ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….