ಗ್ಯಾಜೆಟ್

ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

373

ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ “ಇನ್‌ಮಾರ್‌ಸ್ಯಾಟ್’ ಸಹಾಯದಿಂದ ಬಿಎಸ್ಎನ್ಎಲ್ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡಲಿದೆ. ಸಾಮಾನ್ಯ ಮೊಬೈಲ್ ನೆಟ್‌ವರ್ಕ್ ಇಲ್ಲದ ಜಾಗದಲ್ಲಿ ಸ್ಯಾಟಿಲೈಟ್ ಫೋನ್ ಸೇವೆ ಇರಲಿದೆ. ಇದಕ್ಕಾಗಿ ಇನ್‌ಮಾರ್‌ಸ್ಯಾಟ್ ಒಟ್ಟು 14 ಉಪಗ್ರಹಗಳನ್ನು ಹೊಂದಿದೆ.

ಇಲ್ಲಿ ಓದಿರಿ :- ರೂ 799ಕ್ಕೆ ನೋಕಿಯಾ !!!

ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆ:- 1979ರಲ್ಲಿ ಯುನಿಟೆಡ್ ನೇಷನ್ ನಲ್ಲಿ ಆರಂಭವಾದ ಅಂತರರಾಷ್ಟ್ರೀಯ ಮೊಬೈಲ್‌ ಉಪಗ್ರಹ ಸಂಘಟನೆಯಲ್ಲಿ ಭಾರತ ಸಂಸ್ಥಾಪಕ ಸದಸ್ಯವನ್ನು ಹೊಂದಿದೆ. ಭಾರತ ಸದ್ಯ ಪುಣೆಯಲ್ಲಿ ಸ್ಯಾಟಿಲೈಟ್ ಫೋನ್ ಸೇವೆಗೆ ಅಗತ್ಯವಿರುವ ಭೂ ವಿನಿಮಯ ಕೇಂದ್ರವನ್ನು ಸ್ಥಾಪಿಸಿದೆ.

ವಿಮಾನದಲ್ಲಿ, ಹಡಗಿನಲ್ಲೂ ಸೇವೆ ಇರಲಿದೆ:- ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ನೀಡುತ್ತಿದ್ದು, ಇದು ವಿಮಾನದಲ್ಲಿ ಪ್ರಯಾಣಿಸುವವರಿಗೆ ಮತ್ತು ಹಡಗಿನಲ್ಲಿ ಪ್ರಯಾಣಿಸುವರಿಗೆ ಸಹಾಯಕಾರಿಯಾಗಲಿದ್ದು, ಎಲ್ಲಿಂದ ಬೇಕಾದರು ಕರೆ ಮಾಡುವ ಮತ್ತು ಸ್ವೀಕರಿಸುವ ಅವಕಾಶ ಇರಲಿದೆ.

ವಾಯ್ಸ್ ಮತ್ತು ಎಸ್‌ಎಂಎಸ್ ಮಾತ್ರ ಸಾಧ್ಯ:-  ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಸೇವೆಯಲ್ಲಿ ಬಳಕೆದಾರರು ಕೇವಲ ವಾಯ್ಸ್ ಕರೆ ಮತ್ತು ಎಸ್‌ಎಂಎಸ್ ಗಳನ್ನು ಮಾತ್ರವೇ ಮಾಡಲು ಸಾಧ್ಯವಿರಲಿದೆ. ಇದನ್ನು ಬಳಕೆ ಮಾಡಬೇಕಾಗದರೆ ನೆಟ್‌ವರ್ಕ್ ಇಲ್ಲ ಎನ್ನುವ ಮಾತೇ ಇಲ್ಲ.

ಟಿಸಿಎಲ್ ಸೇವೆ ಅಂತ್ಯ:- ಇದುವರೆಗೂ ದೇಶದಲ್ಲಿ ಸ್ಯಾಟಲೈಟ್ ಫೋನ್‌ ಸೇವೆಯನ್ನು ನೀಡುತ್ತಿದ್ದ ಟಾಟಾ ಕಮ್ಯುನಿಕೇಷನ್ಸ್ ಲಿ ಜೂನ್ ಅಂತ್ಯದಿಂದ ತನ್ನ ಸೇವೆಯನ್ನು ನಿಲ್ಲಿಸಲಿದ್ದು, ಅದನ್ನು ಬಿಎಸ್ಎನ್ಎಲ್ ಮುಂದುವರೆಸಿಕೊಂಡು ಹೋಗಲಿದೆ ಎನ್ನಲಾಗಿದೆ.

ಮೊಬೈಲ್ ನಂತೆಯೇ ಇರಲಿದೆ:- ಬಿಎಸ್ಎನ್‌ಎಲ್ ಸ್ಯಾಟಿಲೈಟ್ ಫೋನ್ ಬಳಕೆಗೆ ಮೊಬೈಲ್‌ ಫೋನ್‌ ಮಾದರಿಯ ಉಪಕರಣ ದೊರೆಯಲಿದೆ. ಇದಕ್ಕಾಗಿ ದೊಡ್ಡ ಗ್ರಾತದ ಉಪಕರಣ ಬಳಕೆಯ ಅವಶ್ಯಕತೆ ಇರುವುದಿಲ್ಲ.

ಶೀಘ್ರವೇ ಜನ ಸಾಮಾನ್ಯರಿಗೂ ಈ ಸೇವೆ:- ಸದ್ಯ ಭಾರತದಲ್ಲಿ ಸ್ಯಾಟಿಲೈಟ್ ಫೋನ್ ಸೇವೆಯನ್ನು ಪೊಲೀಸ್‌ ವ್ಯವಸ್ಥೆ, ರೈಲ್ವೆ ಇಲಾಖೆ, ಗಡಿ ಭದ್ರತಾ ಪಡೆ ಮತ್ತು ಹಡಗುಗಳಲ್ಲಿ ಮಾತ್ರವೇ ಬಳಸುವ ಅವಕಾಶವನ್ನು ಮಾಡಿಕೊಡಲಾಗಿತ್ತು. ಆದರೆ ಮುಂದೇ ಜನರಿಗೆ ಈ ಸೇವೆ ವಿಸ್ತರಿಸುವ ಯೋಜನೆಯನ್ನು ರೂಪಿಸಲಾಗಿದೆ.

ಆದರೆ ದುಬಾರಿ ಬೆಲೆ:- ಸ್ಯಾಟಿಲೈಟ್ ಫೋನ್ ಪೋನ್‌ನಲ್ಲಿ ಒಂದು ಕರೆ ಮಾಡಬೇಕಾಗಿದರೆ ಪ್ರತಿ ನಿಮಿಷಕ್ಕೆ ರೂ.35 ರಿಂದ ರೂ. 45 ಪಾವತಿಸಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಸುದ್ದಿ

    ಮದುವೆ ಮೆರವಣಿಗೆಗೆ ಬಂದು ಸ್ಮಶಾನಕ್ಕೆ ಸೇರಿದ್ರು…ಕಾರಣ?

    ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್‍ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ಸುದ್ದಿ

    ಈ ವರ್ಷ ಭಾರತೀಯರು ಗೂಗಲ್ ನಲ್ಲಿ ಅತೀ ಹೆಚ್ಚಾಗಿ ಸರ್ಚ್ ಮಾಡಿ ನೋಡಿದ್ದು ಏನ್ ಗೊತ್ತಾ..?

    ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.