ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತ ಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಅವರೆಲ್ಲ ಕೋಟ್ಯಾಧಿಪತಿಯಾದ ಸಾಹಸಗಳ ಹಿಂದಿನ ಶಕ್ತಿಗಳು ಮತ್ತು ಅನುಸರಿಸಿದ ಮಾರ್ಗಗಳೇನು? ಅವರೆಲ್ಲ ಮಿಲಿಯನೇರ್ ಆಗಲು ಸಾಧ್ಯ ಆಗಿದ್ದಾದರು ಹೇಗೆ? ಹೀಗೆ ಹತ್ತು ಹಲವು ಪ್ರಶ್ನೆಗಳು ನಮ್ಮನ್ನು ಕಾಡಬಹುದು. ಅದಕ್ಕಾಗಿ ಯಾವಾಗಲೂ ಪ್ರಸ್ತುತ.
ಕೋಟ್ಯಾಧಿಪತಿ ಆಗಲು ತಿಳಿದುಕೊಳ್ಳಬೇಕಾದ ಸಂಗತಿಗಳು ಯಾವುವು ಗೊತ್ತೆ? ಇಲ್ಲಿವೆ ನೋಡಿ…

* ನಿಮ್ಮ ಆದಾಯದ ಮೂಲಗಳನ್ನು ಹೆಚ್ಚಿಸಿ :-
ಕೋಟ್ಯಾಧಿಪತಿ ಆಗಬೇಕೆಂದು ಬಯಸುವ ಆಶಾವಾದಿಗಳು ಮೂಲಭೂತವಾಗಿ ಆದಾಯದ ಮೂಲಗಳನ್ನು ಹೆಚ್ಚಿಸಲೇ ಬೇಕು. ಒಂದೇ ಆದಾಯದ ಮೂಲಕ್ಕೆ ಅವಲಂಬನೆ ಆಗುವುದು ಬೇಡ. ಹೂಡಿಕೆ ಮಾಡಬಹುದಾದ ಮಾರ್ಗ ಮತ್ತು ಮೂಲಗಳನ್ನು ಹುಡುಕಿ. ರಿಯಲ್ ಎಸ್ಟೇಟ್, ಇನ್ಫ್ರಾಸ್ಟ್ರಕ್ಚರ್, ಷೇರುಗಳಲ್ಲಿ ಹೂಡಿಕೆ ಮಾಡಿ. ಶ್ರೀಮಂತ ಜನರು ಯಾವುದೇ ಒಂದು ಆದಾಯದ ಮೇಲೆ ಅವಲಂಬಿತರಾಗಿರುವುದಿಲ್ಲ.
*ಗುರಿ ಇರಲಿ:-
ಗುರಿ ಇಲ್ಲದ ಸ್ಟೀವ್ ಜಾಬ್ಸ್ ರನ್ನು ಊಹಿಸಲು ಯಾರಿಂದಲಾದರೂ ಸಾಧ್ಯವಿದೆಯೆ? ನಿಮ್ಮ ಗುರಿಗಳನ್ನು ಬರೆದು ನೀವು ಬಯಸಿದಂತ ಭವಿಷ್ಯವನ್ನು ಊಹಿಸಿಕೊಳ್ಳಿ. ಅಂದರೆ ಮನಸ್ಸಿನಲ್ಲಿರುವ ಗುರಿಗಳನ್ನು ಬರೆದಿಟ್ಟು ಅದಕ್ಕನುಗುಣವಾಗಿ ಯೋಜನೆಗಳನ್ನು ರೂಪಿಸಿ, ಅದರ ಸಾಧನೆಗಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಕಾಗದದ ಮೇಲೆ ಬರೆದಿಡುವುದರಿಂದ ಅದು ಸಂಭವಿಸುವಂತೆ ಮಾಡಬಹುದು!
