ಜ್ಯೋತಿಷ್ಯ

ಇಂದು ಸೋಮವಾರ,12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

396

ಇಂದು ಸೋಮವಾರ,  12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

ಮೇಷ:

ಮಡದಿಯ ಕಿರಿಕಿರಿ ಹೆಚ್ಚಲಿದೆ.ಏಕಾಏಕಿ ಹೊಸ ಕಾರ್ಯಗಳನ್ನು ಆರಂಭಿಸುವುದು ಅಷ್ಟು ಸೂಕ್ತವಲ್ಲ. ಸ್ವಲ್ಪ ತಾಳ್ಮೆ ವಹಿಸಿರಿ. ಮುಂದೆ ಒಳಿತಾಗುವುದು. ಸಾಮಾಜಿಕ ಕಾರ್ಯಕರ್ತರಿಗೆ ಯೋಗ್ಯ ಪುರಸ್ಕಾರ ದೊರಕಲಿದೆ.ನೀವು ಪ್ರಮುಖ ಭೂಮಿ ಒಪ್ಪಂದಗಳನ್ನು ಮಾಡಲು ಹಾಗೂ ಮನರಂಜನಾ ಯೋಜನೆಗಳಿಗಾಗಿ ಅನೇಕರನ್ನು ಸಂಘಟಿಸುವ ಒಂದು ಸ್ಥಾನದಲ್ಲಿರುತ್ತೀರಿ. ವೃತ್ತಿರಂಗದಲ್ಲಿ ಮುನ್ನಡೆ ಗೌರವವನ್ನು ಕೊಡಲಿದೆ.

ವೃಷಭ:-

ಖರ್ಚು ಮಾಡಲು ಮುಂದೆಹೋದಲ್ಲಿ ನೀವು ಖಾಲಿ ಜೇಬಿನಿಂದ ಮನೆ ಸೇರಬೇಕಾಗುತ್ತದೆ. ಕೆಲಸ, ಕಚೇರಿ ಕೆಲಸಗಳಿಗೆ ಒತ್ತಡ ನಿಮ್ಮನ್ನು ಬಾಧಿಸುವ ಸಾಧ್ಯತೆ ಇದೆ.ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯ ಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು. ವೈಯಕ್ತಿಕ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು. ಮಹಿಳೆಯರು ಅಧಿಕ ಮಾತಿನಿಂದಾಗಿ ಸಂಕಷ್ಟಕ್ಕೊಳಗಾಗಬಹುದು. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ಮನೆಯವರ ಕೆಲಸ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಆನಂದ ಅನುಭವಿಸುವಿರಿ.

ಮಿಥುನ:

ನಿಮಗೆ ಸಹಾಯ ಮಾಡಲು ನಾ ಮುಂದು ತಾ ಮುಂದು ಎಂದು ಜನರು ಸಹಕರಿಸುವರು.ಪ್ರಯತ್ನಕ್ಕೆ ತಕ್ಕುದಾದ ಪ್ರತಿಫಲ ದೊರಕಲಿದೆ. ನಿಮ್ಮ ಮಗುವಿಗೆ ಪರೀಕ್ಷೆಯಲ್ಲಿ ಚೆನ್ನಾಗಿ ಮಾಡಲು ಸಾಧ್ಯವಾಗದಿದ್ದಲ್ಲಿ ಅದಕ್ಕೆ ಛೀಮಾರಿ ಹಾಕಬೇಡಿ. ಬದಲಿಗೆ ನೀವು ಮುಂದಿನ ಬಾರಿ ಚೆನ್ನಾಗಿ ಮಾಡುವಂತೆ ಅವರನ್ನು ಪ್ರೋತ್ಸಾಹಿಸಬೇಕು. ಸರ್ಕಾರಿ ಉದ್ಯೋಗಿಗಳಿಗೆ ಇಲಾಖೆಗಳಲ್ಲಿ ಮುಂಬಡ್ತಿ. ನಿಮ್ಮ ಪಾಲುದಾರರು ಅವರ ಮಾತು ನಡೆಸದಿದ್ದರೆ ಬೇಸರಿಸಿಕೊಳ್ಳಬೇಡಿ-ನೀವು ಕುಳಿತುಕೊಂಡು ಮಾತನಾಡಬೇಕಾದ ಅಗತ್ಯವಿದೆ. ಮೀನು ಮುಂತಾದ ಸಮುದ್ರ ಖಾದ್ಯ ಉದ್ಯಮಿಗಳಿಗೆ ಲಾಭದ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ. ನೀವು ಇಚ್ಚಿಸಿದ ಕಾರ್ಯಗಳು ಕೈಗೂಡುವುದು. ನಿಮಗೆ ತಿಳಿದ ಜನರ ಮೂಲಕ ಆದಾಯದ ಹೊಸ ಮೂಲಗಳು ಕಂಡುಬರುತ್ತವೆ.

