ದೇಶ-ವಿದೇಶ

ಇತಿಹಾಸ ನಿರ್ಮಿಸಿದ ಇಸ್ರೋ…..

159

ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ.

ಭಾರತ ಇದುವರೆಗೂ ಅಭಿವೃದ್ಧಿಪಡಿಸಿದ ರಾಕೆಟ್‌ಗಳಲ್ಲೇ ಅತ್ಯಂತ ದೈತ್ಯ ಗಾತ್ರ (200 ಆನೆ ತೂಕದ) ಮತ್ತು ಸೂಪರ್‌ ಪವರ್‌ ಹೊಂದಿರುವ ಜಿಎಸ್‌ಎಲ್‌ವಿ ಮಾರ್ಕ್-3 ಉಡ್ಡಯನ ವಾಹಕವನ್ನು ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಆ ಮೂಲಕ, ಇಂಥ ಭಾರೀ ತೂಕದ ರಾಕೆಟ್‌ ಹಾರಿಸಬಲ್ಲ ಸಾಮರ್ಥ್ಯ ಹೊಂದಿರುವ ಅಮೆರಿಕ, ರಷ್ಯಾ, ಯುರೋಪ್‌, ಚೀನಾ ಹಾಗೂ ಜಪಾನ್‌ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ.

ಜಿಎಸ್‌ಎಲ್‌ವಿ ಮಾರ್ಕ್ 3 ರಾಕೆಟ್‌, ತನ್ನೊಂದಿಗೆ ಜಿಸ್ಯಾಟ್‌ 19 ಉಪಗ್ರಹ ಕೂಡಾ ಹೊತ್ತೊಯ್ಯಲಿದೆ. ಜಿಸ್ಯಾಟ್‌ 19 ಉಪಗ್ರಹವು, ಅತ್ಯಾಧುನಿಕವಾಗಿದ್ದು, ಡಿಜಿಟಲ್‌ ಇಂಡಿಯಾದ ಕನಸು ನನಸು ಮಾಡುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಭಾರತ ಇದುವರೆಗೆ 41 ಉಪಗ್ರಹಗಳನ್ನು ಹಾರಿಬಿಟ್ಟಿದ್ದು, ಅದರಲ್ಲಿ 13 ಸಂಪರ್ಕ ಉಪಗ್ರಹಗಳಾಗಿವೆ.

ಜಿಎಸ್‏ಎಲ್‏ವಿ ಮಾರ್ಕ್ 3 ರಾಕೆಟ್ ಮಹತ್ವ :-

ಸದ್ಯ ಇಸ್ರೋ ಬತ್ತಳಿಕೆಯಲ್ಲಿ ಪಿಎಸ್‌ಎಲ್‌ವಿ ಹಾಗೂ ಜಿಎಸ್‌ಎಲ್‌ವಿ ಮಾರ್ಕ್-2 ರಾಕೆಟ್‌ಗಳು 2 ಟನ್‌ ಭಾರ ಹೊತ್ತೊ ಯ್ಯ ಬಲ್ಲದು. ಅದಕ್ಕೂ ಮೇಲ್ಪಟ್ಟಭಾರದ ಉಪಗ್ರಹ ಒಯ್ಯುವ ಸಾಮರ್ಥ್ಯ ಜಿಎಸ್‌ಎಲ್‌ವಿ ಮಾರ್ಕ್ 3ಗೆ ಇದೆ. ಈ ರಾಕೆಟ್‌ ಬಳಕೆಯಿಂದ ಸಂಪರ್ಕ ಉಪಗ್ರಹಗಳನ್ನು ಉಡಾವಣೆ ಮಾಡಲು ಬೇರೆ ದೇಶಗಳ ಮೇಲೆ ಅವಲಂಬಿಸುವುದು ತಪ್ಪುತ್ತದೆ.

ಜಿಎಸ್‌ಎಲ್‌ವಿ ವಿಶೇಷತೆ:-

ದ್ರವರೂಪದ ಆಮ್ಲಜನಕ ಹಾಗೂ ದ್ರವರೂಪದ ಜಲಜನಕವನ್ನು ಇಂಧನವಾಗಿ ಬಳಸಿ ಕಾರ್ಯನಿರ್ವಹಿಸುವ ಕ್ರಯೋಜೆನಿಕ್‌ ಎಂಜಿನ್‌ ಮೂಲಕ ಪೂರ್ಣಪ್ರಮಾಣದ ರಾಕೆಟ್‌ ಉಡಾವಣೆ ಮಾಡುತ್ತಿರುವುದು ಇದೇ ಮೊದಲು.

ಜಿಎಸ್‏ಎಲ್‏ವಿ ಮಾರ್ಕ್ 3 ದೇಶದ ಅತ್ಯಂತ ದೈತ್ಯ ರಾಕೆಟ್‌ ಆಗಿದೆ. ಜತೆಗೆ ಅತ್ಯಂತ ಕುಬ್ಜ ರಾಕೆಟ್‌ ಕೂಡ ಹೌದು. ಎತ್ತರ 43 ಮೀಟರ್‌. (ಪಿಎಸ್‌ಎಲ್‌ವಿ ರಾಕೆಟ್‌ 44.4 ಮೀಟರ್‌ ಎತ್ತರವಿದೆ).
ಭೂಸ್ಥಿರ ವರ್ಗಾವಣೆ ಕಕ್ಷೆಗೆ 4 ಟನ್‌, ಕೆಳ ಭೂ ಕಕ್ಷೆಗೆ 8 ಟನ್‌ ತೂಕದ ಉಪಗ್ರಹ ಒಯ್ಯುವ ಸಾಮರ್ಥ್ಯ ಹೊಂದಿದೆ.

