Animals, India, National, tourism

ಇದು ಒಂಟೆಗಳ ಜಾತ್ರೆ !

720

ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ

ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ.


ಪುಷ್ಕರ್ ಪಟ್ಟಣವು ಪುಷ್ಕರ್ ಕೆರೆಯ ತಟದಲ್ಲಿ ನೆಲೆಸಿದ್ದು ಈ ಕೆರೆಯ ನೀರು ಮಾನಸ ಸರೋವರದ ನೀರಿನಷ್ಟೆ ಪವಿತ್ರವಾದುದು ಎಂದು ನಂಬಲಾಗಿದೆ. ಆದ್ದರಿಂದಲೆ ಎಷ್ಟೊ ಜನ ಈ ಕ್ಷೇತ್ರವನ್ನು ತೀರ್ಥ ರಾಜ ಅಂದರೆ ತೀರ್ಥ ಕ್ಷೇತ್ರಗಳ ರಾಜನೆಂದೂ ಸಹ ಸಂಭೋದಿಸುತ್ತಾರೆ. ಪ್ರತಿ ವರ್ಷವು ಇಲ್ಲಿನ ಪುಷ್ಕರ್ ಕೆರೆಯ ಪ್ರದೇಶದಲ್ಲಿ ಆಯೋಜನೆಗೊಳ್ಳುವ ಪುಷ್ಕರ್ ಮೇಳವು ಪ್ರವಾಸಿ ಆಕರ್ಷಣೆಯ ಉತ್ಸವವಾಗಿದೆ. ಜಗತ್ತಿನಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುವ ಒಂಟೆಗಳ ಉತ್ಸವ ಪೈಕಿ ಒಂದಾಗಿರುವ ಪುಷ್ಕರ್ ಒಂಟೆ ಉತ್ಸವವು ಇತ್ತೀಚೆಗೆ ಕೇವಲ ಒಂಟೆಗಳು ಮಾತ್ರವಲ್ಲದೆ ಇತರೆ ವೈವಿಧ್ಯಮಯ ಕಾರ್ಯಕ್ರಮಗಳಿಂದಲೂ ಸಹ ಆಕರ್ಷಕವಾಗುತ್ತಿದೆ. ವಿಶೇಷವಾಗಿ ವಿದೇಶಿ ಪ್ರವಾಸಿಗರ ನೆಚ್ಚಿನ ಉತ್ಸವವಾಗಿ ಈ ಪುಷ್ಕರ್ ಮೇಳವು ಇಂದು ಕಂಗೊಳಿಸುತ್ತಿದೆ.


ವರ್ಷದಲ್ಲಿ ಐದು ದಿನಗಳ ಕಾಲ ನಡೆಯುವ ಈ ಉತ್ಸವದಲ್ಲಿ ಮುಖ್ಯವಾಗಿ ಒಂಟೆಗಳ ವ್ಯಾಪಾರವು ಪ್ರಥಮ ಆಕರ್ಷಣೆಯಾಗಿದೆ. ಕಾಲ ಉರುಳಿದಂತೆ ಈ ಉತ್ಸವವು ಕೇವಲ ಒಂಟೆಗಳಿಗೆ ಸೀಮತವಾಗಿರದೆ ಇತರೆ ಹಲವು ವಿವಿಧ ಸ್ಪರ್ಧೆಗಳು ಪ್ರವರ್ಧಮಾನಕ್ಕೆ ಬಂದಿವೆ. ಉದಾಹರಣೆಯಾಗಿ “ಮಟ್ಕಾ ಫೋಡ್” (ಗಡಿಗೆ ಒಡೆಯುವುದು), ಉದ್ದ ಮೀಸೆಯ ಸ್ಪರ್ಧೆ, ವಧು ಸ್ಪರ್ಧೆ ಹೀಗೆ ಹಲವು ಆಕರ್ಷಕ ಸ್ಪರ್ಧೆಗಳು ಪ್ರವಾಸಿಗರನ್ನು ಆಕರ್ಷಿಸುತ್ತಿವೆ.

ಹಿಂದೂ ಕ್ಯಾಲೆಂಡರಿನ ಅನುಸಾರ ಕಾರ್ತಿಕ ಏಕಾದಶಿಯಿಂದ ಕಾರ್ತಿಕ ಪೂರ್ಣಿಮೆಯವರೆಗೂ ನಡೆಯುವ ಈ ಉತ್ಸವವು ಒಂಟೆಗಳ ಓಟದ ಸ್ಪರ್ಧೆಯ ಮೂಲಕ ಆರಂಭಗೊಳ್ಳುತ್ತದೆ ಪುಷ್ಕರ್ ಗೆ ಭೇಟಿ ನೀಡಿದಾಗ ಸಮ್ದರ್ಶಿಸಬೇಕಾದ ಒಂದು ಪ್ರಮುಖ ದೇವಾಲಯವೆಂದರೆ ಬ್ರಹ್ಮನ ದೇವಾಲಯ.

