Animals, India, National, tourism

ಇದು ಒಂಟೆಗಳ ಜಾತ್ರೆ !

743

ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ

ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.


ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.


ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.

ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.

ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್‌ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.



ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್‌ ಸುತ್ತಮುತ್ತಲಿರುವ ಹೋಟೆಲ್‌ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್‌ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್‌ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.

ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.




ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.

ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ

ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಉಪಯುಕ್ತ ಮಾಹಿತಿ

    ಉಪ್ಪಿಂದ ಆಗೋವ ಈ 10 ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-35 ಸಾವಿರ ದಂಡ

    ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…