ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ ತೆಗೆದುಹಾಕಿದೆ. ಆದರೂ ಇನ್ನೂ ಸಾಕಷ್ಟು ಆಪ್ಸ್ ಇವೆಯಂತೆ. ಅಂತಹವುಗಳಲ್ಲಿ ಕೆಲವನ್ನು ಇಲ್ಲಿ ನೀಡುತ್ತಿದ್ದೇವೆ. ಇವುಗಳಲ್ಲಿ ಯಾವುದಾದರೂ ಆಪ್ನ್ನು ನೀವು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದರೆ ಕೂಡಲೆ ತೆಗೆದುಬಿಡಿ. ಇಲ್ಲದಿದ್ದರೆ ಎಷ್ಟೋ ಬೆಲೆಬಾಳುವ ನಿಮ್ಮ ವೈಯಕ್ತಿಕ ಮಾಹಿತಿ, ಬ್ಯಾಂಕಿಂಗ್ ವಿವರಗಳು ಹ್ಯಾಕರ್ಗಳ ಪಾಲಾಗುವ ಅಪಾಯವಿದೆ. ಆ ಆಪ್ಸ್ ಯಾವುದು ಎಂದು ಈಗ ನೋಡೋಣ.
1. ಗೈಡ್ ಫಾರ್ ಫಿಫಾ ಮೊಬೈಲ್ (Guide for FIFA Mobile)
ಗೂಗಲ್ ಪ್ಲೇಸ್ಟೋರ್ನಲ್ಲಿ ಇರುವ ಈ ಆಪ್ನಲ್ಲಿ ವೈರಸ್ ಇದೆ. ಇದನ್ನು ಕೂಡಲೆ ತೆಗೆದುಬಿಡಿ. ಈಗಾಗಲೆ ಇದನ್ನು ಲಕ್ಷದಷ್ಟು ಜನ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ನಿಮ್ಮ ಡಿವೈಸ್ನಲ್ಲಿದ್ದರೆ ಕೂಡಲೆ ಅನ್ಇನ್ಸ್ಟಾಲ್ ಮಾಡಿ.
2. ಗೈಡ್ ಫಾರ್ ಲೆಗೋ ನೆಕ್ಸೋ ನೈಟ್ಸ್ (Guide for LEGO Nexo Knights)
ಪ್ಲೇ ಸ್ಟೋರ್ನಲ್ಲಿರುವ ಈ ಆಪ್ನಲ್ಲಿ ಮಾಲ್ವೇರ್ ಇದೆ. ಇದನ್ನು ಈಗಾಗಲೆ 50 ಸಾವಿರಕ್ಕೂ ಅಧಿಕ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ನೀವೂ ಡೌನ್ಲೋಡ್ ಮಾಡಿಕೊಂಡಿದ್ದರೆ ಕೂಡಲೆ ರಿಮೂವ್ ಮಾಡಿ.
3. ಗೈಡ್ ಫಾರ್ ರೋಲಿಂಗ್ ಸ್ಕೈ (Guide for Rolling sky)
ಇದನ್ನು 10 ಸಾವಿರ ಮಂದಿ ಬಳಕೆದಾರರು ಈಗಾಗಲೆ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಈ ಆಪ್ ಸಹ ಅಪಾಯಕಾರಿ. ಆದಕಾರಣ ಇದನ್ನೂ ತೆಗೆದುಬಿಡಿ.

4. ಗೈಡ್ ಫಾರ್ ಲೆಗೋ ಸಿಟಿ ಮೈ ಸಿಟಿ (Guide for LEGO City My City)
ಈ ಆಪ್ನ್ನು 50 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿಯಾದ ಆಪ್. ಕೂಡಲೆ ತೆಗೆದುಬಿಡಿ.
5. ಗೈಡ್ ಫಾರ್ ಪೋಕಿಮಾನ್ ಗೋ (Guide for Pokemon GO)
ಪೋಕಿಮಾನ್ ಗೇಮ್ಗೆ ಸೇರಿದ ಗೈಡ್ ಆಪ್ ಆಗಿರುವ ಇದು ಪ್ಲೇಸ್ಟೋರಲ್ಲಿದೆ. ಇದನ್ನು ಲಕ್ಷ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಆದಕಾರಣ ಇದನ್ನು ಅನ್ಇನ್ಸ್ಟಾಲ್ ಮಾಡಿಬಿಡಿ.
