ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಬಿಜೆಪಿ ಅಭ್ಯರ್ಥಿ ಸೋಲಿಗೆ ಕಮಲ ನಾಯಕರೇ ಸ್ಕೆಚ್ ಹಾಕುತ್ತಿದ್ದಾರಾ ಎಂಬ ಪ್ರಶ್ನೆಯೊಂದು ಮೂಡಿದೆ. ಯಾಕಂದ್ರೆ ಶಾಸಕ ಪ್ರೀತಂಗೌಡ ಹಾಗೂ ಬಿಜೆಪಿ ಕಾರ್ಯಕರ್ತ ಮಾತಾಡಿದ್ದಾರೆ ಎನ್ನಲಾದ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಿಜೆಪಿ ಶಾಸಕ ಪ್ರೀತಂಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಬಿಜೆಪಿಯಲ್ಲಿ ಪುಕ್ಸಟ್ಟೆ ನಾಯಕನಾಗಲು ಮಂಜು ಹೊರಟಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ. ಮಂಜು ಬಗ್ಗೆ ಕಾರ್ಯಕರ್ತನ ಬಳಿ ಪ್ರೀತಂ ಗೌಡ ಮಾತನಾಡಿದ್ದಾರೆನ್ನಲಾಗಿದೆ. ಹಾಸನದಲ್ಲಿ ಬಳ್ಳಾರಿ ಚುನಾವಣೆಯ ಫಲಿತಾಂಶ ಮರುಕಳಿಸುತ್ತದೆ. 10…
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್ ಇರಾಕ್…
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.
ಇಂಗ್ಲಿಷ್ ಸಂಬಳಕ್ಕಾದರೆ, ಕನ್ನಡ ಉಂಬಳಕ್ಕೆ ಎಂಬ ಮಾತು ನಾಡಿನಲ್ಲಿ ಪ್ರಚಲಿತದಲ್ಲಿದೆ. ಆದರೆ, ಕನ್ನಡ ನಮ್ಮ ಸಂಬಳ ಹಾಗೂ ಉಂಬಳ ಎರಡಕ್ಕೂ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದ್ದು, ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ದೊರಕಿಸಿಕೊಡುವ ದಿಸೆಯಲ್ಲಿ ಪ್ರಯತ್ನ ನಡೆಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಮಾರಂಭದಲ್ಲಿ ಎರಡು ಸಂಸ್ಥೆಗಳು ಸೇರಿ ವಿವಿಧ ಕ್ಷೇತ್ರಗಳ ಸಾಧಕರಿಗೆ ೨೦೧೯ನೇ ಸಾಲಿನ ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ ಮಾಡಿ. ಮಾತನಾಡಿದ…