ಸುದ್ದಿ

ಈ ಎರಡು 2 ಆ್ಯಪ್ ನಿಮ್ಮಲ್ಲಿದ್ದರೆ ಸಾಕು, ದುಬಾರಿ ದಂಡದಿಂದ ಬಚಾವ್ ಆಗಬಹುದು,.! ಇಲ್ಲಿದೆ ನೋಡಿ ಮಾಹಿತಿ!

48

ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್‌ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್‌ನಿಂದ ಬಚಾವ್ ಆಗಬಹುದು.

ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ  ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ ಒಯ್ಯಲು ಸಾಧ್ಯವೆ. ಹೀಗಾಗಿ  ಮೊಬೈಲ್‌ನಲ್ಲಿ ಡಿಜಿಲಾಕರ್ ಅಥವಾ ಪರಿವಾಹನ ಆ್ಯಪ್ ಡೌನ್‌ಲೋಡ್ ಮಾಡಿ, ನಿಮ್ಮ ದಾಖಲೆಗಳ ಪ್ರತಿಯನ್ನು ಸೇವ್ ಮಾಡಿ ಇಟ್ಟುಕೊಳ್ಳಬಹುದು. ಇದನ್ನು ತೋರಿಸಿದರೆ ಸಾಕು ದುಬಾರಿ ದಂಡದಿಂದ ಪಾರಾಗಬಹುದು.

ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ಡೌನ್‌ಲೋಡ್ ಮಾಡಿ ನಿಮ್ಮ ಆಧಾರನ್ನು ಲಿಂಕ್ ಮಾಡಬೇಕು. ಬಳಿಕ ಡ್ರೈವಿಂಗ್ ಲೈಸೆನ್ಸ್, ಇನ್ಶೂರೆನ್ಸ್, ಎಮಿಶನ್, ರಿಜಿಸ್ಟ್ರೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಅಧೀಕೃತ ಇಲಾಖೆಯಿಂದ ನಿಮ್ಮ ಆ್ಯಪ್ಗೆ ವರ್ಗಾಯಿಸಬೇಕು. ಉದಾಹರಣೆಗೆ ಕರ್ನಾಟಕ ಸಾರಿಗೆ ಇಲಾಖೆ ಆಯ್ಕೆ ಮಾಡಿ, ನಿಮ್ಮ ಡ್ರೈವಿಂಗ್ ಲೈಸೆನ್ಸ್ ನಂಬರ್ ನಮೂದಿಸಿದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ಆ್ಯಪ್‌ಗೆ ವರ್ಗಾಣವಣೆಯಾಗಲಿದೆ.

ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಪರಿಗಣಿಸುವುದಿಲ್ಲ. ಪೊಲೀಸರು ಕೇಳಿದಾಗ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್ ‌ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ತೋರಿಸಿದರೆ ಸಾಕು. ಇದು ಆಧೀಕೃತ. ಟೆಕ್ನಾಲಜಿ ಆ್ಯಕ್ಟ್ 2000  ಪ್ರಕಾರ ಡಿಜಿಲಾಕರ್ ಅಥವಾ mಪರಿವಾಹನ ಆ್ಯಪ್‌ನಲ್ಲಿ ಸೇವ್ ಮಾಡಿದ ದಾಖಲೆಗಳನ್ನು ಮೂಲ ಪ್ರತಿ ಎಂದು ಪರಿಗಣಿಸಲಾಗುತ್ತೆ ಎಂದು ಕೇಂದ್ರ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ಹೊಸ ವರ್ಷದ ದಿನದಂದು ಜನಿಸಿದ ಮೊದಲ ಹೆಣ್ಣುಮಕ್ಕಳಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    “ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…

  • ಆರೋಗ್ಯ

    ಈ ಕಾರಣಗಳಿಂದ ಮೈಗ್ರೇನ್‌ ತಲೆನೋವು ಬರುತ್ತದೆ..!ಇದರ ನಿವಾರಣೆ ಹೇಗೆ?ತಿಳಿಯಲು ಈ ಲೇಖನ ಓದಿ…

    ಮೈಗ್ರೇನ್‌ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • ಸಿನಿಮಾ, ಸುದ್ದಿ

    ತನಗಿಂತ ಚಿಕ್ಕವಯಸ್ಸಿನ ನಟರನ್ನು ಮದುವೆಯಾದ ಟಾಪ್ ಸಿನಿಮಾ ನಟಿಯರು!

    ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ?  ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…