ಗ್ಯಾಜೆಟ್

ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ..? ಕೂಡಲೆ ತೆಗೆದುಬಿಡಿ..!

831

ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್‌ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್‌ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್‌ನ್ನು ನೀವು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್‌ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.

1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)

ಗೂಗಲ್ ಪ್ಲೇಸ್ಟೋರ್‌ನಲ್ಲಿ ಇರುವ ಈ ಆಪ್‌‍ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್‌ನಲ್ಲಿದ್ದರೆ ಕೂಡಲೆ ಅನ್‌ಇನ್‌ಸ್ಟಾಲ್ ಮಾಡಿ.

2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್‌ನಲ್ಲಿರುವ ಈ ಆಪ್‌ನಲ್ಲಿ ಮಾಲ್‌ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್‌ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.

3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್‌ನ್ನು 50 ಸಾವಿರ ಮಂದಿ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.

5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್‌ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್‌ಇನ್‌ಸ್ಟಾಲ್ ಮಾಡಿಬಿಡಿ.

6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್‌ನ್ನು 50 ಸಾವಿರ ಮಂದಿ ಈಗಾಗಲೆ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್‌ನಲ್ಲೂ ಸಹ ಮಾಲ್‌ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್‌ನಿಂದ ಕೂಡಲೆ ತೆಗೆದುಬಿಡಿ.

7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.

8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್‌ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್‍ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.

10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್‍ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.

11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…

  • ಸುದ್ದಿ

    ಕೇಂದ್ರ ಸರ್ಕಾರದ ಆದೇಶ, ಏರ್‌ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ,.!

    ಸರಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಏರ್‌ ಇಂಡಿಯಾ ಹಾಗೂ ತೈಲ ಸಂಸ್ಕರಣಾ ಸಂಸ್ಥೆ ಭಾರತ್ ಪೆಟ್ರೋಲಿಯಂ ನಿಗಮ ಶೀಘ್ರದಲ್ಲೇ ಮಾರಾಟವಾಗಲಿದೆ. ನಷ್ಟದಲ್ಲಿರುವ ಈ ಎರಡೂ ಸಂಸ್ಥೆಗಳನ್ನುಮಾರಾಟ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಮುಂದಿನ ವರ್ಷ ಮಾರ್ಚ್‌ ಒಳಗೆಎರಡೂ ಸಂಸ್ಥೆಗಳನ್ನು ಮಾರಾಟ ಮಾಡಲು ನಿರ್ಧರಿಸಲಾಗಿದೆಎಂದು ಕೇಂದ್ರ ಹಣಕಾಸು ಸಚಿವೆನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಮೂಲಕ ಪ್ರಸಕ್ತಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ1 ಲಕ್ಷ ಕೋಟಿ ರೂ. ಹೆಚ್ಚುವರಿಹಣ ಸೇರ್ಪಡೆಯಾಗಲಿದೆ. ಏರ್‌ ಇಂಡಿಯಾ ಹಾಗೂ ಭಾರತ್ಪೆಟ್ರೋಲಿಯಂ ಸಂಸ್ಥೆಗಳನ್ನು ಖರೀದಿಸಲು ಹೂಡಿಕೆದಾರರು ಭಾರೀ ಆಸಕ್ತಿವಹಿಸಿದ್ಧಾರೆ ಎಂದುನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಆದ್ರೆ, ಕೇಂದ್ರ…

  • ಸುದ್ದಿ

    ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!ಪರೀಕ್ಷೆ ಬರೆಯುವ ವಿಧ್ಯಾರ್ಥಿಗಳಿಗೆ ಇದು ಉಚಿತ…

    ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್‍ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ರಾಜಕೀಯ

    ನ್ಯಾಯ ಸಿಗದೇ ಆತ್ಮಹತ್ಯಗೆ ಪ್ರಯತ್ನಿಸಿ ಆಸ್ಪತ್ರೆ ಸೇರಿದ ಶಾಸಕ..!

    ಮಾಜಿ ಸಚಿವ ಹಾಗೂ ಹೊಸದುರ್ಗ ಹಾಲಿ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದೆ. ಮರಳು ಸಾಗಿಸಲು ಪರ್ಮಿಟ್ ಪಡೆದರು ಪೊಲೀಸರು ಅನಗತ್ಯವಾಗಿ ತಮ್ಮ ಬೆಂಬಲಿಗರ ವಿರುದ್ಧ ಕೇಸ್ ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಹೊಸದುರ್ಗ ಪೊಲೀಸ್ ಠಾಣೆ ಮುಂದೆ ಗೂಳಿಹಟ್ಟಿ ಶೇಖರ್ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ ಶಿವಮೊಗ್ಗ  ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಜೊತೆ…

  • inspirational

    ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸಬೇಕಾಗಿದ್ದ ಆ ಸಿನಿಮಾ ನಿಂತಿದ್ದೇಕೆ? ಇಂದ್ರಜಿತ್ ಬಿಚ್ಚಿಟ್ರು ಮೂಲ ಕಾರಣ.

    ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್‌ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…