ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ
ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.

ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.

ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.
ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.
ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.

ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್ ಸುತ್ತಮುತ್ತಲಿರುವ ಹೋಟೆಲ್ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.
ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.
ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.
ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ
ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ಚಂದನವನಕ್ಕೆ ರಾಧಿಕಾ ಮತ್ತೆ ಬ್ಯಾಕಪ್ ಆಗಿದ್ದಾರೆ.ಈಗ ದಮಯಂತಿ’ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಈ ಚಿತ್ರದಲ್ಲಿನ ವಿಭಿನ್ನ ಪಾತ್ರಕ್ಕಾಗಿ ರಾಧಿಕಾ ಕುಮಾರಸ್ವಾಮಿ ಬರೋಬ್ಬರಿ 10 ಕೆ.ಜಿ. ತೂಕ ಕಡಿಮೆ ಮಾಡಿಕೊಂಡಿದ್ದಾರಂತೆ. ಈಗಾಗಲೇ ಚಿತ್ರದ ಶೇಕಡ 80 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ.ತಾವು ನಟಿಸುತ್ತಿರುವ ದಮಯಂತಿ ಚಿತ್ರಕ್ಕಾಗಿ 80 ದಿನಗಳ ಕಾಲ ಕಾಲ್ ಶೀಟ್ ಕೊಟ್ಟಿದ್ದು, ಇದಕ್ಕಾಗಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಸಂಭಾವನೆ ತೆಗೆದುಕೊಂಡಿದ್ದಾರಂತೆ. ಈಗಾಗಲೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಭಾರತದ ಹಿಂದೂ ಧರ್ಮವು ಸನಾತನವಾಗಿದ್ದು, ಈ ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳಿದ್ದಾರೆ. ಭಾರತದ ಉದ್ದಗಲಕ್ಕೂ ಪ್ರತಿಯೊಂದು ದೇವರುಗಳ ದೇವಸ್ಥಾನಗಳು, ಪೂಜಾ ಮಂದಿರಗಳು ನಮಗೆ ಸಿಗುತ್ತವೆ. ಆದರೆ ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಶಿವ ಇವರು ಸೃಷ್ಟಿ, ಸ್ಥಿತಿ, ಲಯ
ಕರ್ತರಾಗಿದ್ದು, ಸೃಷ್ಟಿಯ ಮೂಲಕ್ಕೆ ಆಧಾರವಾಗಿರುವ ಬ್ರಹ್ಮನಿಗೆ ಮಾತ್ರ ದೇವಾಲಯಗಳಿಲ್ಲ.ಹಾಗಂತ ಇಲ್ಲವೇ ಇಲ್ಲ ಅಂತಲ್ಲ. ಇಡಿ ವಿಶ್ವದಲ್ಲಿರುವುದು ಒಂದೇ ಒಂದು ದೇವಾಲಯ ಮಾತ್ರ.
ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…