ಜ್ಯೋತಿಷ್ಯ

ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

2153

ಇಂದು ಗುರುವಾರ 08/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ನಿಮ್ಮ ಆರೋಗ್ಯ ಸುಧಾರಿಸವುದನ್ನು ಪ್ರಾರಂಭಿಸಲು ಅತ್ಯುತ್ತಮ ದಿನ.ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ಹಣಕಾಸು ಉತ್ತಮವಾಗಿರುವುದು.ನಿಮ್ಮ ವೈವಾಹಿಕ ಜೀವನದಲ್ಲಿ ಖುಷಿ ಕಡಿಮೆಯಾದ ಭಾಸ ನಿಮಗೆ ಉಂಟಾಗಬಹುದು. ನಿಮ್ಮ ವೈವಾಹಿಕ ಜೀವನವನ್ನು ಸುಸ್ಥಿತಿಯಲ್ಲಿಡಲು ವಾಗ್ವಾದಗಳನ್ನು ದೂರವಿಡಬೇಕು. ವೆಚ್ಚ ಹೆಚ್ಚಾಗಬಹುದು.ಗಳಿಕೆಯೂ ಇರುತ್ತದೆ. ಶಾಪಿಂಗ್ ಮತ್ತು ಇತರ ಚಟುವಟಿಕೆಗಳು ನಿಮ್ಮನ್ನು ದಿನವಿಡೀ ಬಿಡುವಿಲ್ಲದಂತಿಡುತ್ತವೆ. ಇಂದು ಪರಿಸ್ಥಿತಿ ನೀವು ಬಯಸಿದಂತೆ ಇರದೇ ಇರಬಹುದು, ಆದರೆ ನೀವು ನಿಮ್ಮ ಅರ್ಧಾಂಗಿಯ ಜೊತೆ ಒಂದು ಸುಂದರ ಸಮಯ ಕಳೆಯುತ್ತೀರಿ.

ವೃಷಭ:-

ಹಣಕಾಸು ವ್ಯವಹಾರದಲ್ಲಿ ಎಚ್ಚರಿಕೆಯಿಂದ ಇರಿ. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ- ಆದರೆ ಅದೇ ಸಮಯದಲ್ಲಿ ಖರ್ಚೂ ತುಂಬಾ ಹೆಚ್ಚಾಗುತ್ತದೆ. ಬ್ಯಾಂಕಿನಲ್ಲಿ ವ್ಯವಹರಿಸುವಾಗ ಬ್ಯಾಂಕಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿಟ್ಟು ಕೊಳ್ಳಿ. ನಿಮ್ಮ ಗಮನವನ್ನು ಬೇರೆಡೆ ಸೆಳೆದು ಹಣ ದೋಚುವವರಿಂದ ಎಚ್ಚರದಿಂದಿರಿ.

ಮಿಥುನ:

ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ಹೆಚ್ಚಿನ ವೇಗದ ಅಥವಾ ನಿರ್ಲಕ್ಷ್ಯದ ವಾಹನ ಚಾಲನೆಯು ಅಪಘಾತವನ್ನು ಉಂಟುಮಾಡುತ್ತದೆ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.ಸಣ್ಣಪುಟ್ಟ ಸಮಸ್ಯೆಗಳ ಹೊರತಾಗಿಯೂ ಕೌಟುಂಬಿಕ ಜೀವನ ಸೌಹಾರ್ದಯುತವಾಗಿರುತ್ತದೆ. ಇಂದು ಯಾರಾದರೂ ನಿಮ್ಮ ಪ್ರೀತಿಯ ನಡುವೆ ಬರಬಹುದು. ಕೆಲವು ಕುಟುಂಬದ ಸದಸ್ಯರು ತಮ್ಮ ಅಸೂಯೆಯ ವರ್ತನೆಯಿಂದ ನಿಮಗೆ ಕಿರಿಕಿರಿ ಮಾಡಬಹುದು. ಆದರೆ ತಾಳ್ಮೆ ಕಳೆದುಕೊಳ್ಳುವುದು ಬೇಡ.