* ಕಳೆದು ಹೋದ ಸಮಯ ಮತ್ತೆ ಬರುವುದಿಲ್ಲ (Time is Money)
ಒಂದು ಭಾರಿ ಕಳೆದ ಸಮಯ ಎಂದೂ ಮತ್ತೆ ಸಿಗದು. ಸಮಯವನ್ನು ಅನ್ಯತಹ ವ್ಯರ್ಥ ಮಾಡುವುದು ಮನುಷ್ಯನ ದೊಡ್ಡ ದೌರ್ಬಲ್ಯ. ಕೆಲವರು ಟಿವಿ ನೋಡುತ್ತಾ, ಹರಟೆ ಹೊಡೆಯುತ್ತ ಕಾಲಹರಣ ಮಾಡುತ್ತಿರುತ್ತಾರೆ. ಆದರೆ ಕೋಟ್ಯಾಧಿಪತಿಗಳು ಟಿವಿ ನೋಡುವುದರಿಂದ ದೂರ ಉಳಿದು ಬಿಸಿನೆಸ್ ಸ್ಟ್ರಾಟಜಿ ಅಥವಾ ಹೊಸ ಯೋಜನೆಗಳ ಬಗ್ಗೆ ಕೆಲಸ ಮಾಡುತ್ತಿರುತ್ತಾರೆ. ಅವರಿಗೆ ತಮ್ಮ ಬಿಸಿನೆಸ್ ಮತ್ತು ಪ್ರಾಜೆಕ್ಟ್ ಮೇಲೆ ಹೆಚ್ಚು ಸಮಯ ಕಳೆಯುವುದೇ ಸಂತೋಷ ಕೊಡುತ್ತದೆ.
* ಬೇರೆಯವರನ್ನು ನೋಡಿ ಕಲಿಯುವುದು ಸಾಕಷ್ಟಿದೆ:-
ಎಲ್ಲ ತಪ್ಪುಗಳನ್ನು ನಾವೇ ಮಾಡಿ ಅದನ್ನು ಸರಿಪಡಿಸಿಕೊಂಡು ಹೋಗುವಷ್ಟು ದೀರ್ಘ ಜೀವನ ನಮ್ಮದಲ್ಲ. ಆದರಿಂದ ಇನ್ನೊಬ್ಬರ ಸೋಲು ಗೆಲುವುಗಳಿಂದ ತಿಳಿದುಕೊಳ್ಳಬೇಕಾದದ್ದು ತುಂಬಾ ಇರುತ್ತದೆ. ಇನ್ನೊಬ್ಬರಿಂದ ತಿಳಿದುಕೊಳ್ಳಬೇಕಾದ, ಬೋಧಿಸಿಕೊಳ್ಳಬೇಕಾದ ಅಗತ್ಯ ಏನಿದೆ ಎಂಬ ಅಹಂಭಾವ ಇರಬಾರದು. ಶ್ರೀಮಂತರು ಯಾವಾಗಲೂ ಸಲಹೆಗಾರರನ್ನು ಇಟ್ಟುಕೊಂಡು ಮಾರ್ಗದರ್ಶನ ಪಡೆಯುತ್ತಿರುತ್ತಾರೆ. ಹೀಗಾಗಿ ಯಾವಾಗಲೂ ತುಂಬಾ ಎಚ್ಚರಿಕೆಯಿಂದ ಮನಸ್ಸನ್ನು ಸದಾ ಜಾಗೃತನನ್ನಾಗಿ ಇಡಬೇಕಾಗುತ್ತದೆ. ಹೊಸತನಕ್ಕೆ ಸದಾ ತೆರೆದುಕೊಂಡು, ಹೊಂದಿಕೊಂಡು ಹೋಗಬೇಕಾಗುತ್ತದೆ.
