ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ಇಂದು ಗುರುವಾರ, 1/3/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.