ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಶನಿವಾರ, 14/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:08:40 ಸೂರ್ಯಾಸ್ತ18:46:04 ಹಗಲಿನ ಅವಧಿ12:37:24 ರಾತ್ರಿಯ ಅವಧಿ11:21:42 ಚಂದ್ರಾಸ್ತ17:16:30 ಚಂದ್ರೋದಯ29:42:29* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಸ್ಟೈಲ್ಗಾಗಿ ಕಡಿಮೆ ಬೆಲೆಯ ಸನ್ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್ಗ್ಲಾಸ್ ಕಣ್ಣಿಗೆ…