ಕಟಕ :-

ಹೊಸ ಗ್ರಾಹಕರೊಂದಿಗೆ ಮಾತುಕತೆಗೆ ಇದೊಂದು ಅದ್ಭುತ ದಿನ. ತೃಪ್ತಿದಾಯಕ ದಾಂಪತ್ಯ ಜೀವನ. ವಸ್ತ್ರಾಭರಣ ಖರೀದಿ ಸಾಧ್ಯತೆ. ಕಚೇರಿಯ ಅಧಿಕಾರಿಗಳೊಡನೆ ವಿನಾಕಾರಣ ಮನಃಸ್ತಾಪ ಮಾಡಿಕೊಳ್ಳದಿರಿ. ನೀವು ಹಾಗೂ ನಿಮ್ಮ ಪ್ರೀತಿಪಾತ್ರರು ಒಬ್ಬರೊನ್ನಬ್ಬರು ಚೆನ್ನಾಗಿ ಅರ್ಥಮಾಡಿಕೊಳ್ಳಲು ಸಮಯ ವ್ಯಯಿಸಬೇಕು. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ ಒದಗಿಬರುವುದು.

 ಸಿಂಹ:

ವೃತ್ತಿ ಸಮಸ್ಯೆಗಳು ಉಲ್ಬಣಗೊಂಡರೂ ಕ್ರಮೇಣ ಪರಿಹಾರ ಕಂಡುಕೊಳ್ಳುವವು. ಆರೋಗ್ಯ ವಿಷಯಗಳಲ್ಲಿ ನಿಮ್ಮ ಬಗ್ಗೆ ನೀವೇ ನಿರ್ಲಕ್ಷ್ಯ ಮಾಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಪ್ರಾಪ್ತಿ. ವಾಹನ ಸವಾರರು ಎಚ್ಚರಿಕೆ ಯಿಂದಿರುವುದು ಒಳಿತು. ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ. ನಿಮ್ಮ ವೈವಾಹಿಕ ಜೀವನ ದೈನಂದಿನ ಅಗತ್ಯಗಳ ನೆರವೇರಿಸುವಿಕೆಯ ಕೊರತೆಯಿಂದಾಗಿ ಇಂದು ಒತ್ತಡಕ್ಕೊಳಗಾಗಬಹುದು. ಚಾಣಾಕ್ಷ ಮತಿಗಳಾದ ನೀವು ಯೋಚಿಸದೆ ಯಾವ ಕೆಲಸವನ್ನು ಮಾಡಲಾರಿರಿ. ಇಂದು ಹೂಡಿಕೆಗಳನ್ನು ಮಾಡಬಾರದು.

ಕನ್ಯಾ :-

ವಿಶೇಷ ವ್ಯಕ್ತಿಗಳ ಪರಿಚಯದಿಂದ ಪ್ರಭಾವಿತರಾಗಿ ಮನಸ್ಸಿನಲ್ಲಿ ಉಲ್ಲಾಸ ಮೂಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ. ಹೆಣ್ಣುಮಕ್ಕಳ ವಿಚಾರದಲ್ಲಿ ಸ್ವಲ್ಪಮಟ್ಟಿನ ಮುತುವರ್ಜಿ ವಹಿಸುವುದು ಉತ್ತಮ. ವದಂತಿಗಳಿಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ಗ್ರಹಗಳ ಪ್ರತಿಕೂಲ ಸಂಚಾರದ ದೆಸೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಹಾಗಾಗಿ ದೊಡ್ಡ ಕಾರ್ಯಗಳನ್ನು ಆರಂಭಿಸುವುದು ಸೂಕ್ತವಲ್ಲ. ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನೀವು ಇಂದು ಏನು ಮಾಡಬೇಕು ಅಥವಾ ಮಾಡಬಾರದು ಎಂಬುದನ್ನು ನಿಮ್ಮ ಕುಟುಂಬದ ಸದಸ್ಯರು ನಿರ್ಧರಿಸಲು ಬಿಡಬೇಡಿ. ಗುರುಹಿರಿಯರ ಆಶೀರ್ವಾದವನ್ನು ಪಡೆಯಿರಿ.