ಬ್ರಹ್ಮ ದೇವಸ್ಥಾನವು ಪುಷ್ಕರ್ ಸರೋವರದ ದಂಡೆಯ ಮೇಲೆ ಸ್ಥಿತವಾಗಿದೆ. ಪುಷ್ಕರ್ ನಲ್ಲಿರುವ ಬ್ರಹ್ಮ ದೇವಸ್ಥಾನವು, ಬ್ರಹ್ಮ ದೇವರಿಗೆ ಸಮರ್ಪಿತವಾಗಿರುವ ಭಾರತದಲ್ಲಿ ಕಾಣಸಿಗುವ ಕೆಲವೆ ಕೆಲವು ದೇವಾಲಯಗಳಲ್ಲಿ ಒಂದಾಗಿದೆ. ಇನ್ನು ಪುಷ್ಕರ್ ಪಟ್ಟಣವು ಉತ್ತಮವಾದ ರಸ್ತೆ ಸಂಪರ್ಕ ಹೊಂದಿದ್ದು ಇಲ್ಲಿಗೆ ತೆರಳುವುದು ಸುಲಭವಾಗಿದೆ.

ಈ ಮೇಳದ ಆಕರ್ಷಣೆಯೆಂದರೆ ಜನರು ಈ ಮೇಳಕ್ಕೆ ತಮ್ಮ ಒಂಟೆಗಳನ್ನು ಕರೆದುಕೊಂಡು ಬರುತ್ತಾರೆ. ಒಂಟೆಯನ್ನು ಹೊರತುಪಡಿಸಿ ಇತರ ಪ್ರಾಣಿಗಳೂ ಈ ಉತ್ಸವದಲ್ಲಿ ಭಾಗಿಗೊಳ್ಳುತ್ತವೆ. ಈ ಉತ್ಸವದ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ದೇಶಾದ್ಯಂತದ ಫೋಟೋಗ್ರಾಫರ್‌ಗಳು ಬರುತ್ತಾರೆ. ಈ ಮೇಳದಲ್ಲಿ ಒಂಟೆಗಳಿಗೆ ಸೌಂದರ್ಯ ಸ್ಪರ್ಧೆ ಹಾಗೂ ನೃತ್ಯವನ್ನು ಆಯೋಜಿಸಲಾಗುತ್ತದೆ. ಅದನ್ನು ಹೊರತುಪಡಿಸಿ ಈ ಮೇಳದಲ್ಲಿ ಹಾಡುಗಾರರು, ಜಾದುಗಾರರು ಪಾಲ್ಗೊಳ್ಳುತ್ತಾರೆ.



ದೇಶ ವಿದೇಶಗಳಿಂದ ಜನರು ಈ ಮೇಳವನ್ನು ನೋಡಲು ಬರುತ್ತಾರೆ. ಹಾಗಾಗಿ ಪುಷ್ಕರ್‌ ಸುತ್ತಮುತ್ತಲಿರುವ ಹೋಟೆಲ್‌ಗಳೆಲ್ಲಾ ತುಂಬಿರುತ್ತವೆ. ಅದಕ್ಕಾಗಿ ನೀವು ಮುಂಚಿತವಾಗಿಯೇ ರೂಮ್ ಬುಕ್ ಮಾಡಿಕೊಳ್ಳುವುದು ಒಳ್ಳೆಯದು.
ಬ್ರಹ್ಮ ಮಂದಿರ ಪುಷ್ಕರ್‌ ಒಂದು ಧಾರ್ಮಿಕ ತಾಣವೂ ಹೌದು. ಇಲ್ಲಿ ವಿಶ್ವದ ಏಕೈಕ ಬ್ರಹ್ಮ ಮಂದಿರವಿದೆ. ಜನರು ಇಲ್ಲಿನ ಪುಷ್ಕರ್‌ ಸರೋವರದಲ್ಲಿ ಸ್ನಾನ ಮಾಡಿ ಬ್ರಹ್ಮ ಮಂದಿರದ ದರ್ಶನ ಪಡೆಯುತ್ತಾರೆ.

