News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

369

ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

ಡೆತ್ ಕಣಿವೆಯಲ್ಲಿನ ಕಲ್ಲುಗಳು ತಮ್ಮದೆ ಆದ ನೌಕಾಯಾನವನ್ನು ನಡೆಸುತ್ತವೆ. ಈ ಕುರಿತು ಹಲವಾರು ಸಿದ್ಧಾಂತಗಳನ್ನು ಹಾಗೂ ವಿವರಣೆಗಳನ್ನು ನೀಡಲಾಗುತ್ತದೆ. ಆದರೆ ಅವು ಯಾವುದೂ ನಿಜವಾದ ತರ್ಕವನ್ನು ಒದಗಿಸುವಲ್ಲಿ ಯಶಸ್ವಿಯಾಗಲಿಲ್ಲ ಎಂದು ಹೇಳಲಾಗುತ್ತಿದೆ.

ಅತಿ ಹೆಚ್ಚು ಬಿಸಿ ಇರುವ ಪ್ರದೇಶ:-

ಡೆತ್ ವ್ಯಾಲಿ ಎನ್ನುವುದು ಒಂದು ಮರುಭೂಮಿಯ ಕಣಿವೆ. ಇದು ಕ್ಯಾಲಿಫೋರ್ನಿಯಾದಲ್ಲಿದೆ. ಇದನ್ನು ಡೆತ್ ವ್ಯಾಲಿ ಹಾಗೂ ಅತ್ಯಂತ ಬಿಸಿ ಅಥವಾ ತಾಪಮಾನ ಇರುವ ಪ್ರದೇಶ ಎಂದು ಹೇಳಲಾಗುತ್ತದೆ.

ಈ ಪ್ರದೇಶವು ಸುಮಾರು ಒಂದು ಶತಮಾನಗಳಷ್ಟು ಹಿಂದಿನ ರಹಸ್ಯ ಕಥೆಯನ್ನು ಒಳಗೊಂಡಿದೆ.

ಕಲ್ಲುಗಳು ತಾವಾಗಿಯೇ ಚಲಿಸುತ್ತವೆ:-

ಈ ಪ್ರದೇಶದಲ್ಲಿರುವ ಕಲ್ಲುಗಳು ತಾವಾಗಿಯೇ ಚಲಿಸುತ್ತವೆ ಎಂದು ಸಂಶೋಧಕರು ಹೇಳುತ್ತಾರೆ. ಆ ಕಲ್ಲನ್ನು ನೋಡುತ್ತಿರುವಾಗ ಅವು ಚಲಿಸುವುದಿಲ್ಲ. ಯಾರು ಇಲ್ಲದ ಸಮಯದಲ್ಲಿ ಚಲಿಸುತ್ತವೆ ಎಂದು ಹೇಳಲಾಗುತ್ತದೆ.

ಕಲ್ಲುಗಳು ಚಲಿಸುವ ಸ್ಥಳವನ್ನು “ರೇಟ್ರ್ಯಾಕ್ ಪ್ಲಾಯಾ” ಎಂದು ಕರೆಯುತ್ತಾರೆ. ಇದನ್ನು ತೇಲುವ ಕಲ್ಲುಗಳಿಗೆ ಹೆಸರಾದ ಒಣ ಸ್ಥಳ ಎಂತಲೂ ಕರೆಯುತ್ತಾರೆ.

ಇದು ರಹಸ್ಯವಾಗಿದೆ:-

ಈ ಒಣ ನೆಲದ ಮೇಲೆ ಕಲ್ಲುಗಳು ಸಾಗಿರುವ ಗುರುತನ್ನು ಕಾಣಬಹುದು. ಯಾವ ಮಾರ್ಗವಾಗಿ ಹೋಗಿದೆ ಎನ್ನುವುದನ್ನು ಸಹ ನಮಗೆ ಗೋಚರವಾಗುತ್ತದೆ. ಈ ಕಲ್ಲನ್ನು ಚಲಿಸಲು ಯಾವುದೇ ವ್ಯಕ್ತಿಯ ಬಲವನ್ನು ಬಳಸುವುದಿಲ್ಲ.