6. ಗೈಡ್ ಡ್ರೀಮ್ ಲೀಗ್ ಸಾಕರ್ (Guide Dream League Soccer)
ಈ ಆಪ್ನ್ನು 50 ಸಾವಿರ ಮಂದಿ ಈಗಾಗಲೆ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಈ ಆಪ್ನಲ್ಲೂ ಸಹ ಮಾಲ್ವೇರ್ ಇದೆ. ಆದಕಾರಣ ಇದನ್ನು ನಿಮ್ಮ ಫೋನ್ನಿಂದ ಕೂಡಲೆ ತೆಗೆದುಬಿಡಿ.
7. ಲೀಗೈಡ್ ಲೆಗೋ ಸಿಟಿ ಅಂಡರ್ ಕವರ್ (LEGUIDE LEGO City Undercover)
ಇದು ಸಹ ಅಪಾಯಕಾರಿ ಆಪ್. ಇದನ್ನು ಈಗಾಗಲೆ 50 ಸಾವಿರ ಮಂದಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ನೀವು ಸಹ ಆ ಕೆಲಸ ಮಾಡಿದ್ದರೆ ಕೂಡಲೆ ತೆಗೆದುಬಿಡಿ.
8. ಗೈಡ್ ಫರ್ ಕಾಡಿಲ್ಲಾಕ್ಸ್ (Guide for Cadillacs)
ಇದನ್ನು 10 ಸಾವಿರ ಮಂದಿವರೆಗೂ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ವೈರಸ್ ಇರುವುದಾಗಿ ಗುರುತಿಸಲಾಗಿದೆ. ಆದಕಾರಣ ಇದನ್ನು ಇನ್ಸ್ಟಾಲ್ ಮಾಡಿಕೊಂಡಿರುವವರು ಕೂಡಲೆ ತೆಗೆದುಬಿಡಿ.

9. ಲೀ ಗೈಡ್ ಲೆಗೋ ಸಿಟಿ ಮೈ ಸಿಟಿ (LEGUIDE LEGO City My City)
ಇದನ್ನು 10 ಸಾವಿರ ಮಂದಿ ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದು ಸಹ ಅಪಾಯಕಾರಿ ಆಪ್. ಇದನ್ನು ಕೂಡಲೆ ತೆಗೆದುಬಿಡಿ.
10. ಗೈಡ್ ಫಾರ್ ಫೀಫಾ 17 (Guide For FIFA 17)
ಈ ಆಪ್ ಸಹ 50 ಸಾವಿರ ಮಂದಿ ಬಳಕೆದಾರರು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಇದರಲ್ಲೂ ಮಾಲ್ವೇರ್ ಇದೆ. ಆದಕಾರಣ ಇದನ್ನೂ ಸಹ ತೆಗೆದುಬಿಡಿ.
11. ಗೈಡ್ ಫಾರ್ ಸ್ಲಿತರ್.ಐಓ (Guide for slither.io)
ಸುಮಾರು 1 ಲಕ್ಷ ಮಂದಿ ಬಳಕೆದಾರರು ಈ ಆಪನ್ನು ಡೌನ್ಲೋಡ್ ಮಾಡಿಕೊಂಡಿದ್ದಾರೆ. ಆ ರೀತಿ ನೀವು ಮಾಡಿದ್ದರೆ ಕೂಡಲೆ ಈ ಆಪನ್ನು ತೆಗೆದುಬಿಡುವುದು ಒಳ್ಳೆಯದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನನ್ ಎಕ್ಕಡ’ ಡೈಲಾಗ್’ನಿಂದ್ಲೇ ಫೇಮಸ್ ಆಗಿರುವ ಹುಚ್ಚ ವೆಂಕಟ್ ಹ್ಯಾಟ್ರಿಕ್ ಹಿರೋ, ಸೆಂಚುರಿ ಸ್ಟಾರ್ ಶಿವಣ್ಣ ವಿರುದ್ದ ವೀಡಿಯೋ ಮೂಲಕ ತಿರುಗಿ ಬಿದ್ದಿದ್ದಾರೆ.
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.