ಹಣ

ಇವುಗಳನ್ನು ಪಾಲಿಸಿದ್ರೆ ನೀವೂ ಸಹ ಕೋಟ್ಯಾಧಿಪತಿ ಆಗಬಹುದು!ಹೇಗೆ ಅಂತೀರಾ?ಈ ಲೇಖನಿ ಓದಿ…

3535

ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.

ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು  ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.

ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…


* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-

ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.

*ಗುರಿ ಇರಲಿ:-

ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!

* ಕಳೆದು ಹೋದ ಸಮಯ ಮತ್ತೆ  ಬರುವುದಿಲ್ಲ (Time is Money)

ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.

* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-

ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.

*ಕನಸು ಕಾಣಿರಿ:-

ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.

*ಹಠ ವಿರಲಿ :- 

ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.

*ನಿಮ್ಮನ್ನು ನೀವು  ಅವಲೋಕನ ಮಾಡಿಕೊಳ್ಳಿ:-

ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.

*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-

ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.

9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-

ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶನಿ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಸುದ್ದಿ

    ಈ ಸಲದ ಮೋದಿ ಬಜೆಟ್’ನಲ್ಲಿ ಜಾಸ್ತಿಯಾಗಿದ್ದೇನು..?ಕಡಿಮೆಯಾಗಿದ್ದೇನು..?ಇಲ್ಲಿದೆ ಸಂಪೂರ್ಣ ಮಾಹಿತಿ…ನೋಡಿ ನಿಮ್ಮ ಅನಿಸಿಕೆ ತಿಳಿಸಿ…

    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.

  • ಸುದ್ದಿ

    ನಟ ಕಮಲ್ ಹಾಸನ್ ಅವರ ಮೇಲೆ ಚಪ್ಪಲಿ ತೂರಾಟ….ಧೂರು ದಾಕಲು….!

    ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.