ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಸಂಸದ ಮುನಿಸ್ವಾಮಿಗೆ #s.Muniswamy ಮಾಜಿ ಸಚಿವ ವರ್ತೂರ್ ಪ್ರಕಾಶ್ #r.varthur prakash ಕೋಲಾರಮ್ಮ ದೇವಾಲಯದ ಬಳಿ ಕಿಸ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷ ಹಾಗೂ ಸಂಸದ ಮುನಿಸ್ವಾಮಿ ನಡುವೆ ಗೊಂದಲವಿದೆಯಾ ಎನ್ನುವ ಪ್ರಶ್ನೆ ಕೇಳುತ್ತಿದ್ದಂತೆಯೇ ಪಕ್ಕದಲ್ಲೇ ಇದ್ದ ಮುನಿಸ್ವಾಮಿಗೆ ವರ್ತೂರ್ ಪ್ರಕಾಶ್ ಕಿಸ್ ಮಾಡಿ ಗೊಂದಲವಿಲ್ಲ ಎಂದಿದ್ದಾರೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಕೋಲಾರದ ಶಕ್ತಿದೇವತೆ ಕೋಲಾರಮ್ಮಗೆ ಪೂಜೆ ಸಲ್ಲಿಸಿದ್ದು, ನಾವೆಲ್ಲಾ ಒಟ್ಟಾಗಿ ಇರ್ತೀವಿ ಎಂದು ಕೋಲಾರಮ್ಮನ ಎದುರು ಪ್ರಮಾಣ ಮಾಡಿದ್ದೇವೆ. ನಮ್ಮ ನಾಯಕರು ಸಂಸದ ಮುನಿಸ್ವಾಮಿ ಎಂದು…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…
ಸಾಮಾನ್ಯವಾಗಿ ನಾವು ಮನೆಯಲ್ಲಿ ಅನ್ನ ಮಾಡುವಾಗ ಅಕ್ಕಿಯನ್ನು ತೊಳೆದು ಆ ನೀರನ್ನು ಚೆಲ್ಲುತ್ತೇವೆ ಅಥವಾ ಹಸುಗಳಿಗೆ ಕುಡಿಸುತ್ತೇವೆ. ಇದು ಎಲ್ಲರೂ ಮಾಡುವುದೇ… ಆದರೆ ಆ ನೀರಿನಿಂದ ನಮ್ಮ ಮುಖದ ಮೇಲಿನ ಮೊಡವೆಗಳನ್ನು ದೂರ ಮಾಡಿಕೊಳ್ಳುಬಹುದಲ್ಲದೇ ನಮ್ಮ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಬಹುದಂತೆ.
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…