ಉಪಯುಕ್ತ ಮಾಹಿತಿ

ಈಗ ಬಂದಿದೆ ಹೊಸ ಸ್ಫೋಟಗೊಳ್ಳದ ಪಾರದರ್ಶಕ ಗ್ಯಾಸ್ ಸಿಲಿಂಡರ್..!ತಿಲಿಯಲು ಈ ಲೇಖನ ಓದಿ..

571

ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್‌ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.

ಗೋ ಗ್ಯಾಸ್‌ನ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ಡಿ. ವೆಂಕಟರಾಮನ್, ಗ್ಯಾಸ್ ಸಿಲಿಂಡರ್ ಸೋರಿಕೆ, ಸ್ಫೋಟದಂತಹ ಹಲವಾರು ಪ್ರಕರಣಗಳಿಂದ ಗ್ರಾಹಕರಿಗೆ ಮುಕ್ತಿ ನೀಡಲು ಗೋ ಗ್ಯಾಸ್ ಬಹಳ ಅನುಕೂಲಕರವಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಗೋ ಗ್ಯಾಸ್ ಎಲೈಟ್ ಎಲ್’ಪಿಜಿ ಸಿಲಿಂಡರ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಲಾಗಿದೆ ಎಂದು ತಿಳಿಸಿದರು.

ಗೃಹ ಬಳಕೆಗಾಗಿ ಮೊದಲ ಬಾರಿಗೆ ‘ಗೋ ಗ್ಯಾಸ್‌’ ಎಲ್‌ಪಿಜಿ ಸಂಪರ್ಕ ಪಡೆಯಲು ಬಯಸುವವರು ವಿಳಾಸ ದೃಡೀಕರಣ ದಾಖಲೆ ಹಾಗೂ 1,350 ರೂ. ನೀಡಬೇಕು. ವಾಣಿಜ್ಯ ಉದ್ದೇಶಕ್ಕಾಗಿ 1700 ರೂ. ನೀಡಬೇಕು. ಆಮೇಲೆ ಪ್ರತಿ ಸಿಲಿಂಡರ್‌ಗೆ ಗೃಹ ಬಳಕೆದಾರರು 930 ರೂ. ಮತ್ತು ವಾಣಿಜ್ಯ ಬಳಕೆದಾರರು 1,450 ರೂ. ನೀಡಬೇಕು ಎಂದರು.

ಗೋ ಗ್ಯಾಸ್ ಎಲೈಟ್ ಸಿಲಿಂಡರ್‌ಗಳು ಅತ್ಯಂತ ಹಗುರವಾಗಿದ್ದು, ಮಹಿಳೆಯರು ಮತ್ತು ಮಕ್ಕಳು ಇದನ್ನು ಸುಲಭದಲ್ಲಿ ಎತ್ತಬಹುದು. ಸಿಲಿಂಡರ್‌ಗಳು ಪಾರದರ್ಶಕವಾಗಿದ್ದು ಅನಿಲ ಪ್ರಮಾಣ ಕಾಣುತ್ತದೆ. ಇವು ಬಳಕೆಗೆ ಅತ್ಯಂತ ಸುರಕ್ಷಿತವಾಗಿವೆ. ಸಿಲಿಂಡರ್‌ನಲ್ಲಿ ಅನಿಲ ಕದಿಯುವುದು ಮತ್ತು ಕಡಿಮೆ ಅನಿಲ ಪೂರೈಸಲು ಸಾಧ್ಯವಿರುವುದಿಲ್ಲ ಎಂದರು.