*ಕನಸು ಕಾಣಿರಿ:-
ನಿಮ್ಮ ಕನಸುಗಳನ್ನು ಬಿಟ್ಟುಕೊಡಬೇಡಿ. ಉತ್ತಮ ಭವಿಷ್ಯದತ್ತ ಸಾಗಲು ಕಂಡ ಕನಸ್ಸುಗಳ ಸಾಕಾರದತ್ತ ಮುನ್ನಡೆಯಬೇಕು. ಶ್ರೀಮಂತನಾಗ ಬಯಸುವ ವ್ಯಕ್ತಿ ಕೇವಲ ಕನಸುಗಳನ್ನು ನನಸು ಮಾಡುವತ್ತ ನಡೆಯುತ್ತಿರುತ್ತಾನೆ. ಎದುರಾಗುವ ಅಡಚಣೆ, ವೈಫಲ್ಯ, ತೊಂದರೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ. ಕನಸುಗಳ ಮೇಲೆ ಸವಾರಿ ಮಾಡುವುದಷ್ಟೇ ಅವರ ಗುರಿ.
*ಹಠ ವಿರಲಿ :-
ಯಶಸ್ಸು ಅನ್ನುವುದು ನಿಂತ ನೀರಲ್ಲ. ಅದು ಯಾವಾಗಲೂ ನಿರಂತರವಾಗಿರುತ್ತದೆ. ಕೋಟ್ಯಾಧಿಪತಿ ಆಗಬಯಸುವವರಿಗೆ ನಿರಂತರತೆಯೇ ಕಿಲಿ ಕೈ. ಯೋಜನೆ ಮತ್ತು ವ್ಯವಹಾರಗಳ ಬಗ್ಗೆ ನಿರಂತರತೆ ಇರುತ್ತದೆ. ನಿರಂತರತೆ ಅನ್ನುವುದು ಅಹಂ ಅಲ್ಲ. ಅದು ದೃಢತೆಯನ್ನು ಪ್ರತಿಬಿಂಬಿಸುವ ಚಟ, ಹಂಬಲ ಹಾಗೂ ತುಡಿತ. ಹೀಗಾಗಿ ನಿರಂತರತೆ ತುಂಬಾ ಮುಖ್ಯ.
*ನಿಮ್ಮನ್ನು ನೀವು ಅವಲೋಕನ ಮಾಡಿಕೊಳ್ಳಿ:-
ಪ್ರತಿ ಹಂತದಲ್ಲೂ ಏಳು ಬೀಳುಗಳ ಬಗ್ಗೆ ಅವಲೋಕನ ಮಾಡುವುದು ತುಂಬಾ ಮುಖ್ಯ. ಪ್ರತಿನಿತ್ಯ ನಿಮ್ಮ ಪ್ರಗತಿ ಬಗ್ಗೆ ಅವಲೋಕನ ಮಾಡುವುದರಿಂದ ನಾವು ಯಾವ ಹಾದಿಯಲ್ಲಿ ಸಾಗುತ್ತಿದ್ದೇವೆ ಹಾಗೂ ಸರಿ ತಪ್ಪುಗಳೇನು ಎಂಬುದು ಗೊತ್ತಾಗುತ್ತದೆ. ನಮ್ಮ ತಪ್ಪುಗಳನ್ನು ಸರಿಪಡಿಸಿ ಮುನ್ನಡೆಯದಿದ್ದರೆ ಯಶಸ್ಸು ಸಾಧ್ಯವಿಲ್ಲ. ಸೋಲು ಮತ್ತು ಗೆಲುವುಗಳಿಗೆ ಕಾರಣಗಳೇನು ಎಂಬುದನ್ನು ಪ್ರತಿ ಹೆಜ್ಜೆಯಲ್ಲೂ ತಿಳಿದುಕೊಳ್ಳುತ್ತಿರಬೇಕು.
