ಜಯಂತಿಗಳು

ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

1778

ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು. ಶಾಂತಿ ಮಂತ್ರದಿಂದಲೇ ಭಾರತವನ್ನು ಬಂಧಮುಕ್ತಗೊಳಿಸಿದ ಅಹಿಂಸಾವಾದಿಯ ಹುಟ್ಟು ಹಬ್ಬವನ್ನು “ಗಾಂಧೀ ಜಯಂತಿಯಾಗಿ” ಪ್ರತಿ ವರ್ಷವೂ ಆಚರಿಸಲಾಗುತ್ತದೆ.

ಗಾಂಧಿ ಜಯಂತಿ ರಾಷ್ಟ್ರೀಯ ಆಚರಣೆಯಾಗಿ ಆರಂಭವಾಗಿದ್ದು ಯಾವಾಗ ಗೊತ್ತಾ?

ಈ  ಪ್ರಶ್ನೆಗೆ 1987, 1948 ಅಥವಾ 1950… ಎಂದು ಬಹುತೇಕ ಜನರು ಉತ್ತರಿಸುತ್ತಾರೆ. ಮಹಾತ್ಮ ಗಾಂಧಿ ಚಿತ್ರಕ್ಕೆ  ಹಾರ ಹಾಕಿ ಮಾಡುವ ಭಾಷಣಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಆಡಿದ ಮಾತುಗಳನ್ನು ಮತ್ತೆ ಉಚ್ಚರಿಸಲಾಗುತ್ತದೆ. ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮರನ್ನು ಸ್ಮರಿಸುವುದು ಅತ್ಯಗತ್ಯವೆಂದು ಎಲ್ಲರೂ ಹೇಳುತ್ತಾರೆ. ಆಚ್ಚರ್ಯವೆಂದರೆ  ಸ್ವಾತಂತ್ರ್ಯ ದೊರೆಯುವುದಕ್ಕೆ  ಮುನ್ನವೇ ಗಾಂಧಿ ಜಯಂತಿ ಆಚರಣೆ ನಮ್ಮ ದೇಶದಲ್ಲಿ ನಡೆದಿದೆ!

1930–-33 ಸಮಯದಲ್ಲಿ ಉತ್ತರ ಕನ್ನಡದ ಶಿರಸಿ–-ಸಿದ್ದಾಪುರಗಳಿಂದ ಪ್ರಕಟವಾಗುತ್ತಿದ್ದ ‘ಸತ್ಯಾಗ್ರಹ’ ಕರಪತ್ರ ಪತ್ರಿಕೆಯಲ್ಲಿ ಗಾಂಧಿ ಜಯಂತಿಯ ಸಾಕಷ್ಟು ವಿವರಗಳಿವೆ. 1931ರಲ್ಲಿ ಪ್ರಕಟವಾದ ಒಂದು ಸಂಚಿಕೆಯಲ್ಲಂತೂ ಗಾಂಧಿ ಜಯಂತಿ ಸಪ್ತಾಹ ದೇಶಾದ್ಯಂತ ಆಚರಿಸಲು ‘ರಾಷ್ಟ್ರಪತಿ’ ಸರ್ದಾರ್ ವಲ್ಲಭಭಾಯಿ ಪಟೇಲರ ಅಪ್ಪಣೆಯ ಪ್ರಸ್ತಾಪವಿದೆ!

ಭಾರತದ ಅಮೂಲ್ಯ ರತ್ನ – “ಲಾಲ್ ಬಹದ್ದೂರ್ ಶಾಸ್ತ್ರಿ” :-

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಹೆಸರೇ ನಮಗೆ ಪ್ರೇರಕ ಶಕ್ತಿಯಾಗಿದೆ. ಜೈ ಜವಾನ್ ಜೈ ಕಿಸಾನ್ ಎಂಬ ಘೋಷಣೆಯ ಮೂಲಕ ದೇಶದ ಅಭಿವೃದ್ಧಿಗೆ ಹೊಸ ಆಯಾಮ ನೀಡಿದ ಮಹಾನ್ ಚೇತನ, ಅಜಾತ ಶತ್ರು ರಾಜಕಾರಣಿ, ದೇಶ ಕಂಡ ಅಪರೂಪದ ಪ್ರಧಾನಿ ಡಾ.ಲಾಲ್ ಬಹದ್ದೂರ್ ಶಾಸ್ತ್ರಿ. ಇಂದು (ಅಕ್ಟೋಬರ್ 2) ಅವರ 108ನೇ ಜನ್ಮದಿನ.

“We would prefer to live in poverty for as long as necessary but we shall not allow our freedom to be subverted” ಎಂದಿದ್ದರು ಶಾಸ್ತ್ರಿ.

