ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.
ಚೀನಾದಲ್ಲಿ ಕಾಂಕ್ರೀಟ್ ಕಟ್ಟಡ, ಕೈಗಾರಿಕೆಗಳು ಹೆಚ್ಚಾಗಿ ಮಾಲಿನ್ಯ ಜಾಸ್ತಿಯಾಗುತ್ತಿದೆ. ಹೀಗಾಗಿ ವಿಶ್ವದ ಮೊದಲ ಫಾರೆಸ್ಟ್ ಸಿಟಿಯ ನಿರ್ಮಾಣಕ್ಕೆ ಚೀನಾ ಕೈ ಹಾಕಿದ್ದು ಕಾಮಗಾರಿಗಳು ಆರಂಭಗೊಂಡಿದೆ.
ಇದು ನಿರ್ಮಾಣ ಆಗುತ್ತಿರುವುದಾದರೂ ಎಲ್ಲಿ.
ಚೀನಾದ ಗುವಾಂಗ್ಕ್ಸಿ ಪ್ರಾಂತ್ಯದ ಲಿಝೌನಲ್ಲಿ ಫಾರೆಸ್ಟ್ ಸಿಟಿ ನಿರ್ಮಾಣಕ್ಕೆ ಯೋಜನೆಯನ್ನು ರೂಪಿಸಲಾಗಿದೆ. ಸುಮಾರು 30,000 ಜನರು ಇಲ್ಲಿ ವಾಸವಾಗುವಂತೆ ಈ ಸಿಟಿ ನಿರ್ಮಾಣವಾಗಲಿದೆ.
ಇದರ ವಿಶೇಷತೆ ಏನು ಗೊತ್ತಾ:-
100ಕ್ಕೂ ಅಧಿಕ ಜಾತಿಯ ಒಟ್ಟು 10 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ಇಲ್ಲಿ ನೆಡಲು ಉದ್ದೇಶಿಸಲಾಗಿದೆ. ಈ ಎಲ್ಲ ಸಸಿಗಳು ಒಟ್ಟು 10,000 ಟನ್ಗತಳಷ್ಟು ಇಂಗಾಲದ ಡೈ ಆಕ್ಸೈಡ್ ಮತ್ತು 57 ಟನ್ ಮಾಲಿನ್ಯಕಾರಕಗಳನ್ನು ಹೀರಿಕೊಳ್ಳಬಹುದು ಎಂದು ಅಂದಾಜಿಸಲಾಗಿದೆ. ಇದರಿಂದ ಭವಿಷ್ಯದಲ್ಲಿ ವಾರ್ಷಿಕವಾಗಿ ಈ 10 ಲಕ್ಷ ಮರಗಳಿಂದ ಸುಮಾರು 900 ಟನ್ಗಳಳಷ್ಟು ಆಮ್ಲಜನಕ ಬಿಡುಗಡೆಯಾಗುವ ಸಾಧ್ಯತೆಯಿದೆ.
ಈ ಫಾರೆಸ್ಟ್ ಸಿಟಿಯಲ್ಲಿ ನಿರ್ಮಾಣವಾಗುವ ಮನೆಯಲ್ಲಿಯೂ ಮರಗಳನ್ನೂ ಬೆಳೆಸುವುದಕ್ಕೆ ಯೋಜನೆ ರೂಪಿಸಲಾಗಿದೆ. ಈ ಸಿಟಿಯಲ್ಲಿ ವೇಗವಾಗಿ ಓಡುವ ರೈಲು, ಕಾರುಗಳು ಎಲ್ಲವೂ ಇರುತ್ತೆ. ಈ ನಗರದಲ್ಲಿ ವಿದ್ಯುತ್ಗೆ ಸೋಲಾರ್ ಶಕ್ತಿ ಬಳಕೆಯಾದರೆ ಜನರು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲಿದ್ದಾರೆ.
ಒಟ್ಟಿನಲ್ಲಿ 175 ಹೆಕ್ಟೇರ್ ಪ್ರದೇಶದಲ್ಲಿ ಈ ಫಾರೆಸ್ಟ್ ಸಿಟಿಯನ್ನು ನಿರ್ಮಾಣವಾಗುತ್ತಿದ್ದು, ಈ ಯೋಜನೆ 2020ಕ್ಕೆ ಪೂರ್ಣಗೊಳ್ಳಲಿದೆ. ಪೂರ್ಣಗೊಂಡ ಬಳಿಕ ವಿಶ್ವದ ಮೊದಲ ಹಸಿರು ನಗರವನ್ನು ನಿರ್ಮಿಸಿದ ದೇಶ ಎಂಬ ಹೆಗ್ಗಳಿಕೆಗೆ ಚೀನಾ ಪಾತ್ರವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…
ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಕಳೆದ ವಾರವಷ್ಟೇ ಆರ್’ಬಿಐ ನೂತನ 200 ಹಾಗೂ 50 ರೂ. ನೋಟುಗಳನ್ನು ಬಿಡುಗಡೆ ಮಾಡಿತ್ತು.