ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೇ ತಿಂಗಳ ಇಪ್ಪತ್ತೊಂಬತ್ತನೇ ತಾರೀಕು ವೈಕುಂಠ ಏಕಾದಶಿ ಹಾಗೂ ಮೂವತ್ತರಂದು ಮುಕ್ಕೋಟಿ ದ್ವಾದಶಿ ಇದೆ. ಸೂರ್ಯನು ಉತ್ತರಾಯಣಕ್ಕೆ ಬದಲಾಗುವ ಮೊದಲು ಬರುವ ಧನುರ್ಮಾಸದ ಶುದ್ಧ ಏಕಾದಶಿಯನ್ನೇ ವೈಕುಂಠ ಏಕಾದಶಿ ಅಥವಾ ಮುಕ್ಕೋಟಿ ಏಕಾದಶಿ ಎನ್ನುತ್ತಾರೆ. ಸೂರ್ಯನು ಧನುಸ್ಸುನಲ್ಲಿ ಪ್ರವೇಶಿಸಿದ ಅನಂತರ ಮಕರ ಸಂಕ್ರಮಣದವರೆಗೆ ನಡೆಯುವ ಮಾರ್ಗ ಮಧ್ಯೆ ಮುಕ್ಕೋಟಿ ಏಕಾದಶಿ ಬರುತ್ತದೆ.

“ವೈಕುಂಠಏಕಾದಶಿ” ಇದರಲ್ಲಿ ಎರಡು ಪದಗಳು ಸೇರಿಕೊಂಡಿವೆ. ಒಂದು “ವೈಕುಂಠ”, ಎರಡನೆಯದು ಏಕಾದಶಿ, ಮೊದಲು ಇವುಗಳ ಸ್ಥೂಲ ಅರ್ಥ ಹೀಗಿದೆ: “ವೈಕುಂಠ” ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣುವು ವಿಕುಂಠ ಯೆಂಬ “ಸ್ತ್ರೀ”ಯಲ್ಲಿ ಅವತರಿಸಿದನು, ಇದರಿಂದ ನಾರಾಯಣನಿಗೆ ವೈಕುಂಠನೆಂಬ ಹೆಸರು ಬಂತೆಂದು ಮಹಾಭಾರತದ ಶಾಂತಿಪರ್ವದಿಂದ ತಿಳಿದುಬರುತ್ತದೆ.
“ಏಕಾದಶಿ” ಎಂದರೆ ಹನ್ನೊಂದನೆಯ ತಿಥಿ. “ಏಕಾದಶಿ” ಒಂದು ವ್ರತ. ಏಕಾದಶಿ ದಿನದಂದು ಉಪವಾಸವಿದ್ದು, ದ್ವಾದಶಿಯ ದಿನ, ಆ ತಿಥಿಯಲ್ಲಿಯೇ ನಿತ್ಯಕರ್ಮ ಮುಗಿಸಿ ಭೋಜನ ಮಾಡಬೇಕು. ದಶಮಿಯಂದು ಅಂದರೆ ಏಕಾದಶಿಯ ಹಿಂದಿನ ದಿನ ಒಂದು ಹೊತ್ತು ಮಧ್ಯಾಹ್ನ ಊಟಮಾಡಿ, ಭೋಗಗಳನ್ನು ತ್ಯಜಿಸಿ, ಮರುದಿನ ಏಕಾದಶಿ ಉಪವಾಸಮಾಡಬೇಕು. ಇಲ್ಲಿ ಉಪವಾಸ ಎಂದರೆ ಆಹಾರ ಸೇವಿಸದಿರುವುದು ಎಂಬುದೊಂದು ಅರ್ಥವಾದರೆ ಇನ್ನೊಂದು ಅರ್ಥ ಭಗವಂತನ ಸಮೀಪದಲ್ಲಿರುವುದು. ಎಂದರೆ ಶುಚಿರ್ಭೂತನಾಗಿ ಎಡಬಿಡದೆ ಭಗವಂತನ ಸ್ಮರಣೆಮಾಡುತ್ತಿರುವುದು ಎಂದರ್ಥ.

