News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Animals, India, National, tourism

ಇದು ಒಂಟೆಗಳ ಜಾತ್ರೆ !

756

ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ

ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.


ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.


ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.

ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.

ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್‌ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.



ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್‌ ಸುತ್ತಮುತ್ತಲಿರುವ ಹೋಟೆಲ್‌ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್‌ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್‌ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.

ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.




ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.

ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ

ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • inspirational

    ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು

    ಇಂದಿನ ಸ್ಮಾರ್ಟ್‌ಫೋನ್‌ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್‌ಫೋನ್‌ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಸುದ್ದಿ

    ದೇವಾಲಯಕ್ಕೆ ಹೋಗ್ತಿದ್ದ ವಿವಾಹಿತೆ ಮಹಿಳೆಯ ಮೇಲೆ ಅತ್ಯಾಚಾರವೆಸೆಗಿದ ಕಾಮುಕರು -ವಿಡಿಯೋ ಮಾಡಿ ಅಪ್ಲೋಡ್…!

    ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…

  • ಉಪಯುಕ್ತ ಮಾಹಿತಿ

    ಒಡೆದ ಹಾಲನ್ನು ಬಿಸಾಡುವ ಬದಲು, ಮತ್ತೆ ಅದರಿಂದ ಏನೆಲ್ಲಾ ಮಾಡಬಹುದು ನೋಡಿ…

    ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….