ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ.

ಬಿಸಿಯಾದ ನೀರಿನೊಂದಿಗೆ ಈರುಳ್ಳಿ ರಸದ ಮಿಶ್ರಣ:-

ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ ಬಳಸಬಹುದು. ಅಗತ್ಯವಾದಷ್ಟು ಬಿಸಿ ನೀರಿನೊಂದಿಗೆ ಈರುಳ್ಳಿ ರಸವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು
ಶ್ಯಾಂಪೂ ಬಳಸಿದ ಮೇಲೆ ಸ್ನಾನದ ಕೊನೆಯ ಹಂತದಲ್ಲಿ ಬಳಸಿ. ಒಂದೇ ತಿಂಗಳಲ್ಲಿ ಅದರ ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಸುಲಭವಾಗಿ ತಯಾರಿಸಲ್ಪಡುವ ಈರುಳ್ಳಿಯ ರಸ:-

ಈರುಳ್ಳಿ ರಸ ಪಡೆಯುವುದು ತುಂಬಾ ಕಷ್ಟಕರ ಕೆಲಸವೆಂದು ನಿಮಗೆ ಅನಿಸುತ್ತಿರಬಹುದು. ಆದರೆ ಈರುಳ್ಳಿ ರಸ ತೆಗೆಯುವುದು ತುಂಬಾ ಸುಲಭ. ಈರುಳ್ಳಿಯನ್ನು ಮಿಕ್ಸಿಗೆ ಹಾಕಿ ಸರಿಯಾಗಿ ರುಬ್ಬಿಕೊಳ್ಳಬೇಕು. ಈರುಳ್ಳಿಯನ್ನು ಸರಿಯಾಗಿ ಕತ್ತರಿಸಿಕೊಂಡರೆ ಅದರಿಂದ ಹೆಚ್ಚಿನ ರಸ ಸಿಗುವುದು. ತಲೆಬುರುಡೆಯ ರಂಧ್ರಗಳನ್ನು ತೆರೆಯಲು ಬಿಸಿಎಣ್ಣೆ ಬಳಸುವುದು ಸಾಮಾನ್ಯ. ಆದರೆ ಈರುಳ್ಳಿ ರಸವನ್ನು ಬಿಸಿ ಮಾಡುವ ಅಗತ್ಯವಿಲ್ಲ. ಈರುಳ್ಳಿ ರಸ ಹಚ್ಚಿಕೊಳ್ಳುವ ಅರ್ಧ ಗಂಟೆಗೆ ಮೊದಲು ಬಿಸಿ ಟವೆಲ್ನ್ನು ತಲೆಗೆ ಕಟ್ಟಿಕೊಂಡರೆ ರಸವು ಚೆನ್ನಾಗಿ ಹೀರಲ್ಪಡುವುದು.
ಹೇರ್ ಪ್ಯಾಕ್ ನಲ್ಲಿ ಈರುಳ್ಳಿ ಮತ್ತು ಬಿಯರ್ ಸೇರಿಸಿದರೆ:-

ಕೂದಲು ಉದುರುವ ಸಮಸ್ಯೆಯೊಂದಿಗೆ ಕೂದಲಿನ ಕಾಂತಿ ಹೆಚ್ಚಿಸುವಂತಹ ಹೇರ್ ಪ್ಯಾಕ್ ಇದ್ದರೆ ತುಂಬಾ ಒಳ್ಳೆಯದು. ದಪ್ಪ ಕೂದಲು ರೇಷ್ಮೆಯಂತೆ ಹೊಳೆಯುತ್ತಿದ್ದರೆ ಅದು
ನೋಡಲು ಚಂದ. ಇಂತಹ ಕೂದಲು ಪಡೆಯಲು ನೀವು ಹೇರ್ ಪ್ಯಾಕ್ನ್ನು ಯಾವಾಗಲಾದರೂ ಬಳಸಿಕೊಳ್ಳಬೇಕು. ಈರುಳ್ಳಿ ರಸ ತೆಗೆದ ಬಳಿಕ ಅದರ ತಿರುಳು ಹಾಗೆ ಉಳಿದಿರುವುದು. ಇದನ್ನ ತೆಂಗಿನ ಎಣ್ಣೆ ಜತೆ ಸೇರಿಸಿ ಪೇಸ್ಟ್ ಮಾಡಿ. ಈಗ ಇದಕ್ಕೆ ಬಿಯರ್ ಹಾಕಿ. ಬಿಯರ್ ನೊಂದಿಗೆ ಈರುಳ್ಳಿಯು ಕೂದಲಿಗೆ ನೈಸರ್ಗಿಕ ಕಾಂತಿ ನೀಡುವುದು. ತೆಂಗಿನೆಣ್ಣೆಯು ಕೂದಲಿನ ಬುಡಕ್ಕೆ ಪೋಷಣೆ ನೀಡುವುದು.
ಈರುಳ್ಳಿ ರಸ ಮತ್ತು ತೆಂಗಿನ ಎಣ್ಣೆ:-

