ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ .
ಬ್ರಿಟನ್ನಿನ 21 ವರ್ಷದ ಹೇಡನ್ ಕ್ರಾಸ್ ಎಂಬವರು ಬ್ರಿಟನ್ ನಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಿದ ವ್ಯಕ್ತಿಯಾಗಿದ್ದಾರೆ. ಜೂನ್ 16ರಂದು ನಗರದ ರಾಯಲ್ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನನವಾಗಿದೆ. ಸದ್ಯ ಕ್ರಾಸ್ ಮಗುವಿಗೆ `ಟ್ರಿನಿಟಿ ಲೇಘ್ ‘ ಅಂತ ಹೆಸರಿಟ್ಟಿದ್ದಾರೆ. ಇಲ್ಲಿ ಓದಿ:-
ಹೇಡಿನ್ ಕ್ರಾಸ್ ಹುಟ್ಟುವಾಗ ಹೆಣ್ಣಾಗಿದ್ದು, ಸಲಿಂಗಿಯಾಗಲು ಚಿಕಿತ್ಸೆ ಪಡೆದಿದ್ದರು. ಆ ಬಳಿಕ ಪುರುಷನಾಗುವ ಆಸೆಯಿಂದ ಚಿಕಿತ್ಸೆಗೆ ಒಳಪಟ್ಟು ಲಿಂಗ ಪರಿವರ್ತನೆ ಮಾಡಿಸಿಕೊಂಡಿದ್ದರು.
ಪುರುಷನಾಗಲು ಹಾರ್ಮೋನ್ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಈ ಮಧ್ಯೆ ಕ್ರಾಸ್ ಗೆ ತಾನು ಮಗು ಹೊಂದಬೇಕು ಎನ್ನುವ ಹಂಬಲ ಉಂಟಾಗಿ ಅವರು ಹಾರ್ಮೊನ್ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸಿದ್ದರು.
ಹೀಗಾಗಿ ಫೇಸ್ಬುಕ್ ಮೊರೆ ಹೋಗಿದ್ದ ಇವರು ವೀರ್ಯದಾನಿಯೊಬ್ಬರ ಸಹಾಯದಿಂದ ಗರ್ಭ ಧರಿಸಿದ್ದರು. ಸದ್ಯ ಈತ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆ ಮತ್ತು ಮಗು ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗು ಟ್ರಿನಿಟಿ ಎಲ್ಲಾ ರೀತಿಯಲ್ಲೂ ಪರಿಪೂರ್ಣಳಾಗಿದ್ದಾಳೆ. ಅವಳು ಆರೋಗ್ಯವಾಗಿದ್ದಾಳೆ ಎಂದು ವರದಿಯಾಗಿದೆ. ಜೂನ್ 16ರಂದು ಮಗುವಿಗೆ ಜನ್ಮ ನೀಡಿದ್ದು, ಸದ್ಯ ಮಗುವಿನ ಜನನ ಪ್ರಮಾಣ ಪತ್ರದಲ್ಲಿ ತಾನು ತಾಯಿ ಅಂತಾ ನಮೂದಿಸಿದ್ದಾರೆ. ಆದ್ರೆ ಮಗುವಿನ ತಂದೆಯ ಹೆಸರನ್ನು ಉಲ್ಲೇಖಿಸಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…