ಜ್ಯೋತಿಷ್ಯ

ಇಂದು ಸೋಮವಾರ,12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

396

ಇಂದು ಸೋಮವಾರ,  12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ವೃಷಭ:-

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ಮಿಥುನ:

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಕಟಕ :-

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

 ಸಿಂಹ:

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ಕನ್ಯಾ :-

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ತುಲಾ:

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ವೃಶ್ಚಿಕ :-

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಧನಸ್ಸು:

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು.  ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಮಕರ :-

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಕುಂಭ:-

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಮೀನ:-

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ.  ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ.  ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಶೀಘ್ರದಲ್ಲೇ ‘ಸಂಪೂರ್ಣ ಉಚಿತ ಜಿಯೋ ಆಂಡ್ರಾಯ್ಡ್ ಫೋನ್ ‘..!ತಿಳಿಯಲು ಈ ಲೇಖನ ಓದಿ..

    ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.

  • ಸುದ್ದಿ

    ಪ್ರಸಿದ್ದ ಆಭರಣ ಶೋರೂಂಗಳ ಮೇಲೆ ಐಟಿ ದಾಳಿ, 125 ಕೋಟಿ ರೂ. ಅಕ್ರಮ ಸಂಪತ್ತು ಪತ್ತೆ…!

    ಮಹಾರಾಷ್ಟ್ರ, ಕೇರಳ ಮತ್ತು ಆಂಧ್ರಪ್ರದೇಶದ ಡಿಜಿಐಟಿಗಳ ನೆರವಿನೊಡನೆ ದಾಯ ತೆರಿಗೆ – ಕರ್ನಾಟಕ ಮತ್ತು ಗೋವಾದ ಆದಾಯ ತೆರಿಗೆ ನಿರ್ದೇಶನಾಲಯ (ಡಿಜಿಐಟಿ) ದ ತನಿಖಾ ವಿಭಾಗವು  ರಾಜ್ಯದಾದ್ಯಂತ ಚಿನ್ನದ ಅಂಗಡಿ ಮೇಲೆ ನಡೆಸಿದ್ದ ದಾಳಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ಕಳೆದ ವಾರ ಎರಡು ಪ್ರಸಿದ್ಧ ಆಭರಣ ಶೋ ರೂಂಗಳಾದ  ‘ಸುಲ್ತಾನ್’ ಮತ್ತು ‘ಸಿಟಿ ಗೋಲ್ಡ್’ ಮೇಲೆ ಸರಣಿ ದಾಳಿ ನಡೆಸಲಾಗಿತ್ತು.ಎರಡೂ ಆಭರಣ ಮಾರಾಟ ಸಮೂಹವು ಸುಮಾರು 125 ಕೋಟಿ ರೂ.ಗಳ  ದಾಖಲೆ ಇಲ್ಲದ  ಆದಾಯವನ್ನು…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…