ತುಲಾ:

ಹಿರಿಯರ ಮಾತುಗಳಿಗೆ ಅಗೌರವ ತೋರದಿರಿ. ಮಕ್ಕಳ ಪ್ರಗತಿಯು ನಿಮಗೆ ಸಂತಸವನ್ನು ನೀಡುವುದು. ಯಾವುದೇ ಸಂಕಷ್ಟಗಳು ಬಂದರೂ ಹಿರಿಯರ ಮಾತುಗಳಿಂದಾಗಿ ಪರಿಹಾರ ಕಂಡುಕೊಳ್ಳುವವು. ನೀವು ಇಂದು ಪ್ರಯಾಣಿಸುತ್ತಿದ್ದರೆ ನಿಮ್ಮ ಸಾಮಾನಿನ ಬಗ್ಗೆ ಹೆಚ್ಚುವರಿ ಕಾಳಜಿ ತಗೆದುಕೊಳ್ಳಬೇಕಾಗುತ್ತದೆ. ಮಕ್ಕಳ ಶೈಕ್ಷಣಿಕ ವಿಚಾರದಲ್ಲಿ ಒತ್ತಡ ಹೇರದಿರಿ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು.

ವೃಶ್ಚಿಕ :-

ನೆರೆಹೊರೆಯವರಿಂದ ನಿಮ್ಮ ಕೆಲಸಗಳಿಗೆ ಸಹಕಾರ. ಇನ್ನೂ ಸ್ವಲ್ಪ ದಿನದಲ್ಲಿ ನಿಮ್ಮ ಸಮಸ್ಯೆಗಳು ತಿಳಿಗೊಳ್ಳುವುದು. ಮಂಗಳ ಕಾರ್ಯಗಳಲ್ಲಿ ಭಾಗಿಯಾಗುವ ಸುಯೋಗ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಪ್ರವಾಸ ಕಾರ್ಯಕ್ರಮವನ್ನು ಮುಂದೂಡುವುದು ಒಳಿತು. ಕೆಲಸಕ್ಕೆ ಸಂಬಂಧಿಸಿದಂತೆ ಈ ದಿನ ಒಳ್ಳೆಯದಿರುವಂತೆ ಕಾಣುತ್ತದೆ. ಗುರುವಿನ ಸ್ತೋತ್ರವನ್ನು ಪಠಿಸಿ.

ಧನಸ್ಸು:

ಉತ್ತಮ ಕೆಲಸಗಳಿಗಾಗಿ ಮುನ್ನುಗ್ಗಿ ಯಶಸ್ಸನ್ನು ಸಾಧಿಸುವಿರಿ.ನಿಮಗೆ ತಿಳಿಯದಂತೆ ಕೆಲವು ಹಿತಶತ್ರುಗಳ ಕಾಟ ಆರಂಭವಾಗುವುದು. ಬದಲಾಗುತ್ತಿರುವ ಕಾಲಕ್ಕೆ ಹೊಂದಿಕೊಳ್ಳಲು ಹೊಸ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮುಖ್ಯ.ಬೂದಿ ಮುಚ್ಚಿದ ಕೆಂಡದಂತೆ ಇರುವ ಕೆಲವರು ಏಕಾಏಕಿ ನಿಮ್ಮ ಮೇಲೆ ಏರಿ ಬರುವ ಸಂದರ್ಭವಿರುತ್ತದೆ. ನಕಾರಾತ್ಮಕ ಆಲೋಚನೆಗಳು ಮಾನಸಿಕ ಕಾಯಿಲೆಗಳಾಗುವ ಮೊದಲೇ ನೀವು ಅವುಗಳನ್ನು ನಾಶಮಾಡಬೇಕು.  ಹಣಕಾಸಿನ ವ್ಯವಹಾರ ಅಷ್ಟೊಂದು ಲಾಭ ತರಲಾರದು. ಕುಟುಂಬ ಸಮೇತರಾಗಿ ಕ್ಷೇತ್ರ ದರ್ಶನ ಮಾಡುವ ಅವಕಾಶ. ಪ್ರೀತಿಯ ವ್ಯವಹಾರಗಳಲ್ಲಿ ಬಲವಂತ ಮಾಡುವುದನ್ನು ತಪ್ಪಿಸಿ.