*ನಿಮ್ಮ ಸುತ್ತಮುತ್ತ ಒಳ್ಳೆ ಜನರಿರಲಿ:-
ಶ್ರೀಮಂತ ವ್ಯಕ್ತಿಗಳು ಯಾವಾಗಲೂ ತಮ್ಮ ಸುತ್ತಮತ್ತ ಯಶಸ್ವಿ, ಸಮಾನ ಮನಸ್ಕ ಮತ್ತು ಬುದ್ದಿವಂತ ಜನರನ್ನು ಹೊಂದಿರಲು ಬಯಸುತ್ತಾರೆ. ಯಶಸ್ವಿ ವ್ಯಕ್ತಿಗಳು ಅಂದರೆ ತಮ್ಮ ಚಿಕ್ಕ ವಯಸ್ಸಿನಲ್ಲಿ ಮಹತ್ತರ ಸಾಧನೆ ಮಾಡಿ ಇನ್ನೂ ಹೆಚ್ಚಿನ ಸಾಧನೆಗಾಗಿ ಹಪಹಪಿಸುತ್ತಿರುತ್ತಾರೆ ಅಂತವರು ನಮ್ಮ ಸುತ್ತಮುತ್ತ ಇರುವಂತೆ ನೋಡಿಕೊಳ್ಳಬೇಕು. ಅವರಲ್ಲಿರುವ ಉತ್ಸಾಹ ಇನ್ನು ಉತ್ತಮ ಕೆಲಸಕ್ಕಾಗಿ ಪ್ರೇರೆಪಿಸುತ್ತದೆ.
9. ಮುಂಜಾನೆ ಬೇಗ ಏಳುವ ರೂಡಿ ಮಾಡಿಕೊಳ್ಳಿ :-
ಹೆಚ್ಚಿನ ಯಶಸ್ವಿ ವ್ಯಕ್ತಿಗಳು ಬೇಗ ಎದ್ದೇಳುವ ಹವ್ಯಾಸ ಹೊಂದಿರುತ್ತಾರೆ. ಮುಂಜಾನೆ ಬೇಗ ಎದ್ದೇಳುವುದರಿಂದ ಹೆಚ್ಚಿನ ಸಮಯ ಸಿಗುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಹಾಗೂ ಇಡೀ ದಿನ ಉಲ್ಲಾಸದಿಂದ ಇರುವುದು ಮುಖ್ಯವಾಗಿರುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…
ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.
ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…
ಮಂಡ್ಯ ಅಖಾಡದಲ್ಲಿ ಚುನಾವಣಾ ಕಾವು ಜೋರಾಗಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅಬ್ಬರದ ಪ್ರಚಾರ ನಡೆಸಿದ್ರು. ಮಂಡ್ಯದಲ್ಲಿ ಮೋಸದ ಮತ್ತು ಕುತಂತ್ರದ ರಾಜಕಾರಣ ಮಾಡಲಾಗ್ತಿದೆ ಅಂತಾ ಆತಂಕ ವ್ಯಕ್ತಪಡಿಸಿದ್ರು. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮನಪೂರ್ವಕವಾಗಿ ಒಪ್ಪಿಕೊಂಡು ಜೆಡಿಎಸ್ ಪ್ರಚಾರಕ್ಕೆ ಬಂದಿಲ್ಲ. ಆದ್ರೆ ಜೆಡಿಎಸ್ ನ ಬ್ಲಾಕ್ ಮೇಲ್ ತಂತ್ರಕ್ಕೆ ಹೆದರಿ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದಾರೆ. ಆದ್ರೆ ಸಿದ್ದರಾಮಯ್ಯ ಅವರು ಪಕ್ಷೇತರ ಅಭ್ಯರ್ಥಿಗೆ ಮತ ಹಾಕಬೇಡಿ ಅಂತಾ ಒಲ್ಲದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಮಾರ್ಚ್, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಬಾಕಿಯಿರುವ ಮನೆಕೆಲಸಗಳು ನಿಮ್ಮ ಸ್ವಲ್ಪ ಸಮಯ ತೆಗೆದುಕೊಳ್ಳುತ್ತವೆ….