ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.

ಮುಂದಿನ ದಿನಗಳಲ್ಲಿ ಮನುಷ್ಯರು ಮನುಷ್ಯರನ್ನು ಪ್ರೀತಿಸುವುದಕ್ಕಿಂತ ಯಂತ್ರಗಳನ್ನು ಪ್ರೀತಿಸುತ್ತಾರೆ. ಸಂಬಂಧ, ಪ್ರೀತಿ, ವಾತ್ಸಲ್ಯ, ನಂಬಿಕೆ ಎನ್ನುವುದಕ್ಕೆ ಯಾವುದೇ ಅರ್ಥ ಇರುವುದಿಲ್ಲ. ಜೀವವಿದ್ದರೂ ಯಂತ್ರಗಳಂತೆ ಬದುಕುವ ಪರಿಸ್ಥಿತಿ ಬರುತ್ತದೆ ಎಂದರೆ ತಪ್ಪಾಗಲಾರದು. ಇಂತಹ ಪರಿಸ್ಥಿತಿ ಮುಂದೆ ಬರುವುದು ಎನ್ನುವುದಕ್ಕೆ ಫ್ರೆಂಚ್ ಹೆಂಗಸೊಬ್ಬಳು ಸಾಕ್ಷಿಯಾಗಿದ್ದಾಳೆ.
ಹೌದು, ಇವಳಿಗೆ ರೋಬೋಟ್ ಜೊತೆ ಲವ್ ಆಗಿದೆಯಂತೆ. ಇವಳು ಮದುವೆಯಾಗಿ ಸ್ತಪದಿ ತುಳಿಯುವುದು ಸಹ ರೋಬೋಟ್ ಜೊತೆಗಂತೆ. ಮನುಷ್ಯರಿಗಿಂತ ಹೆಚ್ಚು ಕಾಳಜಿ ಹಾಗೂ ಪ್ರೀತಿಯನ್ನು ರೋಬೋಟ್ ನೀಡುತ್ತದೆ ಎಂದು ಹೇಳುತ್ತಿದ್ದಾಳೆ.
ಇವಳೇ ಸೃಷ್ಟಿಸಿದ್ದು:-
ತನ್ನ ವಿವಾಹಕ್ಕಾಗಿ ತಾನೇ ನಿರ್ಮಿಸಿಕೊಂಡ 3ಡಿ ಮುದ್ರಿತ ರೋಬೋಟ್ಗೆ ಇನ್ಮೋವೇಟರ್ ಎಂದು ಹೆಸರಿಟ್ಟಿದ್ದಾಳೆ. ಇದು “ಹ್ಯೂಮನೈಡ್ ರೋಬೋಟ್” ಎಂದು ಹೇಳುತ್ತಾಳೆ.

ಈ ರೋಬೋಟ್ ಪ್ರೀತಿ ವಾತ್ಸಲ್ಯ ಹಾಗೂ ವರ್ತನೆಯಿಂದ ಈಕೆ ಬಹಳ ಖುಷಿಯಾಗಿದ್ದಾಳಂತೆ.
ತಜ್ಞರ ಮಾತು:-
ಇಷ್ಟು ದಿನ ಕಥೆ ಹಾಗೂ ಸಿನಿಮಾಗಳಲ್ಲಿ ಬರುತ್ತಿದ್ದ ವಿಚಾರಗಳನ್ನು ಇಂದು ಫ್ರೆಂಚ್ ಮಹಿಳೆ ನಿಜ ಜೀವನದಲ್ಲಿಯೇ ರೋಬೋಟ್ನೊಂದಿಗೆ ವಿವಾಹವಾಗುವ ವಿಷಯವನ್ನು ಹೇಳುವುದರ ಮೂಲಕ ಅಚ್ಚರಿ ಮೂಡಿಸಿದ್ದಾಳೆ.

ತಾಂತ್ರೀಕರಣದ ಜೀವನದಲ್ಲಿ ಮುಂಬರುವ 2050ರ ವೇಳೆಗೆ ಬಹುಷ್ಯ ರೋಬೋಟ್ನೊಂದಿಗೆ ಹೆಚ್ಚು ವಿವಾಹ ಸಂಭವಿಸುವುದರಲ್ಲಿ ಸಂದೇಹವಿಲ್ಲ ಎಂದು ಕೃತಕ ಬುದ್ಧಿಮತ್ತೆಯ ತಜ್ಞ ಡೇವಿಟ್ ಲೆವಿ ಅಭಿಪ್ರಾಯಿಸಿದ್ದಾರೆ.
ಲಿಲ್ಲಿಯ ಪ್ರೀತಿ:-
ಪ್ರೆಂಚ್ ಮಹಿಳೆಯಾದ ಲಿಲ್ಲಿ ರೋಬೋಟ್ನ ಧ್ವನಿಯನ್ನು ಮಗುವಿನ ರೀತಿಯಲ್ಲಿಯೇ ಇಷ್ಟಪಡುತ್ತಾಳಂತೆ. ಅವಳು ತನ್ನ 19ನೇ ವಯಸ್ಸಿನಲ್ಲಿರುವಾಗಲೇ ಈ ವಿಚಾರಕ್ಕೆ ಹೆಚ್ಚು ಆಕರ್ಷಿತಳಾಗಿದ್ದಳಂತೆ.