ವೈಕುಂಠ ಏಕಾದಶಿಯ ಪ್ರಾಮುಖ್ಯತೆ ಪದ್ಮ ಪುರಾಣದಲ್ಲಿ ಉಲ್ಲೇಖವಾಗಿದೆ. ಪುರಾಣದ ಪ್ರಕಾರ ವಿಷ್ಣುವು ಏಕಾದಶಿ, ಅಂದರೆ ಹೆಣ್ಣಿನ ರೂಪ ಪಡೆದು ಮುರನ್ ಎಂಬ ರಾಕ್ಷಸನನ್ನು ಮಾರ್ಗಶಿರ ಮಾಸದಲ್ಲಿ ಕೊಲ್ಲುತ್ತಾನೆ. ಇಂದಿನ ದಿನ ವಿಷ್ಣುವನ್ನು ಯಾರು ಪೂಜಿಸುತ್ತಾರೋ ಅಂಥವರು ಸತ್ತ ಮೇಲೆ ಮೋಕ್ಷವನ್ನು ಪಡೆದು ವೈಕುಂಠವನ್ನು ಸೇರುತ್ತಾರೆ ಎಂದು ವಿಷ್ಣು ಹೇಳುತ್ತಾನೆ.

ಅಂದು ವೈಕುಂಠ ಏಕಾದಶಿ ಆಚರಣೆ ಮಾಡಲು ಇಷ್ಟ ಪಟ್ಟವರು ಹುಳಿ, ಉಪ್ಪು, ಖಾರ ಇರುವ ತಿಂಡಿಗಳನ್ನು ಸೇವಿಸಬಾರದು.ಹಾಲು,ಬಾಳೆಹಣ್ಣು,ಸಜ್ಜಿಗೆ ತಿನ್ನಬಹುದು. ಎಲ್ಲಾ ಏಕಾದಶಿಯ ದಿನಗಳ ಹಾಗೆ ಇಂದಿನ ದಿನವೂ ಜನರು ಉಪವಾಸ ಮಾಡಿ ಇಡೀ ರಾತ್ರಿ ಜಾಗರಣೆ ಮಾಡುತ್ತಾರೆ. ಕೆಲವರು ಜಪ, ತಪ್ಪಸ್ಸು ಹಾಗು ಹರಿ ಕೀರ್ತನೆಯನ್ನು ಹಾಡುತ್ತಾರೆ. ಏಕಾದಶಿಯಂದು ಅಕ್ಕಿ ಸೇವಿಸುವುದಲ್ಲಿ ಏಕೆಂದರೆ ನಂಬಿಕೆಗಳ ಪ್ರಕಾರ ಮುರನ್ ಎಂಬ ರಾಕ್ಷಸನು, ತಿಂದಿರುವ ಅನ್ನದ ಅಗಳಲ್ಲಿ ಏಕಾದಶಿಯ ದಿನ ಅವಿತುಕೊಂಡಿರುತ್ತಾನೆ.

