News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

369

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(8 ನವೆಂಬರ್, 2018) ಹರ್ಷಚಿತ್ತದಿಂದಿರಿ ಹಾಗೂ ಪ್ರೀತಿಯಲ್ಲಿನ ಏಳುಬೀಳುಗಳನ್ನು ಎದುರಿಸುವ ಧೈರ್ಯ ಹೊಂದಿರಿ. ಇಂದುಮಾಡಿದ…

  • ಸುದ್ದಿ

    ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

    ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ. ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ…

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…