ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ
ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.

ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.

ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.
ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.
ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.

ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್ ಸುತ್ತಮುತ್ತಲಿರುವ ಹೋಟೆಲ್ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.
ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.
ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.
ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ
ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ. ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ. ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ. ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು…
ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್ನಲ್ಲಿ ಬ್ಯಾಕ್ ಟು ಬ್ಯಾಕ್…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…