ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್ ಕಡೆ ಗಮನ ನೀಡಿದರೆ…
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ…
ಸ್ಕೂಟಿ ಹರಿಸಿದ ಸವಾರನ ಮೇಲೆ ನಾಗರಹಾವು ಅಟ್ಯಾಕ್ ಮಾಡಿದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ಬಳಿ ಮೊಹ್ಮದ್ ಆಯಾತುಲ್ಲಾ ತಮ್ಮ ಸ್ಕೂಟಿಯಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರ ಹಾವಿನ ಮೇಲೆ ಸ್ಕೂಟಿ ಹತ್ತಿಸಿದ್ದಾರೆ. ಈ ವೇಳೆ ಚಕ್ರಕ್ಕೆ ಸಿಲುಕಿದ ಪರಿಣಾಮ ಸವಾರ ಮೊಹ್ಮದ್ ನಿಯಂತ್ರಣ ತಪ್ಪಿ ಸ್ಕೂಟಿ ಸಮೇತ ಕೆಳಗೆ ಬಿದ್ದಿದ್ದಾರೆ. ಆಗ ನಾಗರಹಾವು ಆತನ ಕಾಲಿಗೆ ಅಟ್ಯಾಕ್ ಮಾಡಿದೆ. ಇದರಿಂದ ಹೆದರಿದ ಮೊಹ್ಮದ್ ಎದ್ನೋ ಬಿದ್ನೋ…