ಕಟಕ :-

ಹಣಕಾಸಿನ ಪರಿಸ್ಥಿತಿ ಅಷ್ಟೇನೂ ಆಶಾದಾಯಕವಾಗಿಲ್ಲದ ಕಾರಣ ಹಣವನ್ನು ಮಿತವಾಗಿ ಬಳಸಿ. ನಿಮ್ಮ ಆತ್ಮೀಯರಲ್ಲಿ ಕೆಲವರು ನಿಮ್ಮನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದಿರಬಹುದು ಮತ್ತು ಇದು ನಿಮ್ಮ ಸಂಬಂಧ ಹಳಸಲು ಕಾರಣವಾಗಬಹುದು. ನೀವು ಇಂದು ಒಂದು ಪ್ರಮಾದ ಮಾಡಬಹುದಾಗಿದ್ದು ಇದು ನಿಮ್ಮ ವೈವಾಹಿಕ ಜೀವನಕ್ಕೆ ಧಕ್ಕೆ ತರಬಹುದು. ಮಕ್ಕಳ ಆರೋಗ್ಯ ಸ್ವಲ್ಪ ಚಿಂತೆಗೆ ಕಾರಣವಾಗಬಹುದು.

 ಸಿಂಹ:

ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ.ಪ್ರತಿದಿನದಂತೆ ಈ ದಿನವೂ ಎಲ್ಲಾ ಸರಿಯಾಗಿದೆ ಎಂದುಕೊಳ್ಳತ್ತಿರುವಾಗಲೇ ಮನೆಯ ಕೆಲಸಗಾರರು ಇಲ್ಲವೆ ನಿಮ್ಮ ಕೈಕೆಳಗೆ ಕೆಲಸ ಮಾಡುವವರು ದಿಢೀರನೆ ರಜಾ ಹಾಕುವುದರಿಂದ ಎಲ್ಲಾ ಕೆಲಸವೂ ಒಟ್ಟಿಗೆ ಮೈಮೇಲೆ ಬಂದಂತೆ ಆಗುವುದು. ವೃತ್ತಿಜೀವನದ ಯಶಸ್ಸಿಗೆ ಅಡಿಪಾಯವಾಗುತ್ತದೆ.

ಕನ್ಯಾ :-

ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ ಜಾಣತನದ ಅಗತ್ಯವಿದೆ.  ಗಾಳಿ ಸಂಬಂಧಿ ರೋಗಗಳು, ಗಂಟು ನೋವು ಇತ್ಯಾದಿ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬಹುದು. ಅತಿಯಾದ ನಾರಿನಂಶವಿರುವ ಆಹಾರ ಸೇವಿಸಬೇಡಿ ಇಂದು ನಿಮ್ಮ ಜೀವನದಲ್ಲಿ ಮದುವೆ ಅದರ ಅತ್ಯುತ್ತಮ ಘಟ್ಟವನ್ನು ತಲುಪುತ್ತದೆ.

ತುಲಾ:

ನಿಮ್ಮ ಮಾತುಗಳು ಘರ್ಷಣೆಗೆ ಕಾರಣವಾಗಬಹುದಾದ್ದರಿಂದ, ನಿಮ್ಮ ಮಾತುಗಳ ಮೇಲೆ ಗಮನವಿರಲಿ. ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ಸಂಗಾತಿಯ ಸಕಾಲಿಕ ಎಚ್ಚರಿಕೆಯಿಂದ ಅಧಿಕ ಲಾಭ ಅಥವಾ ನೆಮ್ಮದಿ ಉಂಟಾಗುವುದು. ಇವತ್ತು ಡೇಟ್‌ಗೆ ಹೋದಲ್ಲಿ ವಿವಾದಾತ್ಮಕ ವಿಷಯಗಳನ್ನು ಕೆದಕುವುದನ್ನು ತಪ್ಪಿಸಿ. ನೀವು ನಿಮ್ಮ ಸಂಗಾತಿಯ ಜೊತೆ ಒಂದು ಆರಾಮವಾದ ದಿನವನ್ನು ಕಳೆಯುತ್ತೀರಿ. ಗುರುರಾಯರನ್ನು ಸ್ಮರಿಸಿ.

