ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎದೆಯುರಿಯು ಸಾಮಾನ್ಯ ಜೀರ್ಣ ಸಮಸ್ಯೆಯಾಗಿದೆ. ಅದನ್ನು ಆಮ್ಲ ಹಿಮ್ಮುಖ ಹರಿವು ಎಂದೂ ಕರೆಯಲಾಗುತ್ತದೆ ಮತ್ತು ಜಠರಾಮ್ಲವು ಅನ್ನನಾಳದಲ್ಲಿ ದೂಡಲ್ಪಟ್ಟಾಗ ಈ ಸಮಸ್ಯೆಯು ಉದ್ಭವವಾಗುತ್ತದೆ. ನಿದ್ರೆಯ ಕೊರತೆ,ಸೂಕ್ತವಲ್ಲದ ಆಹಾರ,ಧೂಮ್ರಪಾನ,ಸೋಂಕು ಇತ್ಯಾದಿಗಳು ಎದೆಯುರಿಯನ್ನುಂಟು ಮಾಡುತ್ತವೆ. ಇದರಿಂದ ಪಾರಾಗಲು ಕೆಲವು ಸರಳ ಉಪಾಯಗಳಿಲ್ಲಿವೆ. ►ಆಗಾಗ್ಗೆ ಸಣ್ಣ ಊಟಗಳನ್ನು ಮಾಡಿ ಸಣ್ಣ ಊಟಗಳನ್ನು ಆಗಾಗ್ಗೆ ಮಾಡುವುದು ಎದೆಯುರಿಯಿಂದ ಪಾರಾಗಲು ಅತ್ಯಂತ ಸರಳ ಉಪಾಯವಾಗಿದೆ. ಏಕೆಂದರೆ ನಾವು ಒಂದೇ ಬಾರಿಗೆ ಅತಿಯಾಗಿ ಆಹಾರ ಸೇವಿಸುವುದರಿಂದ ಕೆಳ ಅನ್ನನಾಳದ ಭಾಗದಲ್ಲಿರುವ ಕವಾಟದಂತಹ ಸ್ನಾಯು ‘ಸ್ಫಿಂಕ್ಟರ್ (ಎಲ್ಇಎಸ್)…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
ಲೋಳೆಸರ, ಇದು ಅಲೋವೇರ ಎಂದು ಕರೆಯುವ ಈ ಗಿಡದ ಮೂಲ ಸ್ಥಳ ಆಫ಼್ರಿಕಾ ಖಂಡ. ಅಲೋ ವೆರಾ ಎಂಬುದು ಅನ್ನಿಯ ಕುಲದ ಸಸ್ಯ ಜಾತಿಯಾಗಿದೆ.ಇದು ಪ್ರಪಂಚದಾದ್ಯಂತ ಉಷ್ಣವಲಯದ ಹವಾಮಾನಗಳಲ್ಲಿ ಕಾಡು ಬೆಳೆಯುತ್ತದೆ
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….