ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ. ದಿಲ್ಲಿಗೆ ಸಮೀಪದಲ್ಲಿ, ಅಲ್ಲಿಂದ 512 ಕಿಲೋಮೀಟರ್ ದೂರಕ್ಕೆ ಹೋದರೆ ಭಾರತದಲ್ಲಿ ಇಸ್ರೇಲ್ ದೇಶ ಕಂಡು ಬರುತ್ತದೆ. ಅಂದರೆ ನೀವು ದಿಲ್ಲಿಯಿಂದ ಹಿಮಾಚಲ ಪ್ರದೇಶದ ಕಸೋಲಾಕ್ಕೆ ಹೋಗಬೇಕು. ಅಲ್ಲಿ ನೀವು ಇಸ್ರೇಲ್ನ್ನು ನೋಡುವಿರಿ.
ಕಸೋಲ್ ಭಾರತದ ಮಿನಿ ಇಸ್ರೇಲ್ ಆಗಿ ಹೋಗಿದೆ:-
ಹಿಮಾಚಲ ಪ್ರದೇಶದಲ್ಲಿರುವ ಕಸೋಲ್ ಕಾಡಿನ ನಡುವಿನ, ಪರ್ವತ ಮತ್ತು ನದಿ ದಡದ ಒಂದು ಪ್ರದೇಶವಾಗಿದೆ. ಇಲ್ಲಿನ ಜನಸಂಖ್ಯೆ ಬಹಳ ಹೆಚ್ಚಿಲ್ಲ. ಜೊತೆಗೆ ಶಾಂತ ಮತ್ತು ತಣ್ಣಗಿನ ವಾತಾವರಣ ಇಲ್ಲಿದೆ. ಈ ಪ್ರದೇಶ, ದೇಶಿ-ವಿದೇಶಿ ಪ್ರತಿಯೊಬ್ಬರನ್ನೂ ತಮ್ಮೆಡೆಗೆ ಸೆಳೆಯುತ್ತದೆ. ಅಂತಹ ಸೌಂದರ್ಯ ಈ ಹಳ್ಳಿಯದ್ದಾಗಿದೆ. ಇಲ್ಲಿಗೆ ಇಸ್ರೇಲಿ ಪ್ರವಾಸಿಗರು ಹೆಚ್ಚು ಬರುವುದರಿಂದ ಮಿನಿ ಇಸ್ರೇಲ್ ಎಂದು ಕರೆಯಲಾಗುತ್ತಿದೆ. ಇಲ್ಲಿಗೆ ಇಸ್ರೇಲಿಗರು ಮಾತ್ರವಲ್ಲ ಬೇರೆಯವರು ಕೂಡಾ ಬರುತ್ತಾರೆ. ಅದರೆ ಹೆಚ್ಚಿನ ಸಂಖ್ಯೆಯಲ್ಲಿ ಇಸ್ರೇಲಿಯನ್ನರು ಬರುತ್ತಾರೆ. ದೇಶದ ವಿದೇಶಗಳ ಮೂಲೆ ಮೂಲೆಗಳಿಂದ ಇಲ್ಲಿಗೆ ಬರುತ್ತಾರೆ.
1990ರಿಂದಲೂ ಇಸ್ರೇಲಿ ಪ್ರವಾಸಿಗರು ಈ ಗ್ರಾಮಕ್ಕೆ ಬರುತ್ತಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಈ ಗ್ರಾಮದ ಸಂಸ್ಕೃತಿಯಲ್ಲಿ ಇಸ್ರೇಲಿನ ಪ್ರಭಾವ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸೈನ್ಯದ ತರಬೇತಿ ಪಡೆದ ಬಳಿಕ ಇಸ್ರೇಲ್ ನಾಗರಿಕರು ಈ ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಅಲ್ಲಿನೋಡಿದರೆ ಇದು ಯಾವುದೊ ಇಸ್ರೇಲಿ ಊರಾಗಿದೆಯೇ ಎಂದು ಅನಿಸುತ್ತದೆ. ಇಲ್ಲಿ ಓದಿ:-ಈ ಪುಟ್ಟ ರಾಷ್ಟ್ರವನ್ನು ಕಂಡ್ರೆ, ಸುತ್ತ ಮುತ್ತಲಿರುವ ದೇಶಗಳಿಗೆ ಭಯ!