ವೃಶ್ಚಿಕ :-

ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ.ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿಗಳ ದರ್ಶನಕ್ಕೆ ಜಾತಕಪಕ್ಷಿಯಂತೆ ಕಾಯುವಿರಿ. ಆದರೆ ಗ್ರಹಸ್ಥಿತಿಯು ಕೂಡಾ ನಿರಾಸೆಯನ್ನುಂಟು ಮಾಡುವುದು. ಹಾಗಾಗಿ ಪ್ರಮುಖರ ಭೇಟಿಯು ರದ್ದಾಗಲಿದೆ. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ನೀವು ತಪ್ಪು ದಾರಿಗೆಳೆಯಲು ಅಥವಾ ನಿಮಗೆ ಹಾನಿ ಮಾಡುವ ಮಾಹಿತಿ ನೀಡಲು ಪ್ರಯತ್ನಿಸುವ ವ್ಯಕ್ತಿಗಳ ಬಗ್ಗೆ ಎಚ್ಚರಿದಿಂದಿರಿ.

ಧನಸ್ಸು:

ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನ.ಮನೆ ಬಾಗಿಲಿಗೆ ನಿಮ್ಮ ಕಾರ್ಯಗಳ ಸಫಲತೆಯ ಬಗ್ಗೆ ವಾರ್ತೆ ಬರುವುದು. ಯುವಕರು ಶಾಲಾ ಯೋಜನೆಗಳಲ್ಲಿ ಕೆಲವು ಸಲಹೆ ಪಡೆಯಬಹುದು.  ನಿಮ್ಮನ್ನು ನಿಮ್ಮ ಪ್ರೀತಿ ಪಾತ್ರರಿಂದ ಒಮ್ಮೆ ದೂರವಿಡಬಹುದು. ಹೀಗಾಗಿ, ವೈಯಕ್ತಿಕ ಹಾಗೂ ವೃತ್ತಿಪರ ಜೀವನದಲ್ಲಿ ಸಮತೋಲನ ಅಗತ್ಯವಿದೆ. ನಿಮ್ಮ ಸುತ್ತ ನಡೆಯುವುದನ್ನು ನೋಡಿಕೊಳ್ಳಿ – ಇಂದು ನೀವು ಮಾಡಿದ ಕೆಲಸಕ್ಕೆ ಬೇರೆಯವರು ಗೌರವ ತೆಗೆದುಕೊಳ್ಳಬಹುದು.

ಮಕರ :-

ಕಟ್ಟಡ ಮೇಲುಸ್ತುವಾರಿಕೆ ಮಾಡುವವರು ಅಥವಾ ಕಟ್ಟಡ ವಿನ್ಯಾಸಕಾರರಿಗೆ ಉತ್ತಮ ದಿನ. ನೀವು ಆರ್ಥಿಕವಾಗಿ ವ್ಯವಹರಿಸುವರ ಜೊತೆಗೆ ಎಚ್ಚರಿಕೆಯಿಂದಿರಿ.ಮಕ್ಕಳು ತುಂಟರಾಗಿರುತ್ತಾರೆ. ಆದರೆ ಅವರು ಹೊಸ ಸಂಗತಿಗಳನ್ನು ತಿಳಿಯಲು ಆಸಕ್ತರಾಗಿರುತ್ತಾರೆ ಮತ್ತು ಅವರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಾರೆ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಬಹು ಪ್ರಮುಖವಾದ ಮತ್ತು ಬೃಹತ್ತಾದ ಕಾರ್ಯ ನಿರ್ವಹಿಸಲು ನಿಮಗೆ ಕರೆ ಬರುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ರಂಗದಲ್ಲಿ ಮುಖ್ಯ ಬೆಳವಣಿಗೆಯಾಗುತ್ತಿದ್ದು ಇದು ನೀವು ಮತ್ತು ನಿಮ್ಮ ಇಡೀ ಕುಟುಂಬಕ್ಕೆ ಸಂತೋಷ ತರುತ್ತದೆ.

