ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.