ಈ ಪಶುಮೇಳದಲ್ಲಿ ನಿಮಗೆ ರಾಜಸ್ತಾನಿ ವಿಧಿ ವಿಧಾನಗಳು, ಸಂಸ್ಕೃತಿಯನ್ನು ಕಾಣಬಹುದು. ಈ ಮೇಳವನ್ನು ಬಹಳ ಸುಂದರವಾಗಿ ಆಚರಿಸಲಾಗುತ್ತದೆ. ಜನರು ತಮ್ಮ ತಮ್ಮ ಒಂಟೆಗಳನ್ನು ಸುಂದರವಾಗಿ ಶೃಂಗರಿಸುತ್ತಾರೆ.




ಪ್ರಯಾಣಿಕರು ಪುಷ್ಕರ್ ಅನ್ನು ಬಸ್ಸು ಮತ್ತು ಟ್ಯಾಕ್ಸಿ ಮೂಲಕವು ತಲುಪಬಹುದಾಗಿದೆ. ಅಜ್ಮೇರ್ ನ ಮುಖ್ಯ ಬಸ್ಸು ತಂಗುದಾಣವು ಪುಷ್ಕರ್ ನಿಂದ 11 ಕಿ.ಮೀ ದೂರದಲ್ಲಿದೆ. ಈ ಬಸ್ ನಿಲ್ದಾಣದಲ್ಲಿ ಬಹುಸಂಖ್ಯೆಯಲ್ಲಿ ಬಸ್ಸುಗಳಿದ್ದು ರಾಜಸ್ಥಾನದ ಇತರೆ ಭಾಗಗಳು ಮತ್ತು ರಾಜಧಾನಿಯಾದ ನವದೆಹಲಿಗೆ ಸಂಪರ್ಕವನ್ನು ಹೊಂದಿವೆ. ಪ್ರವಾಸಿಗರು ಅಜ್ಮೇರ್, ಜೈಪುರ್, ಜೈಸಲ್ಮೇರ್ ಮತ್ತು ದೆಹಲಿಯಿಂದ ವೊಲ್ವೊ, ಡಿಲಕ್ಸ್ ಬಸ್ಸುಗಳ ಸೇವಯನ್ನೂ ಪಡೆಯಬಹುದು.

ಅಜ್ಮೇರ್ ರೈಲು ನಿಲ್ದಾಣವು ಪುಷ್ಕರ್ ಗೆ ಹತ್ತಿರದಲ್ಲಿರುವ ರೈಲು ನಿಲ್ದಾಣ. ಈ ರೈಲು ನಿಲ್ದಾಣವು ಪ್ರಮುಖ ನಗರಗಳಾದ ಆಗ್ರಾ, ನವದೆಹಲಿ, ಅಹ್ಮದಾಬಾದ್ ಮತ್ತು ಜೋಧಪುರ್ ನೊಂದಿಗೆ ಉತ್ತಮವಾದ ಸಂಪರ್ಕವನ್ನು ಹೊಂದಿದೆ. ಶತಾಬ್ದಿ ಎಕ್ಸಪ್ರೆಸ್ಸ್ ಮತ್ತು ಪಿಂಕ್ ಸಿಟಿ ಎಕ್ಸಪ್ರೆಸ್ಸ್ ರೈಲುಗಳು ಅಜ್ಮೇರ್ ಅನ್ನು ನೇರವಾಗಿ ನವದೆಹಲಿ ಮತ್ತು ಜೈಪುರ್ ಗೆ ಸಂಪರ್ಕ ಕಲ್ಪಿಸುತ್ತವೆ

ಜೈಪುರಿನ ಸಂಗನೇರ್ ವಿಮಾನ ನಿಲ್ದಾಣವು ಪುಷ್ಕರ್ ಗೆ ಹತ್ತಿರದ ವಿಮಾನ ನಿಲ್ದಾಣವಾಗಿದೆ. ಈ ವಿಮಾನ ನಿಲ್ದಾಣವು ಪುಷ್ಕರ್ ಗೆ 138 ಕಿ.ಮೀ ದೂರದಲ್ಲಿದ್ದು ಭಾರತದ ಪ್ರಮುಖ ನಗರಗಳೊಂದಿಗೆ ಉತ್ತಮ ಸಂಪರ್ಕವನ್ನು ಹೊಂದಿದೆ. ಇನ್ನು ಸಂಗನೇರ್ ನಿಂದ ಪುಷ್ಕರ್ ಗೆ ತಲುಪಲು ಟ್ಯಾಕ್ಸಿ ಅಥವಾ ಕ್ಯಾಬ್ ಸೇವೆ ಪಡೆಯಬಹುದು.


About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಸಿನಿಮಾ

    ವೈರಲ್ ಆಯ್ತು ರಾತ್ರೋ ರಾತ್ರಿ ಸ್ಟಾರ್ ಆದ ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಕಿಸ್ಸಿಂಗ್ ವಿಡಿಯೋ..!

    ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…