ಗೋ ಗ್ಯಾಸ್ ಎಲೈಟ್ ಸಿಲಿಂಡರ್‌ಗಳು ಹೈಡ್ರಾಲಿಕ್ ಫ್ರೂಪ್ ಪ್ರೆಷರ್ ಟೆಸ್ಟ್ ಹೈಡ್ರಾಲಿಕ್ ಎಕ್ಸ್‌ಪ್ಯಾನ್ಷನ್ ಟೆಸ್ಟ್, ಸಿಲಿಂಡರ್ ಸಿಡಿಯುವ ಪರೀಕ್ಷೆ, ಆ್ಯಂಬಿಯೆಂಟ್ ಸೈಕಲ್ ಟೆಸ್ಟ್, ವ್ಯಾಕ್ಯೂಮ್ ಟೆಸ್ಟ್, ಎನ್ವಿರಾನ್‌ಮೆಂಟಲ್ ಸೈಕಲ್ ಟೆಸ್ಟ್, ಹೈ ಟೆಂಪರೇಚರ್ ಕ್ರೀಪ್ ಟೆಸ್ಟ್ ಸೇರಿದಂತೆ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದ್ದು ಅವುಗಳಿಂದ ಈ ಸಿಲಿಂಡರ್ ಶೇ.100ರಷ್ಟು ಸುರಕ್ಷಿತವೆಂದು ತಿಳಿದು ಬಂದಿದೆ ಎಂದು ವಿವರಿಸಿದರು.

ನಗರದ ಲಾಲ್‌ಬಾಗ್‌, ಬಿಇಎಲ್‌ನ ಎಂ.ಎಸ್‌.ಪಾಳ್ಯ ಹಾಗೂ ಚಾಮರಾಜಪೇಟೆ ಸೇರಿದಂತೆ ರಾಜ್ಯದಲ್ಲಿ ಒಟ್ಟು 18 ಕಡೆ ಆಟೋ ಎಲ್‌ಪಿಜಿ ಬಂಕ್‌ಗಳಿವೆ. ಇವು ದಿನದ 24 ಗಂಟೆ ಕಾರ್ಯನಿರ್ವಹಿಸುತ್ತಿವೆ.ಇಲ್ಲಿ ಗ್ರಾಹಕರು ಯಾವುದೇ ಸಮಯದಲ್ಲಿ ಎಲ್‌ಪಿಜಿ ಮುಗಿದರೂ ಬಂಕ್‌ಗಳಿಗೆ ಬಂದು, ಭರ್ತಿ ಮಾಡಿರುವ ಸಿಲಿಂಡರ್‌ಗಳನ್ನು ಪಡೆಯಬಹುದು ಎಂದು ವಿವರಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ವ್ಯಕ್ತಿ ವಿಶೇಷಣ

    ಕನ್ನಡ ಭಾಷೆಯಲ್ಲೇ2 ಸಾವಿರ ತೀರ್ಪು ನೀಡಿದ ‘ಮಿಟ್ಟಲಕೋಡ ‘ ಭಾಷಾ ಪ್ರೇಮದ ಬಗ್ಗೆ ನಿಮಗೆಷ್ಟು ಗೊತ್ತು..?ತಿಳಿಯಲು ಈ ಲೇಖನ ಓದಿ…

    ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಹೇಳಿದ್ದರು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…

  • ಸುದ್ದಿ

    ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

    ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ. ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ…

  • ಸಾಧನೆ

    ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆಯಾಗಿ ಕೋಲಾರ ಗಾಯಿತ್ರಿ ಆಯ್ಕೆ

    ಕರ್ನಾಟಕ ಹೈ ಕೋರ್ಟ್‌ನ ಸಿವಿಲ್ ನ್ಯಾಯಾಧೀಶೆಯಾಗಿ ಬಂಗಾರಪೇಟೆಯ ಎನ್.ಗಾಯಿತ್ರಿ ರವರು ಆಯ್ಕೆಯಾಗಿ ಕೋಲಾರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. 2021ರಲ್ಲಿ ಕಾನೂನು ಪದವಿ ಪಡೆದುಕೊಂಡಿರುವ ಗಾಯತ್ರಿರವರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಸತತ ಮತ್ತು ಸರಿಯಾದ ಪ್ರಯತ್ನದ ಮೂಲಕ 25ನೇ ವಯಸ್ಸಿಗೆ ಕರ್ನಾಟಕ ಸಿವಿಲ್ ಕೋರ್ಟ್‌ನ  ನ್ಯಾಯಾಧೀಶರಾಗಿ ಆಯ್ಕೆಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯವು ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು.  ಇದೀಗ ಫಲಿತಾಂಶ ಪ್ರಕಟಗೊಂಡಿದ್ದು ಗಾಯತ್ರಿ ಅವರು ಆಯ್ಕೆಯಾಗಿದ್ದಾರೆ….

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…