ದೇವರು-ಧರ್ಮ

ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ!ಈ ಆಚರಣೆ ಮಾಡಿದ್ರೆ ಏನಾಗುತ್ತೆ ಗೊತ್ತಾ..?

1340

ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

ಏನಿದು ವೈಕುಂಠ ಏಕಾದಶಿ..?

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.

“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ…

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಏಕಾದಶಿ ಆಚರಣೆ ಮಾಡುವುದು ಹೇಗೆ..?

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಭಗವಂತನ ದರ್ಶನ ಮಾಡುವುದು ಹೇಗೆ..?

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.

ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.

ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ಮುಕ್ಕೋಟಿ ದ್ವಾದಶಿ ಅಂದರೇನು..?

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

 

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ಸುದ್ದಿ

    ಬಿಗ್ ಬಾಸ್ ಶೋಗಳ TRP ರಿಲೀಸ್ ಮಾಡಿದ ‘ಎಂಡೆಮೊಲ್’: ಈ ಸಲ ಇತಿಹಾಸವನ್ನು ಸೃಷ್ಟಿಸಿದ ತೆಲುಗು ಬಿಗ್ ಬಾಸ್,.!

    ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • nation, National, News Paper

    ಅತಿ ಹೆಚ್ಚು ಸಾಕ್ಷರತೆ ಹೊಂದಿರುವ ಭಾರತದ ಟಾಪ್ 5 ರಾಜ್ಯಗಳು ಇಲ್ಲಿವೆ.

    “ಓದುವುದಕ್ಕಿಂತ ದೊಡ್ಡ ಸಂತೋಷವಿಲ್ಲ, ಸ್ನೇಹಿತರಿಗಿಂತ ದೊಡ್ಡವರಲ್ಲ ..” ಎಂದು ಪ್ರಧಾನಿ ನರೇಂದ್ರ ಹೇಳಿದರು. 50 ವರ್ಷಗಳಿಗಿಂತ ಹೆಚ್ಚು ಕಾಲ ಅಂತರರಾಷ್ಟ್ರೀಯ ಸಾಕ್ಷರತಾ ದಿನವು ಎಲ್ಲರಿಗೂ ಸಾಕ್ಷರತೆಯ ಮಹತ್ವದ ಬಗ್ಗೆ ನೆನಪಿಸುತ್ತಿದೆ. ಸಾಂಕ್ರಾಮಿಕ ಸಮಯದಲ್ಲಿ ವಿಶ್ವದ ಮಿಲಿಯನ್ ಜನರಲ್ಲಿ ಸುಮಾರು 733 ಮಿಲಿಯನ್ ಜನರಿಗೆ ಓದಲು ಮತ್ತು ಬರೆಯಲು ಸಾಧ್ಯವಾಗುತ್ತಿಲ್ಲ ಎಂದು ಯುನೆಸ್ಕೋ ಹೇಳಿದೆ. ನಾವು .. ಸಾಕ್ಷರತೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ, ಸುಧಾರಣೆಯನ್ನು ತೋರಿಸಿದ ಭಾರತೀಯ ರಾಜ್ಯಗಳ ನೋಟ ಇಲ್ಲಿದೆ. ಜನಗಣತಿ…