ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ದಿನೇ ದಿನೆ ರಾಜ್ಯ ರಾಜಕಾರಣ ಕುತೂಹಲ ಕೆರೆಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ದೇವೇಗೌಡ ರವರ ಕಿರಿಯ ಪುತ್ರ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ
ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.