ಗ್ಯಾಜೆಟ್

ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

833

ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್‌ನ್ನು ನೀವು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್‌ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.

1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)

ಗೂಗಲ್ ಪ್ಲೇಸ್ಟೋರ್‌ನಲ್ಲಿ ಇರುವ ಈ ಆಪ್‌‍ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್‌ನಲ್ಲಿದ್ದರೆ ಕೂಡಲೆ ಅನ್‌ಇನ್‌ಸ್ಟಾಲ್ ಮಾಡಿ.

2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್‌ನಲ್ಲಿರುವ ಈ ಆಪ್‌ನಲ್ಲಿ ಮಾಲ್‌ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್‌ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.

3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್‌ನ್ನು 50 ಸಾವಿರ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.

5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್‌ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್‌ಇನ್‌ಸ್ಟಾಲ್ ಮಾಡಿಬಿಡಿ.

6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್‌ನ್ನು 50 ಸಾವಿರ ಮಂದಿ ಈಗಾಗಲೆ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್‌ನಲ್ಲೂ ಸಹ ಮಾಲ್‌ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್‌ನಿಂದ ಕೂಡಲೆ ತೆಗೆದುಬಿಡಿ.

7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.

8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್‌ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.

10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್‍ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.

11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    170 ಕ್ಕೂ ಹೆಚ್ಚು ಭತ್ತದ ತಳಿಗಳ ಜೋಪಾನ ಮಾಡಿದ್ದ ಜಯರಾಮನ್ …!

    ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಆಶಿರ್ವಾದದಿಂದ ಈ ರಾಶಿಗಳಿಗೆ ಶುಭಯೋಗ..ನಿಮ್ಮ ರಾಶಿಯೂ ಇದೆಯಾ ನೋಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ದೇವರು

    ಕೋಲಾರದಲ್ಲಿ ರಾಕ್ಷಸ ರಾವಣನಿಗೂ ಪೂಜೆ!

    ಕೋಲಾರ:- ರಾಮನ ಪೂಜೆ ಎಲ್ಲಾ ಕಡೆ ನಡೆಯುತ್ತದೆ ಅದರಲ್ಲಿ ವಿಶಿಷ್ಟತೆ ಏನೂ ಇಲ್ಲ ಆದರೆ, ತಾಲ್ಲೂಕಿನ ಸುಗಟೂರು ಮತ್ತು ವಕ್ಕಲೇರಿ ಗ್ರಾಮಗಳಲ್ಲಿ ನಂತರ ಶಿವ ಭಕ್ತನಾದ ರಾವಣನಿಗೂ ಪ್ರಾಧಾನ್ಯತೆ ನೀಡಿ ಪೂಜಿಸುವ ವಿಶಿಷ್ಟ ಪದ್ದತಿ ರೂಢಿಯಲ್ಲಿದೆ. ವಕ್ಕಲೇರಿ ಗ್ರಾಮದಲ್ಲಿ ಮಾರ್ಕಂಡೇಶ್ವರ ಸ್ವಾಮಿ ರಥೋತ್ಸವ ಮುಗಿದಿದ್ದು, ಫೆ.7ರ ಮಂಗಳವಾರ ರಾತ್ರಿ 10 ತಲೆಗಳನ್ನೊತ್ತ ರಾವಣನ ಮೂರ್ತಿ ಮತ್ತು ಮೇಲೆ ಮಾರ್ಕಂಡೇಶ್ವರ ಸ್ವಾಮಿಯ ಮೂರ್ತಿಗಳನ್ನಿಟ್ಟು ವೈಭವದಿಂದ ರಾವಣೋತ್ಸವ ನಡೆಸಲಾಯಿತು. ಅದೇ ರೀತಿ ತಾಲ್ಲೂಕಿನ ಸುಗಟೂರು ಗ್ರಾಮದಲ್ಲೂ ಕೋದಂಡರಾಮಸ್ವಾಮಿ ಬ್ರಹ್ಮರಥೋತ್ಸವ ನಡೆದ…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • ವಿಚಿತ್ರ ಆದರೂ ಸತ್ಯ

    ಈ ಗ್ರಾಮದಲ್ಲಿ, ಮೊದಲು ಮಕ್ಕಳು, ಆಮೇಲೆ ಮದುವೆ..!ತಿಳಿಯಲು ಇದನ್ನು ಓದಿ…

    ಅವಿವಾಹಿತ ಜೋಡಿಯೊಂದು ಮುಂದಿನ ಜೀವನವನ್ನು ಜೊತೆಯಾಗಿ ಕಳೆಯುವ ನಿರ್ಧಾರ ಕೈಗೊಂಡಾಗ ಇಬ್ಬರೂ ಮುಂದಿನ ಜೀವನದ ಸಾಧಕ ಬಾಧಕಗಳ ಬಗ್ಗೆ ಯೋಚಿಸಬೇಕಾಗುತ್ತದೆ. ಯಾವ ಸಮಾಜ ತಮ್ಮನ್ನು ಸ್ವೀಕರಿಸುತ್ತದೆ ಎಂಬುದರಿಂದ ಹಿಡಿದು ಇತರ ಸವಾಲುಗಳನ್ನೂ ಎದುರಿಸಬೇಕಾಗುತ್ತದೆ.