ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ
ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.

ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.

ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.
ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.
ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.
ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.

ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್ ಸುತ್ತಮುತ್ತಲಿರುವ ಹೋಟೆಲ್ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.
ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.
ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.
ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ
ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…