ನಿಮಗೆ ತಿಳಿದಿರುವ ಹಾಗೆ ತೆಂಗಿನ ಎಣ್ಣೆಯು ಸಾಮಾನ್ಯವಾಗಿ ಕೇಶಕ್ಕೆ ಹಚ್ಚುವ ಎಣ್ಣೆಯಾಗಿದ್ದು, ಕೂದಲುದುರುವ ಸಮಸ್ಯೆಗೆ ನೆರವಾಗುತ್ತದೆ. ಈ ಎಣ್ಣೆಯನ್ನು ಈರುಳ್ಳಿ ರಸದ ಜೊತೆಗೆ ಬಳಸಿದರೆ ಈ ಸಮಸ್ಯೆಯನ್ನು ಇನ್ನೂ ಪರಿಣಾಮಕಾರಿಯಾಗಿ ನಿವಾರಣೆ ಮಾಡಬಹುದಾಗಿದ್ದು, ಕೂದಲ ಬೆಳವಣಿಗೆಯನ್ನು ಉತ್ತೇಜಿಸಲಿದೆ. 2 ಚಮಚ ತೆಂಗಿನ ಎಣ್ಣೆಯನ್ನು 1 ಚಮಚ ಈರುಳ್ಳಿಯ ರಸದೊಂದಿಗೆ ಬೆರೆಸಿ ಕೇಶಕ್ಕೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತರ ಸ್ವಚ್ಛಗೊಳಿಸಿ. ವ್ಯತ್ಯಾಸ ನಿಮಗೇ ತಿಳಿಯುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಕೆಲವರು ಸದಾಕಾಲ ಬಿಸಿಬಿಸಿ ನೀರನ್ನೇ ಕುಡಿಯಲು ಇಷ್ಟಪಡ್ತಾರೆ, ಇನ್ನು ಕೆಲವರಿಗೆ ನೀರು ಎಷ್ಟು ತಣ್ಣಗಿದ್ರೂ ಸಾಲದು. ಚರ್ಮದ ಆರೋಗ್ಯ, ಜೀರ್ಣಕ್ರಿಯೆ, ಮೈಗ್ರೇನ್ ನಿಂದ ಹಿಡಿದು ಎಲ್ಲದಕ್ಕೂ ನೀರು ಪರಿಹಾರ. ಬಿಸಿ ನೀರು ಕುಡಿಯೋದು ಆರೋಗ್ಯಕ್ಕೆ ಒಳ್ಳೆಯದು ಅನ್ನೋದನ್ನು ವೈದ್ಯಕೀಯ ಲೋಕ ಕೂಡ ಒಪ್ಪಿಕೊಂಡಿದೆ. ಊಟದ ಜೊತೆಗೆ ಒಂದು ಲೋಟ ಬಿಸಿ ನೀರು ಸೇವನೆ ಒಳ್ಳೆಯದು ಅನ್ನೋದು ಆಯುರ್ವೇದ ವೈದ್ಯರ ಸಲಹೆ. ಚೀನಾ ಮತ್ತು ಜಪಾನ್ ನಲ್ಲಿ ಊಟದ ಜೊತೆ ಬಿಸಿಬಿಸಿ ಚಹಾ ಕುಡಿಯುವ ಪದ್ಧತಿಯಿದೆ. ಹಾಗಂತ ಅದೇನು…
ಬಿಗ್ ಬಾಸ್ ಕನ್ನಡ 7ನೇ ಆವೃತ್ತಿಯ ಮೂರನೇ ವಾರ ದುನಿಯಾ ರಶ್ಮಿ ಎಲಿಮಿನೇಟ್ ಆಗಿದ್ದಾರೆ. ಬಿಗ್ ಮನೆಯಿಂದ ಹೊರಬಂದ ಬಳಿಕ ಸಂದರ್ಶನ ಒಂದರಲ್ಲಿ ಭಾಗವಹಿಸಿದ್ದರು. ಬಿಗ್ ಬಾಸ್ ಜರ್ನಿ ಬಗ್ಗೆ ತಮ್ಮ ಅನುಭವಗಳನ್ನ ಹೇಳಿದ ರಶ್ಮಿ, ಒಬ್ಬ ಸೂಪರ್ ಸ್ಟಾರ್ ಜೊತೆ ನಟಿಸಬೇಕು ಎಂಬ ಆಸೆಯನ್ನು ಅಂಚಿಕೊಂಡಿದ್ದಾರೆ. ರಶ್ಮಿ ಅವರನ್ನು ನಿಮಗೆ ಕನ್ನಡದ ಯಾವ ನಟ ಇಷ್ಟ ಎಂದು ಸಂದರ್ಶನದಲ್ಲಿ ಕೇಳಿದರು. ಇದಕ್ಕೆ ಉತ್ತರವಾಗಿ ಇಬ್ಬರು ನಟರ ಹೆಸರನ್ನು ಹೇಳಿದರು, ಒಬ್ಬರನ್ನು ಆಯ್ಕೆ ಮಾಡಬೇಕಿತ್ತು. ದುನಿಯಾ ರಶ್ಮಿ…