ಭಾರತದ ಹೆಮ್ಮೆಯ ಮಾಜಿ ಪ್ರಧಾನಿ ಸರಳ ಜೀವಿ , ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಜಯಂತಿಯ ಶುಭಾಶಯಗಳು ??
ಇಂಥಹ ಪ್ರಾಮಾಣಿಕ ನಾಯಕತ್ವದ ಮಹಾನ್ ಚೇತನವನ್ನು ಅವರ ಜನ್ಮದಿನದಂದು ನೆನೆಪಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ.

ಜೈ ಹಿಂದ್. ಜೈ ಜವಾನ್, ಜೈ ಕಿಸಾನ್.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಉಪಯುಕ್ತ ಮಾಹಿತಿ

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ಬರಲಿದೆ ಎಂದ ವಿಜ್ಞಾನಿಗಳು..!ತಿಳಿಯಲು ಈ ಲೇಖನ ಓದಿ..

    ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಸ್ಪೂರ್ತಿ

    ಈ ಮಹಾನುಭಾವ ಏನ್ ಮಾಡ್ತಾ ಇದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನೀವು ಹಲವು ರೀತಿಯ ಸಾಮಾಜಿಕ ಕಾರ್ಯ ಮಾಡುವವರನ್ನು ನೋಡಿರುತ್ತೀರ ಹಾಗು ಅವರ ಬಗ್ಗೆ ಕೇಳಿರುತ್ತೀರ. ಅದೇ ರೀತಿಯಲ್ಲಿ ನಾವು ನಿಮ್ಮನ್ನು ಒಬ್ಬ ಉದ್ಯಮಿ ಬಡ ಹೆಣ್ಣು ಮಕ್ಕಳಿಗಾಗಿ ತಾನು ಮಾಡಿರುವಂತ ಸಾಮಾಜಿಕ ಕಾರ್ಯದ ಬಗ್ಗೆ ತಿಳಿಸಿ ಕೊಡುತ್ತೇವೆ ನೋಡಿ. ಹೆಸರು ಮಹೇಶ್ ಸಾವನಿ ಇವರು ಮೂಲತಃ ಗುಜರಾತ್ ನವರು ಇವರು ಒಬ್ಬ ವಜ್ರದ ವ್ಯಾಪಾರೀ ಕೂಡ. ಸಾವನಿ ಅವರ ತ೦ದೆ ವಲ್ಲಭಭಾಯಿ ಅವರು ಸುಮಾರು 40 ವಷ೯ಗಳ ಹಿ೦ದೆ…

  • ಸೌಂದರ್ಯ

    ತಲೆಹೊಟ್ಟಿನ ತಲೆನೋವಿಗೆ ಇಲ್ಲಿದೆ ಮನೆಮದ್ದು….

    ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ

  • ಸುದ್ದಿ

    ಒಂದು ಎಕರೆಗೆ ಆಗುವಷ್ಟು ಶ್ರೀಗಂಧ ಬೀಜ ಮಾರಿದ್ರೆ ಲಕ್ಷಗಟ್ಟಲೆ ಲಾಭ ಪಡೆಯಬಹುದು,

    ತುಂಬಾ ಜನರತಲೇಲಿರೋದೇನಂದ್ರೆ, ಶ್ರೀಗಂಧ ಹಾಕಿದರೆ ಕಳ್ಳರ ಕಾಟ, ಮಾರುಕಟ್ಟೆಗ್ಯಾರಂಟಿ ಇಲ್ಲ ಹಾಗೂ 15-20 ವರ್ಷದನಂತರವೇ ಅದರಿಂದ ಆದಾಯ ಸಿಗುವುದು, ಅಲ್ಲಿವರೆಗೆ ಬರೀ ನಾವ್‌ ಹಾಕ್ತಾ ಇರಬೇಕು… ಆದರೆ ವಾಸ್ತವವೇಬೇರೆ, ಶ್ರೀಗಂಧ ನೆಟ್ಟಮೂರೇ ವರ್ಷದಿಂದ ಆದಾಯ ಪಡೆಯಬಹುದು. ಶ್ರೀಗಂಧ ತನ್ನ ಬೀಜಗಳ ಮೂಲಕ ನಿಮಗೆ ಹಣ ತಂದುಕೊಡುತ್ತದೆ. ಏನಿಲ್ಲವೆಂದರೂ ಒಂದು ಎಕರೆಯಲ್ಲಿ ಹಾಕಿದ ಶ್ರೀಗಂಧದಿಂದ ಪ್ರತಿವರ್ಷ ಬೀಜ ಮಾರಾಟದಿಂದಲೇ ಅಂದಾಜು ಎರಡು ಲಕ್ಷ ಆದಾಯ ಇದೆ. ಎಲ್‌.ಐ.ಸಿ ಯ ಮನಿ ಬ್ಯಾಕ್‌ ಪಾಲಿಸಿಯ ಹಾಗೆ ಪ್ರತಿ ವರ್ಷ ಬೀಜದ…