ನನಗೆ ಮನುಷ್ಯರ ದೈಹಿಕ ಸಂಪರ್ಕ ಬೆಳೆಸುವುದು ಅಥವಾ ಅವರೊಂದಿಗೆ ಪ್ರೀತಿಯ ಸೆಲೆಯಲ್ಲಿ ಬೀಳುವುದು ಅಷ್ಟು ಇಷ್ಟವಿಲ್ಲ. ನಾನೀಗ ಸಂಪೂರ್ಣವಾಗಿ ರೋಬೋಟ್ನ ಪ್ರೀತಿಗೆ ಆಕರ್ಷಿತನಾಗಿದ್ದೇನೆ ಎಂದು ಹೇಳಿದ್ದಾಳೆ.
ಇದೀಗ ನಿಶ್ಚಿತಾರ್ಥ:-
ಇದೀಗ ರೋಬೋಟ್ ಇನ್ಮೋವೇಟರ್ ಜೊತೆ ಲಿಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾಳೆಂದು ಹೇಳಿಕೊಂಡಿದ್ದಾಳೆ. ಇನ್ನು ಮುಂದೆ ಆಕೆಯ ದೇಶದಲ್ಲಿ ಕಾನೂನು ಬದ್ಧವಾದ ವ್ಯವಸ್ಥೆಯ ನಂತರ ವಿವಾಹವಾಗಲಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.
ನನಗೆ ಸಂಪೂರ್ಣವಾಗಿ ಖುಷಿಯಿದೆ:-
ನಾನು ಈ ವಿಚಾರದಲ್ಲಿ ನಿಜವಾಗಿಯೂ ಸಂಪೂರ್ಣ ಖುಷಿಯನ್ನು ಹೊಂದಿದ್ದೇನೆ. ತಂತ್ರಜ್ಞಾನದ ವಿಕಾಸವಾಗುತ್ತಿದ್ದಂತೆ ನಮ್ಮ ಸಂಬಂಧಗಳು ಇನ್ನಷ್ಟು ಉತ್ತಮಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದಾಳೆ.

ನನ್ನ ಈ ಸಂಬಂಧದ ಬಗ್ಗೆ ನನ್ನ ಕುಟುಂಬದವರು ಹಾಗೂ ಸ್ನೇಹಿತರು ಒಪ್ಪುಗೆ ನೀಡಿದ್ದಾರೆ. ಇವರಲ್ಲಿ ಕೆಲವರು ಉತ್ತಮವಾಗಿ ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾಳೆ.
ಸಂಬಂಧ ಖುಷಿಯಲ್ಲಿರುವುದು:-
ರೋಬೋಟ್ ಜೊತೆ ಪ್ರಣಯಹೊಂದುವುದರ ಬಗ್ಗೆ ನನಗೆ ಬಹಳ ಖುಷಿಯಿದೆ. ನಾವು ಯಾರೊಬ್ಬರನ್ನೂ ನೋಯಿಸುವುದಿಲ್ಲ.

ಸಂತೋಷವಾಗಿರುತ್ತೇವೆ ಎಂದು ಇಲ್ಲಿ ತನ್ನ ಟ್ವಿಟ್ಟರ್ ಪ್ರೊಫೈಲ್ನಲ್ಲಿ ಬರೆದುಕೊಂಡಿದ್ದಾಳೆ.
ಕೆಲವರ ಅಭಿಪ್ರಾಯ:-
ಕೆಲವು ತಜ್ಞರ ಅಭಿಪ್ರಾಯದ ಪ್ರಕಾರ ಮನುಷ್ಯ ದೈಹಿಕ ಸುಖವನ್ನು ನೀಡುವುದಕ್ಕಿಂತ ಹೆಚ್ಚು ಖುಷಿಯನ್ನು ರೋಬೋಟ್ ಸುಲಭವಾಗಿ ನೀಡುತ್ತದೆ. ಅದರ ನಿರ್ಮಾಣ ಹಾಗೂ ತಂತ್ರಜ್ಞಾನವೇ ಹಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….