ಆರೋಗ್ಯ

ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

594

ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.ಈ ಮೊಡವೆಗಳಿಗೆ ಹುಡುಗ ಹುಡುಗಿ ಚಿಕ್ಕವರು ದೊಡ್ಡವರು ಎಂಬ ಭೇದವಿಲ್ಲ ಎಲ್ಲರಿಗು ಇವು ಕಾಟ ಕೊಡುತ್ತಲೇ ಇರುತ್ತವೆ.

ಇವುಗಳಲ್ಲ ಹೇಳ ಹೆಸರಿಲ್ಲದಂತೆ ಹೋಗಲಾಡಿಸಲು ನಾವು ಹಲವು ಪ್ರಯತ್ನಗಳನ್ನ ಮಾಡಿ ಸೋತಿರುತ್ತೇವೆ. ಆದರೆ ಇನ್ನು ಮುಂದೆ ಸೋಲುವ ಮಾತಿಲ್ಲ, ಏಕೆಂದರೆ ಈ ಮೊಡವೆಗಳನ್ನ ಹೋಗಲಾಡಿಸಲು ಸುಲಭವಾದ ಉಪಾಯ ಇಲ್ಲಿದೆ ನೋಡಿ.

ಸೌತೆಕಾಯಿ

 

ಸೌತೆಕಾಯಿಯ ತಾಜಾ ಬಿಲ್ಲೆಗಳನ್ನು ಮುಖಕ್ಕೆ ಮಾಲೀಶು ಮಾಡಿದರೆ ಮೊಡವೆಯ ಕಲೆಗಳು ನಿವಾರಣೆಯಾಗುತ್ತವೆ.

 

ಬೆಳ್ಳುಳ್ಳಿ ರಸ

ಬೆಳ್ಳುಳ್ಳಿ ಜಜ್ಜಿ ರಸ ತೆಗೆದು ಅದನ್ನು ಮೊಡವೆಯ ಜಾಗಕ್ಕೆ ಹಚ್ಚಿ ಸ್ವಲ್ಪ ಹೊತ್ತು ಹಾಗೆಯೇ ಬಿಡಿ. ನಂತರ ನೀರಿನಿಂದ ಸ್ವಚ್ಛಗೊಳಿಸಿ. ಇದು ಮೊಡವೆಗಳನ್ನು ನಿವಾರಿಸಲು ಪರಿಣಾಮಕಾರಿ ವಿಧಾನ.ಮೊಡವೆ ನಿವಾರಿಸಲು ಮತ್ತೊಂದು ವಿಧಾನವೆಂದರೆ ಬೆಳ್ಳುಳ್ಳಿಯ ಎಸಳನ್ನು ಅರ್ಧ ಕತ್ತರಿಸಿ ಮೊಡವೆ ಇರುವ ಭಾಗಕ್ಕೆ ಲೇಪಿಸಿದರೆ ಮೊಡವೆ ಮಾಯುತ್ತದೆ.

ಜೇನುತುಪ್ಪ

ಶುದ್ಧ ಜೇನುತುಪ್ಪಕ್ಕೆ ಅರಸಿನ ಬೆರೆಸಿ ಲೇಪಿಸಿದರೆ ಮೊಡವೆ ಶೀಘ್ರ ಮಾಯುತ್ತದೆ.

ಗ್ರೀನ್ ಟೀ

ಗ್ರೀನ್ ಟೀ ತಯಾರಿಸಿ ಫ್ರಿಡ್ಜ್‌ನಲ್ಲಿರಿಸಿ ಐಸ್‌ ಕ್ಯೂಬ್‌ ತಯಾರಿಸಿ. ಇದನ್ನು ನಿಧಾನವಾಗಿ ಮುಖದ ಮೇಲೆ ಮೊಡವೆ ಇರುವ ಜಾಗದ ಮೇಲೆ ತಿಕ್ಕಿ. ಹೀಗೆ ಮಾಡುವುದರಿಂದ ನಿಮ್ಮ ಚರ್ಮದ ಜಿಡ್ಡು ನಿವಾರಣೆಯಾಗುತ್ತದೆ.