ಈ ಕ್ರಿಯೆಯು ತಾನಾಗಿಯೇ ನೈಸರ್ಗಿಕವಾಗಿ ನಡೆಯುತ್ತದೆ.

ನೋಡುವಾಗ ಕಾಣಿಸುವುದಿಲ್ಲ:-

ಯಾರಾದರೂ ನೋಡುವಾಗ ಈ ಕಲ್ಲುಗಳು ಚಲಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಇದು ನಿಜಕ್ಕೂ ಒಂದು ಆಶ್ಚರ್ಯಕರವಾದ ಸಂಗತಿಯಾಗಿದೆ. ಇನ್ನೊಂದು ವಿಚಾರವೆಂದರೆ ಇಲ್ಲಿರುವ ಎಲ್ಲಾ ಕಲ್ಲುಗಳು ಚಲಿಸುವುದಿಲ್ಲ. ಕೆಲವು ಕಲ್ಲುಗಳು ಮಾತ್ರ ಮುಂದೆ ಸಾಗುತ್ತವೆ ಎಂದು ಪರೀಕ್ಷಿಸಲಾಗಿದೆ.

ಚಲಿಸುವ ಕಲ್ಲುಗಳು ಸುಮಾರು 2-3 ವರ್ಷಗಳಿಗೊಮ್ಮೆ ಚಲಿಸುತ್ತವೆ. ಅಲ್ಲದೆ ಎಲ್ಲಾ ಕಲ್ಲುಗಳು ಒಂದೇ ಮಾರ್ಗದಲ್ಲಿ ಚಲಿಸುವುದಿಲ್ಲ. ಈ ಕಲ್ಲುಗಳು ಕಾಂತೀಯ ಪರಿಣಾಮದಿಂದ ಚಲಿಸುತ್ತದೆ ಎಂದು ನಂಬಲಾಗಿದೆ.

ವಿವಿಧ ಸಿದ್ಧಾಂತಗಳು:-

ಈ ಸ್ಥಳದಲ್ಲಿ ನಡೆಯುವ ಅಪರೂಪದ ವಿದ್ಯಮಾನದ ಬಗ್ಗೆ ಹಲವಾರು ಸಿದ್ಧಾಂತಗಳಿವೆ. ಡೆತ್ ವ್ಯಾಲಿಯಲ್ಲಿ ಬಲವಾದ ಗಾಳಿ ಬೀಸುತ್ತದೆ. ಅದರಿಂದಲೇ ಕಲ್ಲುಗಳು ಚಲಿಸುತ್ತವೆ ಎಂದು ಅನೇಕರು ಅಭಿಪ್ರಾಯಿಸುತ್ತಾರೆ.

ಗಾಳಿಗೆ ಚಲಿಸುವುದಾದರೆ ಕಲ್ಲು ಮಾತ್ರ ಏಕೆ ಚಲಿಸುತ್ತದೆ? ಎನ್ನುವುದು ಪ್ರಶ್ನೆಯಾಗಿದೆ.

ಇದು ಇನ್ನೂ ರಹಸ್ಯವಾಗಿಯೇ ಉಳಿದಿದೆ:-

ಕೆಲವು ಸಿದ್ಧಾಂತಗಳು ಮತ್ತು ಸಂಶೋಧನೆಗಳು ಗಾಳಿ ಮತ್ತು ಉಷ್ಣತೆಯ ಸಂಯೋಜನೆಯಿಂದ ಈ ವಿದ್ಯಮಾನ ಉಂಟಾಗುತ್ತದೆ ಎಂದು ಹೇಳುತ್ತವೆ.

ಈ ತೇಲುವ ಕಲ್ಲುಗಳು ಮಣ್ಣಿನ ಮೇಲ್ಮೈಗಳಲ್ಲಿ ಅಂಕುಡೊಂಕಾದ ಹಾದಿಯನ್ನು ಮಾಡುತ್ತದೆ. ಈ ವಿಚಾರವನ್ನು ತಿಳಿಯಲು ವರ್ಷಗಳಕಾಲ ಅಲ್ಲೇ ಕುಳಿತು ಅಧ್ಯಯನ ನಡೆಸಬೇಕಷ್ಟೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…