ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಶ್ರೀಮಂತನಾಗ್ಬೇಕೆಂದು ಬಯಸ್ತಾನೆ. ಸದಾ ಪರ್ಸ್ ನಲ್ಲಿ ಹಣವಿರಬೇಕೆಂದು ಆಶಿಸುತ್ತಾನೆ. ಕೆಲವರು ಪರ್ಸ್ ನಲ್ಲಿ ವಿಶೇಷ ವಸ್ತುಗಳನ್ನಿಟ್ಟುಕೊಳ್ತಾರೆ. ಇದ್ರಿಂದ ಅವ್ರ ಪರ್ಸ್ ನಲ್ಲಿ ಹಣ ತುಂಬಿ ತುಳುಕುತ್ತಿರುತ್ತದೆ. ಕೆಲವೊಮ್ಮೆ ಪರ್ಸ್ ನಲ್ಲಿರುವ ವಸ್ತುವೇ ದುರಾದೃಷ್ಟಕ್ಕೆ ಕಾರಣವಾಗುತ್ತದೆ. ಸಾಲ ಮಾಡುವ ಪರಿಸ್ಥಿತಿ ಎದುರಾಗುತ್ತದೆ. ಹಾಗಾಗಿ ಪರ್ಸ್ ನಲ್ಲಿ ಯಾವ ವಸ್ತು ಇಡಬೇಕು? ಯಾವುದನ್ನು ಇಡಬಾರದು ಎಂಬುದನ್ನು ತಿಳಿದಿರಬೇಕು. ಪರ್ಸ್ ನಲ್ಲಿ ಎಂದೂ ಹಳೆಯ ಕಾಗದಗಳನ್ನು ಇಡಬಾರದು. ಇದು ಒಳ್ಳೆಯದಲ್ಲ. ಲಕ್ಷ್ಮಿಗೂ ಇದು ಇಷ್ಟವಾಗುವುದಿಲ್ಲ. ಹಾಗಾಗಿ ಪರ್ಸ್ ಸ್ವಚ್ಛವಾಗಿರುವಂತೆ…
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು. ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ಕ್ಯಾನ್ಸರ್ ಕಾಯಿಲೆ ಜೊತೆಗೆ ಮಾರಕ ಕಾಯಿಲೆಯಾದ ಎಚ್ಐವಿ ಏಡ್ಸ್ಗೂ ಕೂಡ ರಾಮಬಾಣವೊಂದನ್ನು ಗಡಿಜಿಲ್ಲೆಯ ರೈತನೊಬ್ಬ ಕಂಡುಹಿಡಿದಿದ್ದು ಸಾವಿನ ಅಂತಿಮ ಕ್ಷಣಗಳ ಎಣಿಸುವ ಎಚ್ಐವಿ ಸೋಂಕಿತರಿಗೆ ಆಶಾಕಿರಣವಾಗಿದ್ದಾರೆ. ಮಹೇಶ್ ಕುಮಾರ್ ಎಂಬ ರೈತ ಹಲವಾರು ವರ್ಷಗಳಿಂದ ತಮ್ಮ ಮನೆಯ ಮುಂದೆ ಬೆಳೆದ ಒಂದು ಮರದ ಎಲೆಗಳಿಂದ ಕ್ಯಾನ್ಸರ್ ಪೀಡಿತರಿಗೆ ಚಿಕಿತ್ಸೆ ಕೊಡುತ್ತಾ ಬಂದಿದ್ದಾರೆ. ಸದ್ಯ ಈಗ ಅದೇ ಎಲೆಯಗಳಲ್ಲೇ ಎಚ್.ಐ.ವಿ ಏಡ್ಸ್ ಸೋಂಕಿತರಿಗೂ ಕೂಡ ಚಿಕಿತ್ಸೆ ನೀಡುತ್ತಿದ್ದು, ಸೋಂಕಿತರಿಂದ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗತೊಡಗಿದೆ. ಎಷ್ಟೋ ಮಂದಿ ಮಾರಣಾಂತಿಕ…
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…