ಇಂದಿನ ದಿನ ವೈಕುಂಠದ ಬಾಗಿಲಿಗಳು ತೆರೆದಿರುತ್ತದೆ. ವಿಷ್ಣು ದೇವಸ್ಥಾನಗಳಲ್ಲಿ ಈ ದಿನ ಅತಿ ವಿಶೇಷವಾದದ್ದು ಹಾಗು ಇಂದಿನ ದಿನ ವೈಕುಂಠ ದ್ವಾರ ಎಂಬ ಬಾಗಿಲನ್ನು ತೆರೆಯಲಾಗುತ್ತದೆ. ಗರ್ಭ ಗುಡಿಯ ಒಳಭಾಗವನ್ನು ಸುತ್ತುವರೆದಿರುವ ಈ ದ್ವಾರದ ಮೂಲಕ ಭಕ್ತರು ಪ್ರದಕ್ಷಿಣೆಯನ್ನು ಹಾಕುತ್ತಾರೆ. ವೈಕುಂಠ ಏಕಾದಶಿ ಶ್ರೀರಂಗಂ ನಲ್ಲಿರುವ ರಂಗನಾಥ ಸ್ವಾಮಿ ದೇವಸ್ಥಾನ, ತಿರುಮಲ ತಿರುಪತಿ ಬಾಲಾಜಿ ದೇವಸ್ಥಾನ, ಭದ್ರಾಚಲಂ ದೇವಸ್ಥಾನ ಹಾಗು ಮುಂತಾದ ದೇವಸ್ಥಾನಗಳಲ್ಲಿ ಬಹಳ ವಿಶೇಷ.
ಈ ದಿನ ವೈಕುಂಠದ ಬಾಗಿಲು ತೆರೆದಿರುತ್ತದೆ ಎಂದು ವೈಷ್ಣವ ಆಲಯಗಳಲ್ಲಿ ಉತ್ತರ ದ್ವಾರದ ಬಳಿ ಮುಂಜಾನೆ ಭಗವಂತನ ದರ್ಶನಕ್ಕಾಗಿ ಕಾದಿರುತ್ತಾರೆ.ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ.
ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು. ಇಲ್ಲಿ ತಲೆ ಬಾಗುವುದರ ಅರ್ಥ ಏನೆಂದರೆ,ನಮ್ಮ ಅಹಂಕಾರವನ್ನು ಕಳೆದುಕೊಳ್ಳುವುದು.ಅಂದರೆ ನಾವು ಅಹಂಕಾರ ಬಿಟ್ಟಾಗ ಮಾತ್ರ ನಿಜವಾದ ಭಗವಂತನ ದರ್ಶನವಾಗುತ್ತದೆ.

ವೈಕುಂಠ ಏಕಾದಶಿಯನ್ನು ಈ ಹೆಸರಿನಲ್ಲಿ ಕೂಡ ಕರೆಯುತ್ತಾರೆ. ಈ ದಿನದಂದು ವಿಷ್ಣುವಿನ ಆರಾಧನೆಯನ್ನು ಮಾಡುವುದು ಜನನ ಮತ್ತು ಮರಣದ ನೋವಿನಿಂದ ಮುಕ್ತಿಯನ್ನು ನೀಡುತ್ತದೆ ಎಂದಾಗಿದೆ. ಈ ಚಕ್ರದಿಂದ ಆತ್ಮವು ಬಿಡುಗಡೆ ಹೊಂದಿ, ವಿಷ್ಣುವಿನ ಪಾದದಲ್ಲಿ ಸಮಾಧಾನವನ್ನು ಹೊಂದುತ್ತದೆ ಎಂದಾಗಿದೆ. ಆದ್ದರಿಂದ ಈ ಪವಿತ್ರ ದಿನದಂದು ವಿಷ್ಣು ಭಕ್ತರು ಉಪವಾಸವನ್ನು ಕೈಗೊಳ್ಳುತ್ತಾರೆ.
ಈ ದಿನ ಮಹಾವಿಷ್ಣು ಗರುಡ ವಾಹನದ ಮೇಲೆ ಮೂರು ಕೋಟಿ ದೇವತೆಗಳೊಂದಿಗೆ ಭೂಲೋಕಕ್ಕೆ ಇಳಿದುಬಂದು ಭಕ್ತರಿಗೆ ದರ್ಶನ ನೀಡುತ್ತಾನೆ. ಆದಕಾರಣ ಇದಕ್ಕೆ ಮುಕ್ಕೋಟಿ ಏಕಾದಶಿ ಎಂಬ ಹೆಸರು . ಈ ದಿನ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜೆಗಳು , ಹೋಮ, ಹವನ ಜಪ ,ತಪಗಳು ನಡೆಯುತ್ತವೆ .ಈ ದಿನ ಉಪವಾಸ ಹಾಗು ಜಾಗರಣೆ ಮಾಡಿದರೆ ಒಳ್ಳೆಯದಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…