ಜಿಸ್ಯಾಟ್‌ 19 ವಿಶೇಷತೆ:-ಜಿಸ್ಯಾಟ್‌-19, ಉಪಗ್ರಹ ಆಧರಿತ ಧ್ವನಿ, ವೇಗದ ಇಂಟರ್ನೆಟ್‌ ಹಾಗೂ ವಿಡಿಯೋದಂತಹ ಅತ್ಯಂತ ಸುರಕ್ಷಿತ ಸೇವೆ ಆರಂಭಿಸುವ ನಿಟ್ಟಿನಲ್ಲಿ ಮೊದಲ ಉಪಗ್ರಹ . ಈ ಹಿಂದೆ ಉಡಾವಣೆ ಮಾಡಲಾದ 6-7 ಉಪಗ್ರಹಗಳಿಗೆ ಒಂದು ಜಿಸ್ಯಾಟ್‌- 19 ಸಮ. ಜಿಸ್ಯಾಟ್‌ 19ರಲ್ಲಿ ಟ್ರಾನ್ಸ್‌ಫಾಂಡರ್‌ಗಳು ಇರುವುದಿಲ್ಲ. ಈ ಹಿಂದಿನ ಉಪಗ್ರಹಗಳಲ್ಲಿ 1 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದ್ದರೆ ಈ ಉಪಗ್ರಹದಲ್ಲಿ ಒಮ್ಮೆಗೆ 8 ರೇಡಿಯೋ ಸಂಕೇತ ಕಳುಹಿಸುವ ವ್ಯವಸ್ಥೆ ಇದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಉಪಯುಕ್ತ ಮಾಹಿತಿ

    ಪಾರಿಜಾತ ವೃಕ್ಷದ ಬಗ್ಗೆ ನಿಮಗೆ ತಿಳಿಯದ ರಹಸ್ಯಗಳು !

    ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಸುದ್ದಿ

    ತಮಿಳು ಚಿತ್ರರಂಗದವರು ಈ ಹೆಸರು ಕೇಳಿದ್ರೆ ಬೆಚ್ಚಿಬೀಳುತ್ತರೆ…!ಯಾಕೆ ಗೊತ್ತ?

    ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…

  • ಸುದ್ದಿ

    ಇನ್ಮುಂದೆ ಪ್ಲಾಸ್ಟಿಕ್‌ ಬಳಕೆ ಮಾಡುವವರು ಈ ದಂಡದಿಂದ ಪಾರಾಗಲು ಸಾಧ್ಯವಿಲ್ಲ,.!!

    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಕನಸಿನಂತೆ  ಅವರ 150ನೇ ಜಯಂತಿ ಅಂಗವಾಗಿ ಅವರ ತತ್ವ ಸಿದ್ದಾಂತಗಳನ್ನು ದೃಷ್ಠಿಯಲ್ಲಿಟ್ಟುಕೊಂಡು ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇಧಿಸಬೇಕು ಮತ್ತು  ಅವರ ಕನಸಿನಂತೆ ನೈರ್ಮಲ್ಯ, ಹಸಿರು, ಆರೋಗ್ಯ, ಕಸಮುಕ್ತ ಭಾರತ ಸೃಷ್ಠಿಸುವ ಉದ್ದೇಶದಿಂದ ಜನ ಜಾಗೃತಿಮೂಡಿಸುವ ಅಂಗೀಕಾರ ಆಂದೋಲನಕ್ಕೆ ಮಾಜಿ ಸಚಿವ, ಶಾಸಕ ವೆಂಕಟರಾವ ನಾಡಗೌಡ ಪ್ರಮಾಣ ವಚನ ಬೋಧಿಸುವ ಮೂಲಕ ಚಾಲನೆ ನೀಡಿದರು. ನಗರದಲ್ಲಿ ಪ್ಲಾಸ್ಟಿಕ್‌ ಬಳಕೆ ಸಂಪೂರ್ಣವಾಗಿ ನಿಷೇದಿಸಲಾಗಿದೆ ಯಾವುದೇ ಅಂಗಡಿ, ಬಾರ್‌ ರೆಸ್ಟೋರೆಂಟ್‌, ಯಾವುದೇ ವಾಣಿಜ್ಯ ಮಳಿಗೆಗಳಲ್ಲಿ ಪ್ಲಾಸ್ಟಿಕ್‌ ಮಾರಾಟ ಮಾಡುವಂತಿಲ್ಲ  ಮಾರಾಟ…

  • ಗ್ಯಾಜೆಟ್

    ಹುಷಾರ್!ನೀವು ಚೀನಾ ಮೊಬೈಲ್ ಬಳುಸುತ್ತಿದ್ದರೆ ತಪ್ಪದೆ ಈ ಲೇಖನಿ ಓದಿ…

    ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.