ಕುಂಭ:-

ಇಂದು ನೀವು ಸಲಹೆ ಕೊಟ್ಟರೆ ಅದನ್ನು ಸ್ವೀಕರಿಸಲೂ ಸಿದ್ಧವಾಗಿರಿ. ನೀವು ಹಲವು ಹೊಸ ಸಂಗತಿಗಳನ್ನು ಕಲಿಯುತ್ತೀರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ ತರುತ್ತದೆ. ದಿನದಿಂದ ದಿನಕ್ಕೆ ಅಭಿವೃದ್ಧಿಯನ್ನು ಹೊಂದುತ್ತಿರುವ ನಿಮ್ಮನ್ನು ಕಂಡು ಇತರರು ಅಸೂಯೆ ಪಡುವರು. ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಪ್ರಯಾಣ ಸಂತೋಷಕರ ಮತ್ತು ಹೆಚ್ಚು ಅನುಕೂಲಕರವಾಗಿರುತ್ತದೆ.

ಮೀನ:-

ಕೇವಲ ಹಗಲುಗನಸು ಕಾಣುವುದನ್ನು ಬಿಡಿ. ನಿಮಗೆ ಮಾಡಲು ಸಾಧ್ಯವಾದುದನ್ನೆ ಆಯ್ಕೆ ಮಾಡಿಕೊಂಡು ಕೆಲಸ ಪೂರೈಸಿ. ಸಂಬಂಧಿಗಳು ಬೆಂಬಲ ನೀಡುತ್ತಾರೆ ಮತ್ತು ನಿಮ್ಮ ಮನಸ್ಸಿಗೆ ಆ ಹೊರೆಯಾದ ಆ ತೊಂದರೆಯನ್ನು ಕಡಿಮೆ ಮಾಡುತ್ತಾರೆ. ನೀವು ತೂಕ ಹೆಚ್ಚಿಸಿಕೊಳ್ಳುವ ಸಾಧ್ಯತೆಯಿರುವುದರಿಂದ ಆಹಾರದ ಮೇಲೆ ನಿಗಾ ಇರಲಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ.  ನೀವು ಬಾಳಸಂಗಾತಿ ಮತ್ತು ಧಾರ್ಮಿಕ ಕಾರ್ಯಗಳಲ್ಲಿ ವೆಚ್ಚ ಮಾಡಬಹುದು. ನಿಮ್ಮ ಮಾತಿನ ಮೇಲೆ ನಿಯಂತ್ರಣವಿಲ್ಲದಿದ್ದಲ್ಲಿ ನೀವು ಸುಲಭವಾಗಿ ನಿಮ್ಮ ಖ್ಯಾತಿಗೆ ಧಕ್ಕೆ ತಂದುಕೊಳ್ಳಬಹುದು. ಪ್ರವಾಸಗಳು ಮತ್ತು ಪ್ರಯಾಣಗಳು ಆನಂದ ತರುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶುಕ್ರವಾರ, ಈ ದಿನದ ರಾಶಿಭವಿಷ್ಯದಲ್ಲಿ ಈ ರಾಶಿಗಳಿಗೆ ರಾಜಯೋಗವಿದ್ದು, ವಿಪರೀತ ಧನಲಾಭವಿದೆ!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(28 ಡಿಸೆಂಬರ್, 2018) ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂಸಾಧ್ಯವಾದಷ್ಟೂ ವಾಸ್ತವವಾದಿಗಳಾಗಿರಿ. ನಿಮ್ಮ ಸ್ನೇಹಿತರ ಜೊತೆ ಸಮಯ ಕಳೆಯಿರಿ -ಇದು ಒಳ್ಳೆಯದನ್ನು ಮಾಡುತ್ತದೆ. ಇಂದು,…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.