ್ಗೆ ದುಡುಕದಿರಿ. ಆರ್ಥಿಕವಾಗಿ ಹಾಗೆ ದೇಹಾರೋಗ್ಯದ ಬಗ್ಗೆ ಸಮಾಧಾನ ಕಂಡು ಬರುತ್ತದೆ.  ಆರೋಗ್ಯದಲ್ಲಿ ವೃದ್ಧಿ. ಪ್ರಾಪ್ತ ವಯಸ್ಕರಿಗೆ ಸಂತಾನ ಭಾಗ್ಯದ ಯೋಗ. ನಿರುದ್ಯೋಗಿಗಳ ಸಮಸ್ಯೆ ಪರಿಹಾರವಾಗಲಿದೆ.

ಮೀನ:-

ರಾಜಕೀಯದವರಿಗೆ ಗೊಂದಲದ ಪರಿಸ್ಥಿತಿ ತಂದೀತು. ಭೂ ಖರೀದಿ, ಗೃಹ ನಿರ್ಮಾಣ ಕಾರ್ಯಗಳಿಗಾಗಿ ಅವಸರಿಸದಿರಿ. ವ್ಯವಹಾರದಲ್ಲಿ ಉನ್ನತಿ. ಹಿತ ಶತ್ರುಗಳಿಂದ ಸಂಕಷ್ಟ. ವೈದ್ಯಕೀಯ ಚಿಕಿತ್ಸೆಗಾಗಿ ಅಧಿಕ ವೆಚ್ಚ ಭರಿಸಬೇಕಾದೀತು.  ವಿದ್ಯಾರ್ಥಿಗಳಿಗೆ ನಿರುದ್ಯೋಗಿಗಳಿಗೆ ಸಮಾಧಾನಕರವಲ್ಲದ ವಾತಾವರಣ  ಬಂಧುಗಳ ಆಗಮನ ಸಾಧ್ಯತೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ರಾಜಕೀಯ

    ಇವಿಎಂನಲ್ಲಿದ್ದ ವೋಟ್ ಗಳನ್ನು ಡಿಲೀಟ್ ಮಾಡಿದ ಅಧಿಕಾರಿಗಳು…!

    ಡಮ್ಮಿ ವೋಟ್ ಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ.ಹಿಮಾಚಲ ಪ್ರದೇಶದಲ್ಲಿ ಭಾನುವಾರ ಕೊನೆ ಹಂತದ ಮತದಾನ ನಡೆದಿದ್ದು, ಈ ಸಂದರ್ಭದಲ್ಲಿ ಇವಿಎಂನಲ್ಲಿದ್ದ ಡಮ್ಮಿ ಮತಗಳನ್ನು ಡಿಲೀಟ್ ಮಾಡುವ ಬದಲು ಅಸಲಿ ಮತಗಳನ್ನು ಅಧಿಕಾರಿಗಳು ಡಿಲೀಟ್ ಮಾಡಿದ್ದಾರೆ. ಹೀಗೆ ಕರ್ತವ್ಯಲೋಪವೆಸಗಿದ 20 ಚುನಾವಣೆ ಅಧಿಕಾರಿಗಳನ್ನು ಚುನಾವಣಾ ಆಯೋಗ ಅಮಾನತು ಮಾಡುವ ಸಾಧ್ಯತೆ ಇದೆ. ಮತಗಟ್ಟೆಗಳಲ್ಲಿ ಮತದಾನ ಆರಂಭಕ್ಕೆ ಮೊದಲು ಇವಿಎಂಗಳ ಪರೀಕ್ಷೆಗಾಗಿ ಡಮ್ಮಿ ವೋಟಿಂಗ್ ಮಾಡಲಾಗುತ್ತದೆ. ಮತದಾನ ಆರಂಭವಾದಾಗ ಡಮ್ಮಿ ವೋಟ್ ಗಳನ್ನು…

  • govt, Sports

    ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದರೇನು?

    ಕ್ರೀಡಾ ಮತ್ತು ಕ್ರೀಡಾಕೂಟದಲ್ಲಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಅಧಿಕೃತವಾಗಿ ಕರೆಯಲ್ಪಡುವ ರಾಜೀವ್ ಗಾಂಧಿ ಖೇಲ್ ರತ್ನ, ಇದು ಭಾರತದ ಗಣರಾಜ್ಯದ ಅತ್ಯುನ್ನತ ಕ್ರೀಡಾ ಗೌರವವಾಗಿದೆ. 1984 ರಿಂದ 1989 ರವರೆಗೆ ಕಚೇರಿಯಲ್ಲಿ ಸೇವೆ ಸಲ್ಲಿಸಿದ ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಈ ಪ್ರಶಸ್ತಿಗೆ ಇಡಲಾಗಿದೆ.  ಇದನ್ನು ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು ವಾರ್ಷಿಕವಾಗಿ ನೀಡಲಾಗುತ್ತದೆ. ಸ್ವೀಕರಿಸುವವರನ್ನು (ಗಳು) ಸಚಿವಾಲಯವು ರಚಿಸಿದ ಸಮಿತಿಯಿಂದ ಆಯ್ಕೆಮಾಡಲಾಗುತ್ತದೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ…

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…