ಮಕರ :-

ಪತ್ನಿ ವರ್ಗದವರಿಂದ ನೆರವಿನ ನಿರೀಕ್ಷೆ. ಖರ್ಚಿನ ದೃಷ್ಟಿಯಿಂದ ಹೊಸದಾದ ಒತ್ತಡ ಎದುರಾದರೂ ಬೇರೆ ರೂಪಗಳಿಂದ ಹಣವು ಹರಿದು ಬರುವುದರಿಂದ ಅನುಕೂಲವಾಗುವುದು. ಇಂದು ಜನರು ಹೊಗಳಿಕೆಗಳನ್ನು ನೀಡುತ್ತಾರೆ-ಇವುಗಳನ್ನು ನೀವು ಯಾವಾಗಲೂ ಕೇಳಬಯಸಿರುತ್ತೀರಿ. ನಿಮ್ಮ ಕಾರ್ಯಗಳು ಸುಗಮವಾಗುವುದು. ವೈಯಕ್ತಿಕ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸಂತಸಕ್ಕೆ ಮಡದಿ ಮಕ್ಕಳು ಸಹಾಯ ಮಾಡುವರು.

ಕುಂಭ:-

ಸ್ನೇಹಿತರಿಂದಾಗಿ ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ. ತಾಳ್ಮೆಗೂ ಒಂದು ಮಿತಿ ಇರುತ್ತದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆಯಿಂದಾಗಿ ಉತ್ತಮ ಕಾರ್ಯನಿರ್ವಹಣೆ. ಮನರಂಜನೆ ಮತ್ತು ವೈಭೋಗಗಳ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ. ನೆನೆಗುದಿಗೆ ಬಿದ್ದಿದ್ದ ಕಾರ್ಯಕ್ಕೆ ಚಾಲನೆ ದೊರೆಯುವುದು. ನಿಮ್ಮ ಬಾಸ್ ಇಂದು ನಿಜವಾಗಿಯೂ ಕೆಟ್ಟ ಮನಸ್ಥಿತಿಯೊಡನೆ ಬರಬಹುದು ಹಾಗೂ ಅದನ್ನು ನೀವು ನಿರ್ವಹಿಸುವುದು ನಿಮಗೆ ಕಷ್ಟಕರವಾಗಬಹುದು. ದೂರದ ನೆಂಟರ ಆಗಮನ ಸಾಧ್ಯತೆ. ಹಾಗಾಗಿ ಕೋಪಗೊಳ್ಳುವುದರಲ್ಲಿ ಒಂದು ಅರ್ಥವಿರುತ್ತದೆ.

ಮೀನ:-

ಕೌಟುಂಬಿಕ ಸಮಸ್ಯೆಗಳು ಪರಿಹಾರವಾಗಿ ನೆಮ್ಮದಿ ದೊರಕುವುದು. ನಿಮ್ಮ ಕಷ್ಟದ ದಿನಗಳು ಕೆಲವೇ ದಿನಗಳಲ್ಲಿ ಕರಗಿ ಹೋಗಲಿವೆ. ಒಬ್ಬ ಕುಟುಂಬದ ಸದಸ್ಯರ ಆರೋಗ್ಯದ ಸ್ಥಿತಿ ಸ್ವಲ್ಪ ಒತ್ತಡಕ್ಕೆ ಕಾರಣವಾಗುತ್ತದೆ.  ಮಹಿಳೆಯರು ಸಮಾರಂಭಗಳಲ್ಲಿ ಭಾಗಿಯಾದಾಗ ಆಭರಣಗಳ ಬಗ್ಗೆ ಎಚ್ಚರಿಕೆ. ನಿಮ್ಮನ್ನು ವಿರೋಧಿಸುತ್ತಿದ್ದವರು ನಿಮಗೆ ಹಣಕಾಸಿನ ಸಹಾಯ ಮಾಡಲು ಮುಂದೆ ಬರುವರು. ರಾಜಕೀಯದಲ್ಲಿರುವವರಿಗೆ ಯಶಸ್ಸು. ನೀವು ಸ್ವಲ್ಪ ಪ್ರೀತಿ ಹಂಚಿಕೊಂಡಲ್ಲಿ ಇಂದು ನಿಮ್ಮ ಪ್ರಿಯತಮೆ ನಿಮ್ಮ ದೇವತೆಯಾಗುತ್ತಾಳೆ.  ಆರ್ಥಿಕ ಸ್ಥಿತಿ ಉತ್ತಮಗೊಳ್ಳುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಸುದ್ದಿ

    ಇನ್ಮುಂದೆ ಹೊಸ ಅಂಕಪಟ್ಟಿ ಪಡೆಯಬೇಕೆಂದರೆ ಆಧಾರ್‌ ಕಡ್ಡಾಯ,.!

    ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್‌ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…