ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಚುನಾವಣೆ ಮುಗಿದಿದೆ. ಸುಮಲತಾ ಅಂಬರೀಶ್ ಮಂಡ್ಯದ ನೂತನ ಸಂಸದೆಯಾಗಿ ಆಯ್ಕೆಯಾಗಿದ್ದಾರೆ. ಜೋಡೆತ್ತುಗಳಾಗಿ ಸುಮಲತಾ ಅವರ ‘ವಿಜಯದ ಬಂಡಿ’ ಎಳೆದ ದರ್ಶನ್ ಮತ್ತು ಯಶ್ ಮಂಡ್ಯದ ಜನರಿಗೆ ಹೃದಯಪೂರ್ವಕವಾಗಿ ಧನ್ಯವಾದ ಹೇಳಿದರು. ಫಲಿತಾಂಶದ ನಂತರ ಮಂಡ್ಯದಲ್ಲಿ ಆಯೋಜಿಸಿದ್ದ ‘ಸ್ವಾಭಿಮಾನದ ವಿಜಯೋತ್ಸವ’ ಸಮಾರಂಭದಲ್ಲಿ ಸುಮಲತಾ, ದರ್ಶನ್, ಯಶ್ ಎಲ್ಲರೂ ಪಾಲ್ಗೊಂಡು ತಲೆ ಬಾಗಿ ನಮಸ್ಕರಿಸಿದರು. ಇದಾದ ಬಳಿಕವೂ ಜೋಡೆತ್ತುಗಳು ಮಂಡ್ಯದಲ್ಲಿ ಕಾಣಿಸಿಕೊಳ್ತಾರಾ ಎಂಬ ಅನುಮಾನಗಳು, ಪ್ರಶ್ನೆಗಳು ಕೇಳುತ್ತಲೇ ಇದೆ. 200 ಹಳ್ಳಿಗಳಿಗೂ ದರ್ಶನ್-ಯಶ್ ಭೇಟಿ ಸುಮಲತಾ ಪರ ಪ್ರಚಾರ…
ನೀಲ್ಸನ್ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಅನ್ವಯ 3೦,೦೦೦ ನಗರದ ಗ್ರಾಹಕರು ಅಂದರೆ ಶೇ.67 ರಷ್ಟು ಭಾರತೀಯರು ಉಪಾಹಾರಕ್ಕೆ ಬದಲಾಗಿ ಈ ತಿಂಡಿಗಳನ್ನು ಸೇವಿಸುತ್ತಿದ್ದರು. ಶೇ.56ರಷ್ಟು ಮಂದಿ ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ಬದಲು ಈ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಇದಕ್ಕೆ ತಜ್ಞರು ಏನು ಹೇಳುತ್ತಾರೆ ನೋಡಿ.
ತುಂಬಾ ದುಡ್ಡು ಕೊಟ್ಟು ಸ್ಮಾರ್ಟ್’ಫೋನ್ ಕೊಂಡುಕೊಂಡಿದ್ದೇವೆಂದು ಬಹಳ ಜೋಪಾನ ಮಾಡುತ್ತಿರುತ್ತೇವೆ. ಸದ್ಯಕ್ಕೆ ಸರಾಸರಿ ಹೆಚ್ಚಿನ ಅಂಶಗಳಲ್ಲಿ ಎಲ್ಲರ ಕಡೆಗೆ ಸ್ಮಾರ್ಟ್ ಫೋನ್ ಗಳೇ ಜಾಸ್ತಿ ಇವೇ. ಆದರೆ, ಎಂದಾದರೊಮ್ಮೆ ಆಕಸ್ಮಿಕವಾಗಿ ಮೊಬೈಲ್ ಕೆಳಗೆ ಬೀಳುವುದೋ, ನೀರಿಗೆ ತಾಕುವುದೋ ಅಥವಾ ಕೆಲವೊಮ್ಮೆ ಮಕ್ಕಳ ಕೈಯಿಂದ ಇನ್ನೂ ಕೆಲವೊಂದು ಸಲ ನಮ್ಮ ನಿಮ್ಮ ಕೈಯಿಂದ ಮೊಬೈಲ್ ಆಕಸ್ಮಿಕವಾಗಿ ನೀರಲ್ಲಿ ಬೀಳುತ್ತದೆ.
ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…