ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ! ಹಾಗೆ ಯಾವ ಸಹಾಯವಿಲ್ಲದೆಯೇ ಕೆಳಗೆ ಇಳಿಯುತ್ತಾರೆ. ಜ್ಯೋತಿರಾಜ್ ಎತ್ತರದ ಗೋಡೆಗಳ ಮೇಲೆ ಗಾಳಿಯ ವೇಗದಲ್ಲಿ ಚಲಿಸುತ್ತಾರೆ! ಇದು ಕೋತಿರಾಜು ಎಂದೇ ಹೆಸರಾಗಿರುವ ಜ್ಯೋತಿರಾಜುವಿನ ನಿಜ ಬದುಕಿನ ರೋಚಕ ಕಥೆ.
ಜ್ಯೋತಿರಾಜು ತಮಿಳುನಾಡಿನ ಕಾಮಾಚಿಪುರದವರು. ತಂದೆ ಈಶ್ವರನ್, ತಾಯಿ ಕುಂಜಾರಂ. ಅವರದು ಮಧ್ಯಮ ವರ್ಗದ ರೈತ ಕುಟುಂಬ. ಜ್ಯೋತಿರಾಜುವಿಗೆ ಚಿಕ್ಕಂದಿನಿಂದಲೂ ಓದುವುದರಲ್ಲಿ ಅಂತಹ ಆಸಕ್ತಿ ಇರಲಿಲ್ಲ. ಒಂದನೇ ತರಗತಿಗೆ ಸ್ವಲ್ಪ ದಿನಗಳ ಕಾಲ ಶಾಲೆಗೆ ಹೋಗಿ ನಂತರ ಶಾಲೆ ಬಿಟ್ಟು ಬಂದವರು ಮತ್ತೆ ಹಿಂತಿರುಗಿ ನೋಡಲಿಲ್ಲ.
ಮನೆಬಿಟ್ಟು ಕಾಲ್ನಡಿಗೆಯಲ್ಲೆ ಊರೂರು ತಿರುಗುತ್ತಾ ಕರ್ನಾಟಕಕ್ಕೆ ಬಂದ ಜ್ಯೋತಿರಾಜು, ಕರ್ನಾಟಕದ ಚಿತ್ರದುರ್ಗದಲ್ಲೆ ಉಳಿದುಕೊಂಡು ಹೊಟ್ಟೆಪಾಡಿಗಾಗಿ ಗಾರೆ ಕೆಲಸಕ್ಕೆ ಸೇರಿದರು. ಹೊಟ್ಟೆಪಾಡಿಗಾಗಿ ತುಂಬಾ ಕಷ್ಟಗಳನ್ನು ಅನುಭವಿಸಿದ ಜ್ಯೋತಿರಾಜು ಇನ್ನೂ ನಾನು ಏನೂ ಸಾಧಿಸಲಾರೆ ಎಂದು ಯೋಚಿಸಿ ಒಂದು ನಿರ್ಧಾರಕ್ಕೆ ಬಂದು, ಕೋಟೆಯನ್ನು ಹಿಂಬದಿಯಿಂದ ಹತ್ತಿದರು.
ಅಲ್ಲಿಯೇ ಪಕ್ಕ ಒಂದು ಬೃಹದಾಕಾರದ ಬಂಡೆ ಕಾಣಿಸಿತು. ಅದನ್ನು ಏರಿ ಸಾಯೋಣವೆಂದು ಬಂಡೆಯ ಮೇಲೆ ನಿಂತಿದ್ದರು. ಆಗ ಅಲ್ಲಿ ಬಂದ ಪ್ರವಾಸಿಗರು ಇವರು ಬಂಡೆ ಏರಿ ನಿಂತಿದ್ದನ್ನು ನೋಡಿ ಸಾಹಸವೆಂದು ಚಪ್ಪಾಳೆ, ಸಿಳ್ಳೆ ಹಾಕಿದರು. ಆಗ ಜ್ಯೋತಿರಾಜು ಆತ್ಮಹತ್ಯೆಯ ಪ್ರಯತ್ನವನ್ನು ಬಿಟ್ಟು ಅಲ್ಲಿಂದ ಮನೆಗೆ ಹೋದರು.
ನಂತರ ಮತ್ತೊಂದು ದಿನ ಕೋಟೆ ಪ್ರವೇಶಿಸಿದಾಗ ಅಲ್ಲಿ ಕೋತಿಗಳು ಬಂಡೆಯಿಂದ ಬಂಡೆಗೆ, ಹಾರುತ್ತಾ ಸಾಗುತ್ತಿದ್ದವು. ಇದನ್ನು ಕಂಡು ನಾನು ಯಾಕೆ ಪ್ರಯತ್ನಿಸಬಾರದು ಎಂದು ಯೋಚಿಸಿ ಚಿಕ್ಕ ಚಿಕ್ಕ ಬಂಡೆಯನ್ನು ಏರಲು ಪ್ರಯತ್ನಿಸಿ ಸಫಲರಾದರು. ಆಗ ಅವರಿಗೆ ತಮ್ಮಲಿರುವ ಶಕ್ತಿಯ ಅರಿವಾಯಿತು.
