News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಸರ್ಕಾರಿ ಯೋಜನೆಗಳು

ಇಂದಿರಾ ಕ್ಯಾಂಟೀನ್ ಆಯ್ತು. ಈಗ “ಇಂದಿರಾ ಕ್ಲಿನಿಕ್” ಶುರು!ಇಲ್ಲಿ ಏನೆಲ್ಲಾ ಉಚಿತ ಸೇವೆ ಸಿಗಲಿದೆ ಗೂತ್ತಾ..?

160

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಯೋಜನೆಗಳು, ದಿನದಿಂದ ದಿನಕ್ಕೆ ಪ್ರಸಿದ್ದಿ ಗಳಿಸ್ತಾ ಇವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಗೆ ಬಂದ ನಂತ್ರ, ಇಂತಹ ಕ್ಯಾಂಟೀನ್ ಗಳನ್ನು, ರಾಜ್ಯದ ಜಿಲ್ಲಾ ತಾಲ್ಲೂಕು ಕೇಂದ್ರಗಳು ತೆರೆಯುತ್ತಿದೆ. ಈ ಬಳಿಕ ಕಟ್ಟಡ ಕಾರ್ಮಿಕ ಮಹಿಳೆಯರಿಗೆ, ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದ ಪಾಸ್ ನೀಡಲು ಸಜ್ಜಾಗಿದೆ. ಈ ಎಲ್ಲಾ ಯೋಜನೆಗಳು ಸಾರ್ವಜನಿಕ ವಲಯದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಮಹತ್ವದ ಯೋಜನೆ ಇಂದಿನಿಂದ ಆರಂಭವಾಗುತ್ತಿದೆ. ಅದೇ ಇಂದಿರಾ ಕ್ಲಿನಿಕ್.

ಈ ವಿನೂತನ ಯೋಜನೆಯನ್ನು ರಾಜ್ಯಸರ್ಕಾರ, ಮೊದಲ ಪ್ರಯೋಗಾರ್ಥವಾಗಿ, ರಾಜ್ಯ ರಾಜಧಾನಿ, ಯಶವಂತಪುರ, ಮೆಜೆಸ್ಟಿಕ್ ನಲ್ಲಿ ಎರಡು ಕಡೆಯಲ್ಲಿ ಆರಂಭವಾಗಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಪ್ರಾರಂಭವಾಗಿರುವ ಈ ವಿನೂತನ ಕ್ಲಿನಿಕ್, ವಾರದ ಏಳು ದಿನವೂ ಬೆಳಿಗ್ಗೆ 7 ರಿಂದ ರಾತ್ರಿ 9ರ ವರೆಗೆ ಕಾರ್ಯನಿರ್ವಹಿಸಲಿದೆ. ಪ್ರತಿಯೊಂದು ಕ್ಲಿನಿಕ್ ನಲ್ಲಿ ಒಬ್ಬ ವೈದ್ಯರು, ಒಬ್ಬರು ನರ್ಸ್, ಇಬ್ಬರು ಫಾರ್ಮಸಿಸ್ಟ್ ಕಾರ್ಯ ನಿರ್ವಹಿಸಲಿದ್ದಾರೆ.

ಅಂದಹಾಗೇ, ವೈದ್ಯರು ಇಲ್ಲ, ಚಿಕಿತ್ಸೆ ಲಭ್ಯವಿಲ್ಲ ಎಂಬ ಮಾತೇ ಈ ಕ್ಲಿನಿಕ್ ನಲ್ಲಿ ಇಲ್ಲ. ಇಂತಹ ಕ್ಲಿನಿಕ್ ನಲ್ಲಿ ಉಚಿತವಾಗಿ, ವೈದ್ಯಕೀಯ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದ್ದು, ವೈದ್ಯಕೀಯ ಸೇವೆಯನ್ನು ಉತ್ತಮ ರೀತಿಯಲ್ಲಿ ನೀಡುವ ರಾಜ್ಯ ಸರ್ಕಾರದ ವಿನೂತನ ಯೋಜನೆ ಇದಾಗಿದೆ. ಆದರೇ ಎಷ್ಟರ ಮಟ್ಟಿಗೆ ಯಶಸ್ಸು ಕಾಣುತ್ತದೋ, ಅಥವಾ ಮಾಮೂಲಿ ಇತರೆ ಸರ್ಕಾರಿ ಆಸ್ಪತ್ರೆಗಳಂತೆ ಆಗುತ್ತವೋ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಸುದ್ದಿ

    ಬಾಹ್ಯಾಕಾಶ ಇತಿಹಾಸದಲ್ಲಿ ಮಹತ್ವದ ಸಾಧನೆ!ಲೈವ್ ಸ್ಯಾಟೆಲೈಟ್ ಹೊಡೆದುರುಳಿಸಿದ ವಿಜ್ಞಾನಿಗಳು.. ಮೋದಿಯಿಂದ ಅಧಿಕೃತ ಘೋಷಣೆ..

    ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…