ನಿಂಬೆಹಣ್ಣು

ನಿಂಬೆರಸದಲ್ಲಿ ಸಿಟ್ರಿಕ್‌ ಆಮ್ಲದ ಜೊತೆ ಆ್ಯಸ್ಕೂರ್‌ಬಿಕ್‌ ಆಮ್ಲದ ಅಂಶವಿರುವುದರಿಂದ ಒಂದು ಹತ್ತಿ ಉಂಡೆಯಲ್ಲಿ ತಾಜಾ ನಿಂಬೆರಸವನ್ನು ಅದ್ದಿ ರಾತ್ರಿ, ಅದನ್ನು ಮೊಡವೆಯ ಭಾಗಕ್ಕೆ ಲೇಪಿಸಿ ಮರುದಿನ ತೊಳೆಯಬೇಕು.

 ಚಂದನ

ಚಂದನವನ್ನು ಹಾಲಿನಲ್ಲಿ ಬೆರೆಸಿ ಮೊಡವೆಯಾದ ಜಾಗಕ್ಕೆ ಹಚ್ಚಿ ಹಾಗೇ ಬಿಡಿ. ಒಣಗಿದ ನಂತರ ತಂಪಾದ ನೀರಿನಲ್ಲಿ ತೊಳೆಯಿರಿ.

ಟೊಮೆಟೊ

ಟೊಮೆಟೊ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚುವುದರಿಂದ ಮುಖ ಮೃದುವಾಗುತ್ತದೆ ಎಂಬ ವಿಷಯ ನಿಮಗೆ ಗೊತ್ತೇ ಇದೆ. ಅದೇ ರೀತಿ ದಿನಕ್ಕೆ ಎರಡು ಬಾರಿ ಟೊಮೆಟೊ ರಸವನ್ನು ಮೊಡವೆಗಳ ಮೇಲೆ ಹಚ್ಚಿ ನಿಧಾನವಾಗಿ ಮಸಾಜ್‌ ಮಾಡಿದರೆ ಕಲೆಗಳು ವಾಸಿಯಾಗುತ್ತದೆ.

ಟೂತ್‌ಪೇಸ್ಟ್‌

ಟೂತ್‌ಪೇಸ್ಟ್‌ನ ಬಿಳಿಭಾಗದಲ್ಲಿ ಬೇಕಿಂಗ್‌ ಸೋಡಾ ಹಾಗೂ ಹೈಡ್ರೋಜನ್‌ ಪೆರಾಕ್ಸೆ„ಡ್‌ಗಳು ಇರುವುದರಿಂದ ಮೊಡವೆ ಇರುವ ಭಾಗಕ್ಕೆ ಟೂತ್‌ಪೇಸ್ಟ್‌ ಲೇಪಿಸಿ 10 ನಿಮಿಷಗಳ ಬಳಿಕ ತೊಳೆದರೆ ಮೊಡವೆ ಶಮನವಾಗುತ್ತದೆ.

ಸಾಸಿವೆ

1/4 ಚಮಚ ಸಾಸಿವೆಯೊಂದಿಗೆ 1 ಚಮಚ ಜೇನುತುಪ್ಪವನ್ನು ಚೆನ್ನಾಗಿ ಮಿಶ್ರಣಮಾಡಿ ಮುಖದ ಎಲ್ಲಾ ಭಾಗಕ್ಕೆ ಹಚ್ಚಿಕೊಳ್ಳಿ. 15 ನಿಮಿಷದ ನಂತರ ಶುದ್ಧ ನೀರಿನಿಂದ ಮುಖವನ್ನು ನಯವಾಗಿ ತೊಳೆಯಿರಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • inspirational

    ಚೈತ್ರ ಮಾಸದಲ್ಲಿ ಬೇವನ್ನು ತಿನ್ನುವುದು ಪ್ರಯೋಜನಕಾರಿ

    ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…

  • ಸರ್ಕಾರದ ಯೋಜನೆಗಳು

    ಖಾತೆಯಲ್ಲಿ 10 ಸಾವಿರ ಇರುವವರು ಬಡವರಲ್ಲ..!ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಿಶನ್‌ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್‌ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್‌ಗಳು ನಿರ್ಧರಿಸಬಹುದಾಗಿದೆ.

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ರಾಕೇಶ್ ಕಾಲಿಗೆ ಬಿದ್ದು ಕೈ ಮುಗಿದು ತಪ್ಪಾಯಿತೆಂದು ಕೇಳಿಕೊಂಡ ಅಕ್ಷತಾ..!

    ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್‍ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…