ಆಗ ಇನ್ನೂ ಸ್ಪೂರ್ತಿ ಪಡೆದ ಜ್ಯೋತಿರಾಜ್ ಒಂದೊಂದೆ ಬಂಡೆಗಳನ್ನು, ಏರುತ್ತಾ, ಜಿಗಿಯುತ್ತಿದ್ದರೆ ಅವರಿಗೆ ಯಾವ ಅಳುಕಾಗಲಿ, ಜಾರುವುದಾಗಲಿ ಆಗುತ್ತಿರಲಿಲ್ಲ. ಕೈ ಕಾಲುಗಳು ಬಂಡೆಯನ್ನು ಬಿಗಿಯಾಗಿ ಹಿಡಿದಿರುತ್ತಿದ್ದವು. ಅತ್ಯಂತ ಕಡಿದಾದ, ಎತ್ತರದ ಬಂಡೆಗಳನ್ನು ಏರುವಾಗಲು ಅವರಿಗೆ ಯಾವುದೇ ರೀತಿ ಅಪಾಯವಾಗಲಿಲ್ಲ.
ಇದರಿಂದಲೇ ನಾನು ಏನಾದ್ರೂ ಸಾಧನೆ ಮಾಡಬೇಕು ಎಂದು ಯೋಚಿಸಿದ ಜ್ಯೋತಿರಾಜ್, ಅಂದಿನಿಂದ ಕೋಟೆಯಲ್ಲೆ ಹೆಚ್ಚು ಕಾಲ ಅಭ್ಯಾಸ ಮಾಡತೊಡಗಿದರು. ಅಲ್ಲಿಗೆ ಬಂದಂತಹ ಪ್ರವಾಸಿಗರು ಇವರ ಸಾಹಸ, ಧೈರ್ಯಕ್ಕೆ ಮನಸೋತರೆ, ಮಕ್ಕಳು ಸ್ಪೈಡರ್ಮ್ಯಾನ್… ಸ್ಪೈಡರ್ಮ್ಯಾನ್… ಎಂದು ಕೂಗುತ್ತಿದ್ದರು. ಇವರು ಕೋತಿಯಂತೆ ಜಿಗಿಯುವುದನ್ನು, ಹಾರುವುದನ್ನು ನೋಡಿ ಇವರಿಗೆ ‘ಕೋತಿರಾಜು’ ಎಂಬ ಹೆಸರು ಬಂತು.
ಅವರ ದೇಹಕ್ಕೆ ಬೆಂಬಲಕ್ಕಾಗಿ ಎರಡು ಬೆರಳುಗಳ ಮೇಲೆ ಸ್ಲಾಟಿಂಗ್ ಮಾಡುವಂತಹ ಗೋಡೆಯಿಂದ 90 ಡಿಗ್ರಿಗಳಷ್ಟು ಕೋನದಲ್ಲಿ ಸಮತೋಲನಗೊಳಿಸುವುದಕ್ಕಾಗಿಯೇ ಅವರಿಗೆ ‘ಸ್ಪೈಡರ್ಮ್ಯಾನ್’ ಎಂಬ ಹೆಸರು ಬಂದಿದೆ.
ಅನೇಕರ ಪ್ರಾಣ ರಕ್ಷಿಸಿದ್ದಾರೆ ಜ್ಯೋತಿ ರಾಜ್ :-
ಜೋಗ್ ಫಾಲ್ಸ್ನಲ್ಲಿ ಅನೇಕ ಬಾರಿ ಆತ್ಮಹತ್ಯೆಗೆ ಒಳಗಾದವರ ದೇಹಗಳನ್ನು ಜ್ಯೋತಿರಾಜ್ ನೀಲಾಜಾಲವಾಗಿ ಹುಡುಕಿ ತಂದಿದ್ದಾರೆ, ಇದು ಎಷ್ಟು ಅಪಾಯಕಾರಿ ಎಂದರೆ ಜ್ಯೋತಿರಾಜ್ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹಲವು ಬಾರಿ ಈ ಕೆಲಸಗಳನ್ನು ಮಾಡಿದ್ದಿದೆ..
ನೀವೇನಾದರೂ ಚಿತ್ರದುರ್ಗದ ಬೆಟ್ಟಕ್ಕೆ ಹೋಗುವವರಿದ್ದರೆ ಮರಿಯದೇ ಜ್ಯೋತಿರಾಜ್ ಅವರನ್ನು ಭೇಟಿಯಾಗಿ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…