ಇಸ್ರೆಲಿಗರು ಮತ್ತು ಈ ಪ್ರದೇಶಕ್ಕೂ ಸಾಂಸ್ಕೃತಿಕವಾಗಿ ಸಂಬಂಧ ಇರುವುದರಿಂದ, ಇಲ್ಲಿಗೆ ಇಸ್ರೇಲಿಗರು ಬರುತ್ತಾರೆ. ಇಲ್ಲಿ ಇಸ್ರೆಲಿಗರು ಹೆಚ್ಚಾಗಿ ಕಂಡುಬರುವುದರಿಂದ ಇಲ್ಲಿ ಅವರ ಹೀಬ್ರೂ ಭಾಷೆಯೇ ಪ್ರಧಾನವಾಗಿ ಹೋಗಿದೆ. ಹಾಗಾಗಿ ಇಲ್ಲಿ ಎಲ್ಲಿ ನೋಡಿದರೂ ಈ ಭಾಷೆಯ ಪೋಸ್ಟರ್’ಗಳೆ ಕಾಣಿಸುತ್ತವೆ. ಹೊಟೇಲುಗಳ ಹೆಸರು ಹೀಬ್ರೂ ಭಾಷೆಯಲ್ಲಿದೆ. ಮತ್ತು ಮೆನು ಕೂಡಾ ಆಹಾರದ ಪಟ್ಟಿಕೂಡಾ ಹೀಬ್ರೂ ಭಾಷೆಯಲ್ಲಿರುತ್ತದೆ. ಸ್ಥಳೀಯರು ಮತ್ತು ಕೆಲವು ಹೊಟೇಲು ಮಾಲಿಕರು ಹೀಬ್ರೂ ಭಾಷೆಯನ್ನುಸ್ವಲ್ಪಸ್ವಲ್ಪ ಕಲಿತುಕೊಂಡಿದ್ದಾರೆ. ಇಲ್ಲಿ ಇಸ್ರೇಲ್ನ ಬಾವುಟ ಕೂಡಾ ಕಂಡುಬರುತ್ತದೆ.
ಇಲ್ಲಿಗೆ ಇಸ್ರೇಲಿಗರಿಗೆ ಅವರದೇ ರೀತಿಯಲ್ಲಿ ಆಹಾರಸಿಗುತ್ತದೆ. ಭಾಷೆ ಮಾತಾಡುವವರು ಇರುತ್ತಾರೆ. ಹೀಗೆ ಎಲ್ಲವೂ ಸಿಗುವುದರಿಂದ ಅವರು ಇಲ್ಲಿಗೆ ಬರುತ್ತಾರೆ. ಈ ಜನರು ತಾವಿರುವಲ್ಲಿ ಯಾವುದೇ ಭಾರತೀಯನನ್ನು ನೋಡಲು ಬಯಸುವುದಿಲ್ಲ.
ತಮ್ಮದೇ ದೇಶದಲ್ಲಿ ಭಾರತೀಯರಿಗೆ ನಿಷೇಧ:
ಹೌದು, ಈ ಸತ್ಯ ನಂಬಲೇಬೇಕು. ನೀವು ಅಲ್ಲಿಗೆ ಹೋದರೆ ನಿಮಗೆ ಅಲ್ಲಿಗೆ ಪ್ರವೇಶ ಸಿಗಲಾರದು. ಕಸೋಲ್ ನಲ್ಲಿ ಹೀಬ್ರೂ ಭಾಷೆಯಲ್ಲಿ ಬೋರ್ಡ್ ಇರುತ್ತದೆ. ಅಲ್ಲಿ ಒಂದು ರೆಸ್ಟಾರೆಂಟ್ನಲ್ಲಿ ಭಾರತೀಯರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.
ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಟೈಟಾನಿಕ್ ಸಿನಿಮಾವನ್ನ ಯಾರು ತಾನೇ ನೋಡಿಲ್ಲ ಹೇಳಿ, ಭಾರಿ ಗಾತ್ರದ ಈ ಹಡಗು ಪ್ರಯಾಣಿಸಿದ ರೀತಿ ಹಾಗು ಹೇಗೆ ಮುಳುಗಿತು ಎನ್ನುವುದನ್ನು ವಿವರವಾಗಿ ಹೇಳಿಕೊಟ್ಟ ಈ ಚಿತ್ರ ಇಂದಿಗೂ ದಾಖಲೆಯನ್ನು ಬರೆದಿದೆ. ಹಾಲಿವುಡ್ ನ ಸಿನಿಮಾ ನಿರ್ಮಾಣದ ರೂಪುರೇಷೆಯನ್ನೇ ಬದಲಿಸಿದ್ದ ಈ ಚಿತ್ರ ಅಂದಿನ ಕಾಲದ ಬಿಗ್ ಬಜೆಟ್ ಮೂವಿ ಆಗಿತ್ತು, ಚಿತ್ರ ನೋಡಿದವರು ಕೂಡ ಒಂದು ಕ್ಷಣ ದಂಗಾಗಿದ್ದರು, ಅಷ್ಟು ಎಫೆಕ್ಟ್ ನೀಡಿ ಇಡೀ ಚಿತ್ರ ತಂಡ ಇದೊಂದು ಘಟನೆಯನ್ನು ಜನರ ಮುಂದೆ ಇಡಲು ಪ್ರಯತ್ನಿಸಿದ್ದರು….
ಬಿಹಾರದ ಮುಜಾಫರ್ ನಗರದ ರೈಲ್ವೆ ನಿಲ್ದಾಣವೊಂದರಲ್ಲಿ ಶ್ರಮಿಕ್ ರೈಲಿನಲ್ಲಿ ಬಂದಿಳಿದ ಮಹಿಳೆಯೊಬ್ಬಳು ಹಸಿವು, ಸುಸ್ತಿನಿಂದ ರೈಲ್ವೆ ನಿಲ್ದಾಣದಲ್ಲೇ ಸಾವನ್ನಪ್ಪಿದ್ದಳು. ಆ ಮಹಿಳೆ ಸಾವನ್ನಪ್ಪಿರುವ ವಿಷಯ ಗೊತ್ತಾಗುತ್ತಿದ್ದಂತೆ ಜೊತೆಗಿದ್ದ ಸಂಬಂಧಿಕರು ಆಕೆಯ ಮೃತದೇಹವನ್ನು ಮುಜಾಫರ್ ನಗರದ ರೈಲ್ವೆ ನಿಲ್ದಾಣದಲ್ಲೇ ಬಟ್ಟೆಯಿಂದ ಸುತ್ತಿ ಇರಿಸಿದ್ದರು. ಆದರೆ, ಆ ಬಟ್ಟೆಯನ್ನು ಎಳೆದು ತೆಗೆದ ಆಕೆಯ ಮಗು ಅಮ್ಮನನ್ನು ಎಬ್ಬಿಸಲು ಪರದಾಡುತ್ತಿತ್ತು. 23 ವರ್ಷದ ಬಿಹಾರ ಮೂಲದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಗುಜರಾತ್ನ ಅಲಹಾಬಾದ್ನಲ್ಲಿ ವಾಸವಾಗಿದ್ದಳು. ಕಾರ್ಮಿಕಳಾಗಿ ಕೆಲಸ ಮಾಡುತ್ತಿದ್ದ ಆಕೆಗೆ ಲಾಕ್ಡೌನ್…